ಎರಡನೇ ಟೆಸ್ಟ್‌ | ಶತಕ ಸಿಡಿಸಿ ಮಿಂಚಿದ ಯುವ ಆಟಗಾರ ಯಶಸ್ವಿ ಜೈಸ್ವಾಲ್; ಬೃಹತ್ ಮೊತ್ತದತ್ತ ಟೀಮ್ ಇಂಡಿಯಾ

Date:

Advertisements

ವಿಶಾಖಪಟ್ಟಣದ ಡಾ. ವೈ ಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರ ಆಕರ್ಷಕ ಶತಕದ ನೆರವಿನಿಂದ ಟೀಮ್ ಇಂಡಿಯಾ ಉತ್ತಮ ಮೊತ್ತದತ್ತ ದಾಪುಗಾಲಿಡುತ್ತಿದೆ.

ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ವಿಕೆಟ್ ಕಳೆದುಕೊಂಡ ಬಳಿಕ ಶ್ರೇಯಸ್ ಅಯ್ಯರ್ ಜೊತೆಗೂಡಿ ಭರ್ಜರಿ ಬ್ಯಾಟಿಂಗ್ ಮಾಡಿದ ಯಶಸ್ವಿ ಜೈಸ್ವಾಲ್ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 151 ಎಸೆತಗಳಲ್ಲಿ ಜೈಸ್ವಾಲ್ ಬ್ಯಾಟ್​ನಿಂದ ಶತಕ ಮೂಡಿಬಂತು. ಇದು ಅವರ ಎರಡನೇ ಅಂತಾರಾಷ್ಟ್ರೀಯ ಟೆಸ್ಟ್ ಶತಕವಾಗಿದೆ. ಜೈಸ್ವಾಲ್ ಬಾರಿಸಿದ ಎರಡನೇ ಟೆಸ್ಟ್ ಶತಕದ ನೆರವಿನಿಂದ ಟೀಂ ಇಂಡಿಯಾ, ಮೊದಲ ದಿನದಾಟದಲ್ಲೇ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ.

ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಮೊದಲ ಪಂದ್ಯದಲ್ಲಿ ಸೋತು ಆಘಾತಕ್ಕೊಳಗಾಗಿದ್ದ ಟೀಂ ಇಂಡಿಯಾ, ಎರಡನೇ ಟೆಸ್ಟ್ ಪಂದ್ಯದಲ್ಲಿ ಎಚ್ಚರಿಕೆಯ ಆರಂಭ ಪಡೆಯಿತು.

Advertisements

ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ 17.3 ಓವರ್‌ಗಳಲ್ಲಿ 40 ರನ್‌ಗಳ ಜತೆಯಾಟವಾಡಿದರು. ರಕ್ಷಣಾತ್ಮಕ ಆಡವಾಡಿದ ನಾಯಕ ರೋಹಿತ್ ಶರ್ಮಾ 41 ಎಸೆತಗಳನ್ನು ಎದುರಿಸಿ 14 ರನ್ ಗಳಿಸಿ, ಇಂಗ್ಲೆಂಡ್ ಪರ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡುತ್ತಿರುವ ಶೋಯೆಬ್ ಬಶೀರ್‌ ಬೌಲಿಂಗ್‌ನಲ್ಲಿ ಓಲಿ ಪೋಪ್‌ಗೆ ಕ್ಯಾಚ್ ನೀಡುವ ಮೂಲಕ ವಿಕೆಟ್ ಒಪ್ಪಿಸಿದರು.

ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಶುಭ್‌ಮನ್ ಗಿಲ್ ಜತೆಯಾದ ಯಶಸ್ವಿ ಜೈಸ್ವಾಲ್ ಆಕರ್ಷಕ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. ಮೊದಲ ದಿನದಿಂದಲೇ ತಿರುವು ಪಡೆಯುವ ಮುನ್ಸೂಚನೆ ನೀಡುತ್ತಿರುವ ಪಿಚ್‌ನಲ್ಲಿ ತಮ್ಮ ಬ್ಯಾಟಿಂಗ್ ಪ್ರತಿಭೆ ಅನಾವರಣ ಮಾಡಿರುವ ಜೈಸ್ವಾಲ್ ಟೆಸ್ಟ್ ವೃತ್ತಿಜೀವನದ ಎರಡನೇ ಟೆಸ್ಟ್ ಶತಕ ಸಿಡಿಸಿ ಸಂಭ್ರಮಿಸಿದರು.

ಇಂಗ್ಲೆಂಡ್ ಬೌಲಿಂಗ್ ಪಡೆಯ ಎದುರು ದಿಟ್ಟ ಪ್ರದರ್ಶನ ತೋರಿದ ಜೈಸ್ವಾಲ್ ಕೇವಲ 151 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ ಶತಕ ದಾಖಲಿಸುವಲ್ಲಿ ಯಶಸ್ವಿಯಾದರು. 94 ರನ್ ಗಳಿಸಿದ್ದಾಗ, ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ 7 ವಿಕೆಟ್ ಪಡೆದು ಮಿಂಚಿದ್ದ ಟಾಮ್ ಹಾರ್ಟ್ಲಿ ಬೌಲಿಂಗ್‌ನಲ್ಲಿ ಭರ್ಜರಿ ಸಿಕ್ಸರ್ ಸಿಡಿಸಿ ಎರಡನೇ ಟೆಸ್ಟ್ ಶತಕ ಬಾರಿಸಿದರು.

ಸದ್ಯ ಚಹಾ ವಿರಾಮ ಮುಗಿದಿದ್ದು, ಟೀಮ್ ಇಂಡಿಯಾ 71 ಓವರ್‌ಗಳ ಅಂತ್ಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 249 ರನ್ ದಾಖಲಿಸಿದೆ. ಈವರೆಗೆ ಇಂಗ್ಲೆಂಡ್ ಪರ ಶೋಯೆಬ್ ಬಶೀರ್‌, ಆ್ಯಂಡರ್‌ಸರ್ ಹಾಗೂ ಟಾಮ್ ಹಾರ್ಟ್ಲಿ, ರೆಹಾನ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X