ದಾವಣಗೆರೆ | ಆಂಗ್ಲ ನಾಮಫಲಕಗಳ ತೆರವುಗೊಳಿಸಿ ಶೇ ೬೦ ಕನ್ನಡ ಬಳಸಿ: ಕರವೇ ರಾಮೇಗೌಡ ಎಚ್ಚರಿಕೆ

Date:

Advertisements

“ಡಿಸೆಂಬರ್ ೨೭ ರಂದು ಕಳೆದ ವರ್ಷ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣ ಗೌಡ ನೇತೃತ್ವದಲ್ಲಿ ಹೋರಾಟದ ನಡೆಸಿದ ಫಲವಾಗಿ ರಾಜ್ಯ ಸರ್ಕಾರ ೬೦ ಮತ್ತು ೪೦ ಅನುಪಾತದಲ್ಲಿ ಶೇಕಡ ೬೦ ರಷ್ಟು ಕನ್ನಡದಲ್ಲಿ ನಾಮಫಲಕಗಳನ್ನು ಹಾಕಬೇಕೆಂದು ಸರ್ಕಾರ ಆದೇಶ ಮಾಡಿದೆ. ಕೆಲವು ಕಾಲ ಆದೇಶ ಪಾಲಿಸುವಂತೆ ನಾಟಕ ಮಾಡಿದ ಕೆಲವು ಸಂಸ್ಥೆ, ವ್ಯಾಪಾರಿಗಳು ಮತ್ತು ಹೊಸ ಉದ್ದಿಮೆದಾರರು ಪುನಃ ಕನ್ನಡ ಕಡೆಗಣನೆ ಮಾಡಿ ಆಂಗ್ಲಫಲಕ ಹೆಚ್ಚಾಗಿ ಬಳಕೆ ಮಾಡಿದ್ದಾರೆ. ಮತ್ತೆ ತಲೆಯೆತ್ತಿದ ಆಂಗ್ಲ ನಾಮಫಲಕಗಳ ತೆರವುಗೊಳಿಸಿ, ಶೇ ೬೦ ಕನ್ನಡ ಬಳಸಬೇಕು. ಇಲ್ಲದಿದ್ದರೆ (ಕರವೇ) ಕರ್ನಾಟಕ ರಕ್ಷಣಾ ವೇದಿಕೆಯಿಂದಲೇ ನಾಮಫಲಕ ತೆರವು ಅಥವಾ ಕಿತ್ತು ಹಾಕುವ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಕರವೇ ಜಿಲ್ಲಾಧ್ಯಕ್ಷ ರಾಮೇಗೌಡ ಎಚ್ಚರಿಸಿದರು.

1002741277

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಕರ್ನಾಟಕ ರಕ್ಷಣಾ ವೇದಿಕೆ ಹಲವಾರು ವರ್ಷಗಳಿಂದ ಆಂಗ್ಲ ನಾಮಫಲಕಗಳ ಮತ್ತು ಪರಭಾಷೆಗಳ ಫಲಕಗಳ ವಿರುದ್ಧ ಹೋರಾಟ ನಡೆಸುತ್ತಾ ಬಂದಿದೆ. ಇದರ ಜೊತೆಗೆ ಕಳೆದ ವರ್ಷ ನಡೆಸಿದ ಹೋರಾಟದಿಂದ ಸರ್ಕಾರ ಕನ್ನಡಪರ ಆದೇಶ ಹೊರಡಿಸಿದೆ. ಅದರಂತೆ ಜಿಲ್ಲಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು ಆದೇಶ ನೀಡಿದ್ದರೂ ಸಹ ಕೆಲವು ಅಂಗಡಿಯ ನಾಮಫಲಕಗಳು, ಜಾಹೀರಾತು ಫಲಕಗಳು, ಬ್ಯಾಂಕು ಮತ್ತು ವಿಮಾ ಕಂಪನಿಗಳು ಆಂಗ್ಲ ನಾಮಫಲಕವನ್ನು ಹಾಕಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆಯು ಖಂಡಿಸುತ್ತದೆ” ಎಂದು ಕಿಡಿಕಾರಿದರು.

“ಮಹಾನಗರ ಪಾಲಿಕೆ ಆಯುಕ್ತರು ಕೂಡಲೇ ನಗರದಲ್ಲಿರುವ ಜಾಹೀರಾತು ಫಲಕಗಳು ಮತ್ತು ಅಂಗಡಿ, ಬ್ಯಾಂಕಿನ ನಾಮಫಲಕಗಳು ತೆರವುಗೊಳಿಸಿ ಶೇಕಡ ೬೦ ರಷ್ಟು ಕನ್ನಡದಲ್ಲಿ ನಾಮಫಲಕಗಳನ್ನು ಹಾಕಿಸಬೇಕು. ಇಲ್ಲವಾದರೆ ಶೀಘ್ರದಲ್ಲೇ ಕರ್ನಾಟಕ ರಕ್ಷಣಾ ವೇದಿಕೆ ಅಂತಹ ನಾಮಫಲಕಗಳನ್ನು ಕಿತ್ತು ಹಾಕಲು ಹೋರಾಟ ಹಮ್ಮಿಕೊಳ್ಳಲಾಗುವುದು” ಎಚ್ಚರಿಕೆ ನೀಡಿದ್ದಾರೆ.

1002740016

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X