ಕಾದ ಇಳೆಗೆ ತಂಪೆರೆದ ಮಳೆ: ರಾಜ್ಯದ ಜನರ ಮೊಗದಲ್ಲಿ ಮಂದಹಾಸ

Date:

Advertisements

ರಾಜ್ಯದಲ್ಲಿ ಬಿರು ಬೇಸಿಗೆಗೆ ಬೆಂದು ಹೋಗಿದ್ದ ಜನಕ್ಕೆ ಇದೀಗ ಮಳೆ ತಂಪೆರೆದಿದೆ. ಏ.12ರಂದು ದಾವಣಗೆರೆ, ಬೆಳಗಾವಿ, ವಿಜಯಪುರ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಜನರ ಮೊಗದಲ್ಲಿ ಮಂದಹಾಸ ಮೂಡಿದೆ.

ಬೆಳಗಾವಿ ಸುತ್ತ ಮುತ್ತಲಿನ ವೀರಭದ್ರನಗರ, ಡಿಸಿ ಕಚೇರಿ, ಚೆನ್ನಮ್ಮ ವೃತ್ತ, ಮಹಾಂತೇಶ ನಗರ, ಶ್ರೀನಗರ ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯುತ್ತಿದೆ. ಕಳೆದ 45 ನಿಮಿಷಗಳಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ ಎಂದು ‘ಆಲ್‌ ಅಬೌಟ್ ಬೆಳಗಾವಿ’ ಟ್ವೀಟ್ ಮಾಡಿದೆ.

ಹಾಸನ ಜಿಲ್ಲೆಯ ಬಿಕ್ಕೋಡು, ಬೇಲೂರು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಗ್ರಾಮದಲ್ಲಿ ಈ ವರ್ಷದ ಮೊದಲ ಮಳೆ ಸುರಿದಿದೆ.

Advertisements

ಈ ಸುದ್ದಿ ಓದಿದ್ದೀರಾ? ಹಾಸನ | ಪ್ರಜ್ವಲ್‌ ಪರ ಪ್ರಚಾರ; ಬಿಜೆಪಿಗರ ಮೇಲೆ ಬಿಜೆಪಿಗರಿಂದಲೇ ಹಲ್ಲೆ?

ಬಳ್ಳಾರಿಯಲ್ಲಿ ಸಾಧಾರಣ ಮಳೆಯಾಗಿದೆ. ಅಲ್ಲದೇ, ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಕೆಲವೆಡೆ ಮಳೆ ಸುರಿಯುತ್ತಿದ್ದಂತೆ, ಜನರಲ್ಲಿ ಮಂದಹಾಸ ಮೂಡಿದೆ. ಇಷ್ಟು ದಿನ ಬೇಸಿಗೆ ಬಿಸಿಗೆ ಹಾಗೂ ನೀರಿಲ್ಲದೇ ಪರದಾಡಿದ ಜನರಲ್ಲಿ ಸಂತಸ ಮೂಡಿದೆ.

ಇನ್ನು ವರ್ಷದ ಮೊದಲ ಮಳೆಯನ್ನು ಖುಷಿಯಿಂದ ಬರಮಾಡಿಕೊಳ್ಳುತ್ತಿರುವ ಜನರು ತಮ್ಮ ತಮ್ಮ ಮೊಬೈಲ್‌ಗಳಲ್ಲಿ ಫೋಟೊ, ವಿಡಿಯೋ ಸೆರೆಹಿಡಿದು ಸಂಭ್ರಮಿಸುತ್ತಿದ್ದಾರೆ. ವಾಟ್ಸ್‌ಆ್ಯಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವಿಡಿಯೋ ಶೇರ್ ಮಾಡಿಕೊಂಡು ಸಂಭ್ರಮಿಸುತ್ತಿದ್ದಾರೆ.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X