‘ದೇವಾಲಯದ ತೀರ್ಥ ಪ್ರಸಾದ ಬೇಡ, ಉನ್ನತ ಶಿಕ್ಷಣಕ್ಕಾಗಿ ಬಸ್‌ ಬೇಕು’; ಸಿಎಂಗೆ ಪತ್ರ ಬರೆದ ವಿದ್ಯಾರ್ಥಿನಿ

Date:

Advertisements

“ನಮಗೆ ದೇವಾಲಯದ ತೀರ್ಥಪ್ರಸಾದ ಬೇಡ. ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ಗಳು ಬೇಕು” ಎಂದು ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬಳು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು ಗ್ರಾಮಾಂತರದ ತಾವರಕೆರೆ ವ್ಯಾಪ್ತಿಯ ಸೀಗೆಹಳ್ಳಿಯಲ್ಲಿ ವಾಸವಿರುವ 8ನೇ ತರಗತಿ ವಿದ್ಯಾರ್ಥಿನಿ ವಿ.ವೈ ಹರ್ಷಿಣಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. “ಈ ದೇಶದ ರಾಷ್ಟ್ರಪತಿ ಮಹಿಳೆ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಸುರಕ್ಷತೆ ಸಿಗುವಂತೆ ಮಾಡಿರುವುದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶೀರ್ವಾದ. ಹಾಗಾಗಿ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಶಾಲಾ ಮಕ್ಕಳಿಗೆ ಪ್ರತಿ ಜಿಲ್ಲೆ ಮತ್ತು ತಾಲೂಕು ಹಳ್ಳಿಯ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಬಸ್​ ಆರಂಭಿಸಬೇಕು” ಎಂದು ಮನವಿ ಮಾಡಿದ್ದಾಳೆ.

ವಿದ್ಯಾರ್ಥಿನಿ ಬರೆದ ಪತ್ರದಲ್ಲೇನಿದೆ?

Advertisements

ಸ್ವಾಮಿ, ನಾನು ಕುಮಾರಿ ವಿ.ವೈ.ಹರ್ಷಿನಿ, 8ನೇ ತರಗತಿ ವಿದ್ಯಾರ್ಥಿನಿ. ನಾನು ಮತ್ತು ನನ್ನ ತಾಯಿ ಹಲವು ಬಾರಿ ತಮ್ಮ ಸಂಸ್ಥೆಯ ಅಧಿಕಾರಿಗಳಿಗೆ ತಾವರೆಕೆರೆಯಿಂದ ಮಾಗಡಿ ರಸ್ತೆಯ ಮುಖಾಂತರ ಶ್ರೀನಗರ ಬಸ್ ನಿಲ್ದಾಣಕ್ಕೆ ಸಾರಿಗೆ ಸಂಸ್ಥೆಯ ಬಸ್ ಬಿಡಬೇಕೆಂದು ಮನವಿ ಮಾಡಿಕೊಂಡಿದ್ದೇವೆ. ಈ ಪತ್ರಕ್ಕೆ ಸಂಸ್ಥೆಯ ಅಧಿಕಾರಿಗಳು ಯಾವುದೇ ಉತ್ತರವನ್ನು ನೀಡಿರುವುದಿಲ್ಲ. ಆದರೆ, ಪ್ರತಿ ಗುರುವಾರ ಹಾಗೂ ಭಾನುವಾರ ಸುಮ್ಮನಹಳ್ಳಿಯಿಂದ ಕಡಬಗೆರೆ ಮಾರ್ಗವಾಗಿ ರಾಯರ ಕಾಮದೇನು ದೇವಾಲಯಕ್ಕೆ ಪ್ರತಿ ಗಂಟೆಗೆ ಬಸ್ ಬಿಡಲಾಗುತ್ತಿದೆ.

ಸಿಎಂ 20

ನಮಗೆ ದೇವಾಲಯದ ತೀರ್ಥಪ್ರಸಾದ ಬೇಡ, ನಮಗೆ ಉನ್ನತ ಶಿಕ್ಷಣಕ್ಕಾಗಿ ಸಂಸ್ಥೆಯ ಸಾರಿಗೆ ವಾಹನಗಳು ಬೇಕಾಗಿದೆ. ಈ ದೇಶದ ರಾಷ್ಟ್ರಪತಿ ಮಹಿಳೆ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಸುರಕ್ಷಿತ ಸಿಗುವಂತೆ ಮಾಡಿರುವುದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶೀರ್ವಾದ.

ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಶಾಲಾ ಮಕ್ಕಳಿಗೆ ಪ್ರತಿ ಜಿಲ್ಲೆ ಮತ್ತು ತಾಲೂಕು ಹಳ್ಳಿಯ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಬಸ್​ಗಳನ್ನು ಆರಂಭಿಸಬೇಕು ಎಂದು ಮನವಿ ಮಾಡಿ ಪತ್ರ ಬರೆದಿದ್ದಾಳೆ.

ಈ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಮಾತ್ರವಲ್ಲದೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಬಿಎಂಟಿಸಿ ಎಂಡಿ ರಾಮಚಂದ್ರನ್ ಆರ್ ಅವರಿಗೆ ಕಳುಹಿಸಿದ್ದಾಳೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X