ಪ್ರೊ.ಭಗವಾನ್‌ ಮುಖಕ್ಕೆ ಮಸಿ | ಆರೋಪಿ ವಕೀಲೆ ಮೀರಾ ರಾಘವೇಂದ್ರ ಬಾರ್‌ ಕೌನ್ಸಿಲ್‌ನಿಂದ ಅಮಾನತು

Date:

Advertisements

ಪ್ರಗತಿಪರ ಚಿಂತಕ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಎಸ್. ಭಗವಾನ್ ‌ಅವರ ಮುಖಕ್ಕೆ ಕೋರ್ಟ್‌ ಅಂಗಳದಲ್ಲೇ ಮಸಿ ಬಳಿದಿದ್ದ ವಕೀಲೆಯನ್ನು ಬಾರ್‌ ಕೌನ್ಸಿಲ್‌ ನಿಂದ ಅಮಾನತು ಮಾಡಲಾಗಿದೆ.

ಶ್ರೀರಾಮ ದೇವರನ್ನು ನಿಂದಿಸಿ ಬರೆದಿದ್ದಾರೆ ಎಂದು ಆರೋಪಿಸಿ 2ನೇ ಎಸಿ ಎಂ ಎಂ ನ್ಯಾಯಾಲಯದಲ್ಲಿ ವಕೀಲೆ ಮೀರಾ ರಾಘವೇಂದ್ರ ಕೇಸು ದಾಖಲಿಸಿದ್ದರು. ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಾಂಕ 04/02/2021 ರಂದು ನ್ಯಾಯಾಲಯದಲ್ಲಿ ಹಾಜರಾಗಿ ಜಾಮೀನು ಪಡೆದು ಕೋರ್ಟಿನಿಂದ ಹೊರಬರುತ್ತಿದ್ದ ಭಗವಾನ್ ಅವರ ಮುಖಕ್ಕೆ ಮಸಿ ಬಳಿದು, ಪ್ರೊ.ಕಲ್ಬುರ್ಗಿ ಹಾಗೂ ಗೌರಿ ಲಂಕೇಶ್ ಕೊಲೆಯಾದಂತೆ, ಭಗವಾನ್ ಅವರನ್ನೂ ಕೊಲೆ ಮಾಡುವುದಾಗಿ ಜೀವ ಬೆದರಿಕೆಯನ್ನು ಹಾಕಿದ್ದರು.

ಈ ದೃಶ್ಯ ಹಾಗೂ ವರದಿಗಳು ಮಾಧ್ಯಮಗಳಲ್ಲಿ ಪ್ರಕಟಗೊಂಡಿತ್ತು. ಆರೋಪಿ ವಕೀಲೆ ಮೀರಾ ರಾಘವೇಂದ್ರ ಅವರ ವಿರುದ್ಧ ಭಗವಾನ್‌ ಅವರು ಕರ್ನಾಟಕ ಬಾರ್ ಕೌನ್ಸಿಲ್‌ಗೆ ದೂರು ನೀಡಿದ್ದರು. ಸದರಿ ದೂರಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮೀರಾ ರಾಘವೇಂದ್ರ ಅವರಿಗೆ ಕಳುಹಿಸಿದ ರಿಜಿಸ್ಟರ್ಡ್ ಅಂಚೆಯನ್ನು ಸ್ವೀಕರಿಸಲಿಲ್ಲ. ಅವರ ಅನುಪಸ್ಥಿತಿಯಲ್ಲಿ ದೂರಿನ ವಿಚಾರಣೆ ನಡೆಸಿದ ಬಾರ್ ಕೌನ್ಸಿಲ್ ಕಮಿಟಿ, “ವಕೀಲೆಯಾಗಿದ್ದೂ ದೂರಿನ ಬಗ್ಗೆ ವಿಚಾರಣೆಗೆ ಹಾಜರಾಗದೇ, ನೋಟಿಸನ್ನು ಸ್ವೀಕರಿಸದೇ ನಡೆದುಕೊಂಡಿರುವ ರೀತಿ ಬಾರ್ ಕೌನ್ಸಿಲ್ ನ ನಿಯಮಗಳಿಗೆ ವಿರ್ರುದ್ಧವಾಗಿದ್ದು, ಕೋರ್ಟಿನ ಆವರಣದಲ್ಲಿ ವಕೀಲರ ಸಮವಸ್ತ್ರದಲ್ಲಿದ್ದು ಮುಖಕ್ಕೆ ಮಸಿ ಬಳಿಯುವ ಕೆಲಸ ಅವರ ದುರ್ನಡತೆಯನ್ನು ತೋರಿಸುತ್ತದೆ. ತಮ್ಮ ವೃತ್ತಿಗೆ ಬದ್ಧರಾಗಿರದೇ ಅವರು ನಡೆದುಕೊಂಡಿರುವ ರೀತಿ, ವೃತ್ತಿಯ ಶಿಷ್ಟಾಚಾರಕ್ಕೆ ಅಪಮಾನ. ಆರೋಪಿ ವಕೀಲೆ ಮೂರು ತಿಂಗಳ ಕಾಲ ಕರ್ನಾಟಕ ಹಾಗೂ ದೇಶದ ಯಾವುದೇ ನಾಯಾಲಯಗಳಲ್ಲಿ ವಕೀಲಿಕೆ ಮಾಡಬಾರದು” ಎಂದು ಕರ್ನಾಟಕ ಬಾರ್ ಕೌನ್ಸಿಲ್ ದಿನಾಂಕ ನ.21ರಂದು ಆದೇಶಿಸಿದೆ.

ಈ ಬಗ್ಗೆ ಈ ದಿನ ದ ಜೊತೆ ಮಾತನಾಡಿದ ಪ್ರೊ ಭಗವಾನ್‌, ಇಂದು ಕೋರ್ಟ್‌ ರಿಜಿಸ್ಟ್ರಾರ್‌ ಈ ಮಾಹಿತಿ ನೀಡಿರುವುದಾಗಿ ತಿಳಿಸಿದರು. ತಡವಾಗಿಯಾದರೂ ಬಾರ್‌ ಕೌನ್ಸಿಲ್‌ ಕ್ರಮ ಕೈಗೊಂಡಿರುವುದು ಸಮಾಧಾನ ತಂದಿದೆ ಎಂದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X