ಟಿಕೆಟ್‌ ಸಮಸ್ಯೆ ಪರಿಹರಿಸಿಕೊಳ್ಳಲು ತೆರಳಿದ ಪ್ರಯಾಣಿಕನ ಮೇಲೆ ಹಲ್ಲೆ: ಎಫ್‌ಐಆರ್‌ ದಾಖಲು

Date:

Advertisements

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಡಿಪೋ ವ್ಯವಸ್ಥಾಪಕ ಹಾಗೂ ಭದ್ರತಾ ಸಿಬ್ಬಂದಿ ಟಿಕೆಟ್‌ ಸಮಸ್ಯೆ ಪರಿಹರಿಸಿಕೊಳ್ಳಲು ಬಂದ ಪ್ರಯಾಣಿಕನ ಮೇಲೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಸದ್ಯ ಪ್ರಯಾಣಿಕ ನೀಡಿದ ದೂರಿನ ಮೇರೆಗೆ ಕೆಎಸ್‌ಆರ್‌ಟಿಸಿ ಟರ್ಮಿನಲ್ 2 ಡಿಪೋ ವ್ಯವಸ್ಥಾಪಕ ಮತ್ತು ಭದ್ರತಾ ಸಿಬ್ಬಂದಿ ಸತೀಶ್‌ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಜಿ. ರಾಘವೇಂದ್ರ ಪ್ರಯಾಣಿಕ. ಇವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದ ವ್ಯಾಪಾರಿ. ಡಿಸೆಂಬರ್ 23ರಂದು ರಾತ್ರಿ 12:15ರ ಸುಮಾರಿಗೆ ಬೆಂಗಳೂರಿನಿಂದ ಹಿರಿಯೂರಿಗೆ ಪ್ರಯಾಣ ಬೆಳೆಸಿದ್ದರು. ಕೆಎಸ್‌ಆರ್‌ಟಿಸಿ 1 ನೇ ಟರ್ಮಿನಲ್‌ನಿಂದ ಹರಿಹರದ ಮಾರ್ಗದ ಬಸ್‌ ಹತ್ತಿದ್ದರು.

Advertisements

ಬಸ್‌ ಹತ್ತಿದ ಬಳಿಕ ಹಿರಿಯೂರ್‌ಗೆ ಟಿಕೆಟ್‌ ನೀಡುವಂತೆ ನಿರ್ವಾಹಕರಿಗೆ ಕೇಳಿದ್ದರು. ಆದರೆ, ನಿರ್ವಾಹಕ ಹಿರಿಯೂರ್‌ಗೆ ಬಸ್‌ ತೆರಳುವುದಿಲ್ಲ ಎನ್‌ಎಚ್‌ ಮೂಲಕ ಹಾದು ಹೋಗುತ್ತದೆ. ಬೈಪಾಸ್ ಬಳಿ ನಿಲ್ಲಿಸುವುದಾಗಿ ತಿಳಿಸುತ್ತಾರೆ.

ಇದಕ್ಕೆ ಪ್ರಯಾಣಿಕ ಹಿರಿಯೂರ್ ಬೈಪಾಸ್ ಬಳಿ ಇಳಿದುಕೊಳ್ಳುವೆ ಎಂದು ಹೇಳಿದ್ದಾರೆ. ಇದಕ್ಕೆ ನಿರ್ವಾಹಕ ಚಿತ್ರದುರ್ಗಕ್ಕೆ ಟಿಕೆಟ್‌ ಪಡೆದರೇ, ಬೈಪಾಸ್ ಬಳಿ ನಿಲ್ಲಿಸುವುದಾಗಿ ತಿಳಿಸುತ್ತಾರೆ. ಇದಕ್ಕೆ ಪ್ರಶ್ನಿಸಿದ ಪ್ರಯಾಣಿಕನನ್ನು ನಿರ್ವಾಹಕ ಬಸ್‌ನಿಂದ ಇಳಿಸುತ್ತಾನೆ.

ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಯೋಚಿಸಿದ ಪ್ರಯಾಣಿಕ ತಕ್ಷಣ ಡಿಪೋ ಮ್ಯಾನೇಜರ್ ಬಳಿ ತೆರಳಿ ಆದ ಘಟನೆ ಬಗ್ಗೆ ಹೇಳಿದ್ದಾರೆ ಮತ್ತು ಟಿಕೆಟ್ ವಿಚಾರವನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಡಿಪೋ ಮ್ಯಾನೇಜರ್ ಕೂಡ ‘ಹರಿಹರ ಅಥವಾ ಚಿತ್ರದುರ್ಗಕ್ಕೆ ಮಾತ್ರ ಟಿಕೆಟ್ ಪಡೆಯಬೇಕು’ ಎಂದು ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕರ್ತವ್ಯ ನಿರತ ಸಂಚಾರ ಪೊಲೀಸ್‌ ಮೇಲೆ ಹಲ್ಲೆ: ಬಂಧನ

ಈತನ ಹೇಳಿಕೆಯನ್ನು ರಾಘವೇಂದ್ರ ಅವರು ಮೊಬೈಲ್‌ನಲ್ಲಿ ಚಿತ್ರೀಕರಿಸಲು ಮುಂದಾದಾಗ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಹಾಗೂ ಮ್ಯಾನೇಜರ್ ಇಬ್ಬರು ಅವರಿಗೆ ಲಾಠಿಯಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಅಲ್ಲದೇ, ಮೊಬೈಲ್ ಕಿತ್ತುಕೊಂಡು ಕಾಲಿನಿಂದ ಎದೆಗೆ ಒದ್ದು ಎಳೆದಾಡಿದ್ದಾರೆ. ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪ್ರಯಾಣಿಕ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ರಾಘವೇಂದ್ರ ನೀಡಿರುವ ದೂರಿನ ಅನ್ವಯ ಡಿಪೋ ಮ್ಯಾನೇಜರ್ ಹಾಗೂ ಭದ್ರತಾ ಸಿಬ್ಬಂದಿ ಸತೀಶ್ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

Download Eedina App Android / iOS

X