ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಹೈಕೋರ್ಟ್ ಆದೇಶ ವದಂತಿ; ‘ಮಾಹಿತಿ ಇಲ್ಲ’ ಎಂದ ದ.ಕ. ಎಸ್‌ಪಿ

Date:

Advertisements
  • ಉಜಿರೆಯ ಭಾಸ್ಕರ್ ನಾಯ್ಕ ಎಂಬವರ ಮೇಲೆ ಹಲ್ಲೆ ಪ್ರಕರಣ
  • ಈದಿನ.ಕಾಮ್‌ಗೆ ದಕ್ಷಿಣ ಕನ್ನಡ ಎಸ್‌ಪಿ ಪ್ರತಿಕ್ರಿಯೆ

ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸಂಗಡಿಗರನ್ನು ಬಂಧಿಸುವಂತೆ ಹೈಕೋರ್ಟ್ ಆದೇಶಿಸಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ‘ಆ ರೀತಿಯ ಯಾವುದೇ ಆದೇಶ ನಮಗೆ ಬಂದಿಲ್ಲ. ಹೈಕೋರ್ಟ್‌ ಆದೇಶ ನೀಡಿದೆ ಎಂಬುದು ಗಾಳಿ ಸುದ್ದಿ’ ಎಂದು ಹೇಳಿದ್ದಾರೆ.

ಉಜಿರೆ ಗ್ರಾಮದ ಬಡೆಕೊಟ್ಟು ನಿವಾಸಿ ಭಾಸ್ಕರ ನಾಯ್ಕ ಎಂಬುವವರ ಮೇಲೆ ಕಳೆದ ಸೆಪ್ಟೆಂಬರ್ 3ರಂದು ಸಂಜೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡದವರು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿತ್ತು.

ತಿಮರೋಡಿ

ವಾಟ್ಸಪ್‌ನಲ್ಲಿ ಹರಿದಾಡಿದ ಸುದ್ದಿಯ ಸ್ಕ್ರೀನ್ ಶಾಟ್

Advertisements

ಈ ಪ್ರಕರಣವನ್ನೇ ದಾಳವಾಗಿಸಿಕೊಂಡಿರುವ ಕೆಲವರು, ‘ಅಟ್ರಾಸಿಟಿ ಪ್ರಕರಣ ದಾಖಲಾಗಿ ಒಂಭತ್ತು ದಿನ ಕಳೆದರೂ ಈವರೆಗೆ ಆರೋಪಿಗಳನ್ನು ಪೊಲೀಸರು ಬಂಧಿಸದೆ ಸುಮ್ಮನಿದ್ದಾರೆ ಎಂದು ದೂರಿ, ಭಾಸ್ಕರ್ ನಾಯ್ಕ್ ಸೋಮವಾರ ಹೈಕೋರ್ಟ್‌ ಮೊರೆ ಹೋಗಿದ್ದರು. ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದೆ ಮತ್ತು ಮೂರು ದಿನದ ಒಳಗೆ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕೆಂದು ಆದೇಶಿಸಿದೆ’ ಎಂಬ ವದಂತಿಯನ್ನು ಹರಿಯಬಿಟ್ಟಿದ್ದಾರೆ. ಕೆಲವು ಮಾಧ್ಯಮಗಳೂ ಕೂಡ ಇದನ್ನು ವರದಿ ಮಾಡಿವೆ.

ಪ್ರಕರಣ ಮತ್ತು ವದಂತಿ ಸಂಬಂಧ ಈ ದಿನ.ಕಾಮ್‌ ಜೊತೆ ಮಾತನಾಡಿದ ದಕ್ಷಿಣ ಕನ್ನಡ ಎಸ್‌ಪಿ ರಿಷ್ಯಂತ್ ಸಿ.ಬಿ, “ಮಹೇಶ್ ತಿಮರೋಡಿ ಬಂಧನಕ್ಕೆ ಹೈಕೋರ್ಟ್‌ನಿಂದ ನಮಗೆ ಯಾವುದೇ ಆದೇಶ ಬಂದಿಲ್ಲ. ಸುದ್ದಿ ಮಾಡಿರುವ ಮಾಧ್ಯಮಗಳಲ್ಲಿ ಯಾರಿಗಾದರೂ ಆದೇಶ ಪ್ರತಿ ದೊರೆತಿದ್ದರೆ, ನಮಗೆ ಕಳಿಸಿಕೊಡಲಿ” ಎಂದು ಹೇಳಿದ್ದು, ವದಂತಿಯನ್ನು ತಳ್ಳಿ ಹಾಕಿದ್ದಾರೆ.

bhaskar naik

ಹಲ್ಲೆಗೊಳಗಾಗಿರುವ ಭಾಸ್ಕರ ನಾಯ್ಕ್

ಪ್ರಕರಣವೇನು?

ಮಹೇಶ್ ಶೆಟ್ಟಿ ತಿಮರೋಡಿಯ ಮಾಜಿ ಆಪ್ತರಾಗಿರುವ ಭಾಸ್ಕರ ನಾಯ್ಕ್ ಸೆ. 3 ರಂದು ಸಂಜೆ ಮಂಗಳೂರಿನಲ್ಲಿ ಯೂಟ್ಯೂಬ್ ಚಾನಲ್‌ವೊಂದಕ್ಕೆ ಸಂದರ್ಶನ ನೀಡಿ ವಾಪಸ್ ಬರುವಾಗ ಮಹೇಶ್ ಶೆಟ್ಟಿ ತಿಮರೋಡಿ, ಮೋಹನ್ ಶೆಟ್ಟಿ, ಮುಖೇಶ್ ಶೆಟ್ಟಿ, ನಿತಿನ್, ಪ್ರಜ್ವಲ್ ಕೆವಿ ಗೌಡ, ಪ್ರಮೋದ್ ಶೆಟ್ಟಿ ಮತ್ತಿತರರು ಕಾರು ಅಡ್ಡ ಹಾಕಿ, ಹಲ್ಲೆ ಮಾಡಿದ್ದರು ಎಂದು ಆರೋಪಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಭಾಸ್ಕರ್ ನಾಯ್ಕ ದೂರು ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X