ಅನಧಿಕೃತ, ರೆವಿನ್ಯೂ ಬಡಾವಣೆಗಳಿಗೆ ‘ಬಿ’ ಖಾತಾಕ್ಕೆ ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಅನಧಿಕೃತ, ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ನೀಡಲು ಬಿ ಖಾತಾ ಅಭಿಯಾನ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಯೋಜನಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಬಿ ಖಾತಾ ಅಭಿಯಾನಕ್ಕೆ ಸೂಚನೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು.

ಅರಣ್ಯ ಸಚಿವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯ ವರದಿಯಾಧರಿಸಿ ಕಾನೂನು ರೂಪಿಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಬರುವ ಅನಧಿಕೃತ, ರೆವಿನ್ಯೂ ಬಡಾವಣೆಗಳು ಹಾಗೂ ಆಸ್ತಿಗಳಿಗೆ ನಾಗರಿಕ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಸರ್ಕಾರಕ್ಕೆ ತೆರಿಗೆ ಸಂದಾಯವಾಗಬೇಕು. ಈ ದಿಸೆಯಲ್ಲಿ ಅನಧಿಕೃತ, ರೆವಿನ್ಯೂ ಬಡಾವಣೆಗಳಲ್ಲಿ ಮೂರು ತಿಂಗಳಲ್ಲಿ ಬಿ ಖಾತಾಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಂತು ಬೇಸಿಗೆ, ತತ್ವಾರ ತಂತು ನೀರಿಗೆ, ಅನುಕೂಲ ಅವಕಾಶವಾದಿಗಳಿಗೆ!

ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ

ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಚಿವ ಕೆ ಎನ್ ರಾಜಣ್ಣ ಅವರ ನಡುವೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವ ಬಗ್ಗೆ ನಡೆಯುತ್ತಿರುವ ವಾದದ ಕುರಿತು ಪ್ರತಿಕ್ರಿಯೆ ನೀಡಿ, ರಾಜಣ್ಣ ಹಾಗೂ ಡಿಸಿಎಂರವರು ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಈ ವಿಷಯದ ಬಗ್ಗೆ ಪಕ್ಷದ ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದರು.

ದಲಿತ ಮುಖಂಡರೊಂದಿಗೆ ಸಭೆ

ದಲಿತ ಮುಖಂಡರೊಂದಿಗಿನ ಬಜೆಟ್ ಪೂರ್ವಸಭೆಯ ಬಗ್ಗೆ ಉತ್ತರಿಸಿ, ಇಂದು ದಲಿತ ಮುಖಂಡರೊಂದಿಗೆ ಸಭೆ ನಡೆಸಿ ಅವರ ಸಲಹೆ ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದರು.

ವಿಧಾನಪರಿಷತ್ತಿನ ಸದಸ್ಯರ ನಾಮನಿರ್ದೇಶನ ಕುರಿತು ಚರ್ಚೆಯನ್ನು ತನ್ನ ಅನಾರೋಗ್ಯದ ನಿಮಿತ್ತ ನಡೆಸಲು ಸಾಧ್ಯವಾಗಿಲ್ಲವೆಂದು, ಮುಂದೆ ಈ ಕುರಿತು ನವದೆಹಲಿಗೆ ಹೋಗುವ ಸಾಧ್ಯತೆಯಿದೆಯೆಂದು ಮುಖ್ಯಮಂತ್ರಿಗಳು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X