ಬೆಂಗಳೂರು | ನೀರು ನಿರ್ವಹಣೆ, ಪ್ರವಾಹ ತಗ್ಗಿಸುವ ಕಾಮಗಾರಿ; ವಿಶ್ವಬ್ಯಾಂಕ್‌ನಿಂದ ₹3,000 ಕೋಟಿ ಅನುದಾನ ನಿರೀಕ್ಷೆ

Date:

Advertisements

ಬೆಂಗಳೂರಿನಲ್ಲಿ ನೀರು ನಿರ್ವಹಣೆ ಮತ್ತು ಪ್ರವಾಹ ತಗ್ಗಿಸುವ ಉಪಕ್ರಮಗಳಿಗೆ ವಿಶ್ವಬ್ಯಾಂಕ್ ₹3,000 ಕೋಟಿ ಸಾಲ ರೂಪದ ಅನುದಾನ ನೀಡಲು ವಿಶ್ವಬ್ಯಾಂಕ್ ಮುಂದೆಬಂದಿದೆ.

ಈ ಕುರಿತ ಪ್ರಸ್ತಾವಣೆಗೆ ಸುಮಾರು ಒಂದು ತಿಂಗಳ ಹಿಂದೆ ಆರ್ಥಿಕ ವ್ಯವಹಾರಗಳ ಇಲಾಖೆ (ಡಿಇಎ) ಗ್ರೀನ್ ಸಿಗ್ನಲ್‌ನೀಡಿದೆ. ಮುಂದಿನ ಹಂತಗಳ ಬಗ್ಗೆ ನಕ್ಷೆ ಮಾಡಲು ಬಿಬಿಎಂಪಿ ಇತ್ತೀಚೆಗೆ ವಿಶ್ವಬ್ಯಾಂಕ್ ಪ್ರತಿನಿಧಿಗಳೊಂದಿಗೆ ತನ್ನ ಮೊದಲ ಸಭೆ ನಡೆಸಿತ್ತು.

ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲುಎಸ್‌ಎಸ್‌ಬಿ) ಸಾಲದ ಮೊತ್ತವನ್ನು ಕ್ರಮವಾಗಿ ₹2,000 ಕೋಟಿ ಮತ್ತು ₹1,000 ಕೋಟಿ ಆಗಿ ಹಂಚಿಕೊಳ್ಳಲಿದೆ.

Advertisements

ವಿಶ್ವಬ್ಯಾಂಕ್‌ನಿಂದ ಪಡೆದ ಸಾಲದೊಂದಿಗೆ ಬಿಬಿಎಂಪಿಯೂ ವಿಶೇಷವಾಗಿ 173 ಕಿಲೋಮೀಟರ್‌ ಉದ್ದಕ್ಕೂ ತಡೆಗೋಡೆಗಳನ್ನು ನಿರ್ಮಿಸುವ ಮೂಲಕ ಬಾಹ್ಯ ಪ್ರದೇಶಗಳಲ್ಲಿ ಮಳೆನೀರಿನ ಚರಂಡಿಗಳನ್ನು ಬಲಪಡಿಸಲು ಯೋಜಿಸಿದೆ. ಜತೆಗೆ, ಕೋರಮಂಗಲ ವ್ಯಾಲಿ ವಾಟರ್​ವೇಯನ್ನು ದಕ್ಷಿಣ ಪಿನಾಕಿನಿ ನದಿಯೊಂದಿಗೆ ಸಂಪರ್ಕಿಸುವ ನಿಟ್ಟಿನಲ್ಲಿ ಯೋಜನೆಯನ್ನು ವಿಸ್ತರಿಸಲಿದೆ.

ಜಲ ಮಂಡಳಿಯು ಹೊಸ ಒಳಚರಂಡಿ ನಿರ್ಮಾಣ ಮತ್ತು ಕೊಳಚೆನೀರಿನ ಸಂಸ್ಕರಣಾ ಘಟಕಗಳನ್ನು ರಚಿಸಲು ಹಣವನ್ನು ಬಳಸಿಕೊಳ್ಳಲಿದೆ.

ಬಿಡಬ್ಲೂಎಸ್‌ಎಸ್‌ಬಿ ಈ ಹಿಂದೆ ಹಲವು ಬಾರಿ ವಿಶ್ವಬ್ಯಾಂಕ್ ನಿಧಿಯನ್ನು ಬಳಸಿಕೊಂಡಿದ್ದರೂ, ಬಿಬಿಎಂಪಿಗೆ ಇದು ಮೊದಲ ಅನುಭವವಾಗಿದೆ. ಮಾಸಾಂತ್ಯದ ವೇಳೆಗೆ ವಿಶ್ವಬ್ಯಾಂಕ್‌ನೊಂದಿಗೆ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಹಂಚಿಕೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ಏಜೆನ್ಸಿಗಳಿಗೆ ನಿಧಿಯ ಜೊತೆಗೆ, ವಿಶ್ವಬ್ಯಾಂಕ್ ಕೂಡ ಕರ್ನಾಟಕಕ್ಕೆ ಪ್ರವಾಹ ತಗ್ಗಿಸಲು ₹2,000 ಕೋಟಿ ನೀಡಲಿದೆ ಎಂದು ತಿಳಿದುಬಂದಿದೆ. ಇದಕ್ಕಾಗಿ ಕರ್ನಾಟಕ ಕಂದಾಯ ಇಲಾಖೆ ಜಾಗತಿಕ ಏಜೆನ್ಸಿಯೊಂದಿಗೆ ಸಂಪರ್ಕದಲ್ಲಿದೆ. ವಿಶ್ವಬ್ಯಾಂಕ್ ಜತೆ ಮಾತುಕತೆ ನಡೆಸುತ್ತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿಗೆ ಹೆಸರಘಟ್ಟ ಕೆರೆ ನೀರು ಸರಬರಾಜು ನಿರ್ಧಾರ ಮರುಪರಿಶೀಲನೆ: ಜಲಮಂಡಳಿ ಅಧ್ಯಕ್ಷ

ಇತ್ತೀಚಿನ ವರ್ಷಗಳಲ್ಲಿ ಬೆಂಗಳೂರಿನಲ್ಲಿ ಹಠಾತ್ ಪ್ರವಾಹ ಪುನರಾವರ್ತನೆಯಾಗುತ್ತಿದೆ. ಇದು ಜನರ ಜೀವ ಮತ್ತು ಆಸ್ತಿಗೆ ಅಪಾಯವನ್ನುಂಟುಮಾಡುತ್ತಿದೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಸಂಶೋಧಕರಾದ ಪ್ರೊ.ಟಿ.ವಿ.ರಾಮಚಂದ್ರ, ವಿನಯ್ ಎಸ್, ಮತ್ತು ಭರತ್ ಎಚ್ ಐತಾಳ್ ಅವರ 2017 ರ ಅಧ್ಯಯನವು ಬೆಂಗಳೂರಿನ ಪ್ರವಾಹದ ಸಮಸ್ಯೆಗಳ ಹಿಂದೆ ಹಲವಾರು ಕಾರಣಗಳನ್ನು ಗುರುತಿಸಿದೆ. ಇವುಗಳಲ್ಲಿ ಕುಗ್ಗುತ್ತಿರುವ ಮಳೆನೀರಿನ ಚರಂಡಿಗಳು, ಕೆರೆಗಳ ನಾಶ, ಕಣಿವೆ ವಲಯಗಳಲ್ಲಿನ ಉಲ್ಲಂಘನೆಗಳು ಮತ್ತು ಕೆರೆಗಳ ಡಿನೋಟಿಫಿಕೇಶನ್ ಸೇರಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X