ಬೆಂಗಳೂರು | ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಬ್ಯಾನರ್ ಅಳವಡಿಕೆ ₹50,000 ದಂಡ

Date:

Advertisements

“ಬೆಂಗಳೂರಿನ ಪೂರ್ವ ವಲಯ ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆವಾರ್ಡ್ ಕಟ್ಟಡದ ಹತ್ತಿರ ಅಳವಡಿಸಿದ್ದ ಬ್ಯಾನರ್ ಅನ್ನು ತೆರವುಗೊಳಿಸಿ, ಬ್ಯಾನರ್ ಅಳವಡಿಸಿದ್ದವರಿಗೆ ₹50,000 ದಂಡ ವಿಧಿಸಲಾಗಿದೆ” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೇಳಿದೆ.

“ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆ ವಾರ್ಡ್ ಕಟ್ಟಡ ಹತ್ತಿರ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ 2023ರ ಕಾಂಗ್ರೆಸ್ ಅಭ್ಯರ್ಥಿ ಕೆಪಿಸಿಸಿ ಕೋ-ಅರ್ಡಿನೇಟರ್ ಹಾಗೂ ಎಬಿಡಿ ಗ್ರೂಪ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ರಾಜೀವ್ ಗೌಡ ಅವರು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರ ಜನ್ಮ ದಿನಾಚರಣೆಯ ಅಂಗವಾಗಿ ಅನಧಿಕೃತವಾಗಿ ಬ್ಯಾನರ್ ಅನ್ನು ಅಳವಡಿಸಿರುವುದು ಕಂಡುಬಂದಿದೆ” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವ್ಹೀಲಿಂಗ್ ಮಾಡುತ್ತಿದ್ದ 6 ಜನರ ಬಂಧನ; 13 ಬೈಕ್ ಜಪ್ತಿ

Advertisements

“ಅನಧಿಕೃತವಾಗಿ ಬ್ಯಾನರ್ ಅಳವಡಿಸಿರುವ ಬಗ್ಗೆ ಪಾಲಿಕೆ ವತಿಯಿಂದ ಅಧಿಕೃತವಾಗಿ ಪರವಾನಿಗೆ ಅಥವಾ ಅನುಮತಿಯನ್ನು ಪಡೆದಿಲ್ಲ. ಈ ಹಿನ್ನೆಲೆ, ಅನಧಿಕೃತವಾಗಿ ಫ್ಲೇಕ್ಸ್‌ ಅಳವಡಿಸಿರುವವರಿಗೆ ₹50,000 ದಂಡ ವಿಧಿಸಲಾಗಿದೆ. ಹಾಗೇಯೇ, ಪಾಲಿಕೆ ಮುಖ್ಯ ಆಯುಕ್ತ ಅವರ ಖಾತೆಗೆ ದಂಡದ ಹಣವನ್ನು ಪಾವತಿಸುವಂತೆ ವಸಂತನಗರದ ಸಹಾಯಕ ಕಂದಾಯ ಅಧಿಕಾರಿ ರವರು ಪತ್ರದ ಮೂಲಕ ಸೂಚಿಸಿದ್ದಾರೆ” ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X