ಬೆಂಗಳೂರು | ಪ್ರಿಯಕರನ ಮೊಬೈಲ್‌ನಲ್ಲಿತ್ತು 13 ಸಾವಿರ ನಗ್ನ ಫೋಟೋ: ದೂರು ದಾಖಲಿಸಿದ ಪ್ರಿಯತಮೆ

Date:

Advertisements

ಸಹೋದ್ಯೋಗಿ, ಪ್ರಿಯತಮೆ ಸೇರಿದಂತೆ ಮಹಿಳೆಯರ 13,000ಕ್ಕೂ ಹೆಚ್ಚು ನಗ್ನ ಫೋಟೋಗಳನ್ನು ಮೊಬೈಲ್‌ನಲ್ಲಿ ಸೇವ್ ಮಾಡಿಕೊಂಡಿದ್ದ ಯುವಕನನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಆದಿತ್ಯ ಸಂತೋಷ ಬಂಧಿತ. ಈತನು ಬೆಳ್ಳಂದೂರಿನ ಬಿಪಿಒ ಕಂಪನಿಯಲ್ಲಿ ಗ್ರಾಹಕ ಸೇವಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದನು. ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಬಂಧಿತ ವ್ಯಕ್ತಿ ಪ್ರೀತಿ ಮಾಡುತ್ತಿದ್ದನು.

ಪ್ರಿಯತಮೆಯೊಂದಿಗೆ ಬಂಧಿತ ವ್ಯಕ್ತಿ ಫೋಟೋಗಳನ್ನು ತೆಗೆದುಕೊಂಡಿದ್ದನು. ಆತನೊಂದಿಗೆ ತೆಗೆದಿರುವ ಫೋಟೋಗಳನ್ನು ಡಿಲೀಟ್ ಮಾಡಲು ಯುವತಿ ಯುವಕನಿಗೆ ಗೊತ್ತಾಗದ ಹಾಗೇ ಆತನ ಮೊಬೈಲ್ ತೆಗೆದುಕೊಂಡಿದ್ದಾಳೆ. ಈ ವೇಳೆ, ಗ್ಯಾಲರಿಯಲ್ಲಿ ತನ್ನ ಸಹೋದ್ಯೋಗಿಗಳು ಸೇರಿದಂತೆ ಹಲವು ಮಹಿಳೆಯರ ನಗ್ನ ಫೋಟೋಗಳನ್ನು ಕಂಡು ಗಾಬರಿಗೊಂಡಿದ್ದಾಳೆ. ಬಳಿಕ, ಆತನ ಜತೆಗೆ ಜಗಳವಾಡಿ ಬ್ರೇಕ್ ಅಪ್ ಮಾಡಿಕೊಂಡಿದ್ದಾಳೆ.

Advertisements

ಈ ಬಗ್ಗೆ ಯುವತಿ ತನ್ನ ಸಹೋದ್ಯೋಗಿಗಳಿಗೆ ಮಾಹಿತಿ ನೀಡಿದ್ದಳು. ಜತೆಗೆ, ಕಂಪನಿಯ ಲೀಗಲ್ ಎಕ್ಸಿಕ್ಯುಟಿವ್​ಗೆ ಮಾಹಿತಿ ನೀಡಿದ್ದಾರೆ. ನಂತರ ಯುವತಿ ವೈಟ್ ಫೀಲ್ಡ್ ಸೈಬರ್‌ ಕ್ರೈಂ ಠಾಣೆಗೆ ದೂರು ನೀಡಿದ್ದರು.

ದೂರು ದಾಖಲಾದ ಬೆನ್ನಲ್ಲೆ, ತನಿಖೆಗೆ ಇಳಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕುಸಿದು ಬಿದ್ದ ಶಾಲಾ ಕಟ್ಟಡ; ಸಮಗ್ರ ತನಿಖೆ ನಡೆಯಲಿ ಎಂದ ಎಸ್‌ಐಒ

ಕಳೆದ ಐದು ತಿಂಗಳಿನಿಂದ ಬಂಧಿತ ಆರೋಪಿ ಗ್ರಾಹಕ ಸೇವಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾನೆ. ಈತ ಹಲವು ಮಹಿಳೆಯರ ಫೋಟೋಗಳನ್ನು ಕಲೆಹಾಕಿ ನಗ್ನ ರೂಪಕ್ಕೆ ಆ ಫೋಟೋಗಳನ್ನು ಎಡಿಟ್ ಮಾಡುತ್ತಿದ್ದನು. ತನ್ನ ಸಂತೋಷಕ್ಕಾಗಿ ಆತ ಹೀಗೆಲ್ಲ ಮಾಡುತ್ತಿದ್ದನು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆರೋಪಿ ವಿರುದ್ಧ ಮಾಹಿತಿ ಸೆಕ್ಷನ್ 67, 67 (ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X