ಬೆಂಗಳೂರು | 2 ವರ್ಷದಲ್ಲಿ 900 ಹೆಣ್ಣು ಭ್ರೂಣ ಹತ್ಯೆ; ವೈದ್ಯರು ಸೇರಿ 9 ಮಂದಿ ಬಂಧನ

Date:

Advertisements

ಹೆಣ್ಣು ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುತ್ತಿದ್ದ ನಾಲ್ವರು ವೈದ್ಯರು ಸೇರಿ 9 ಮಂದಿ ಆರೋಪಿಗಳನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಚೆನ್ನೈ ಮೂಲದ ವೈದ್ಯ ಡಾ.ತುಳಸಿರಾಮ್​, ಡಾ.ಚಂದನ್ ಬಲ್ಲಾಳ್, ಡಾ.ಚಂದನ್​ ಬಲ್ಲಾಳ್​ ಪತ್ನಿ ಮೀನಾ, ಲ್ಯಾಬ್​ ಟೆಕ್ನಿಷಿಯನ್ ನಿಸ್ಸಾರ್, ಮೈಸೂರಿನ ಖಾಸಗಿ ಆಸ್ಪತ್ರೆ ರಿಸೆಪ್ಷನಿಸ್ಟ್ ರಿಜ್ಮಾ ಬಂಧಿತರು.

ಆರೋಪಿಗಳು ಸುಮಾರು 2 ವರ್ಷಗಳಿಂದ ನಿರಂತರವಾಗಿ 900 ಹೆಣ್ಣು ಭ್ರೂಣ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಕಳೆದ ಅಕ್ಟೋಬರ್‌ನಲ್ಲಿ ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ವಿಚಾರಣೆಗೆ ಒಳಗೊಳಪಡಿಸಿದಾಗ ವೈದ್ಯರ ಹೆಸರನ್ನು ಬಾಯಿಬಿಟ್ಟಿದ್ದಾರೆ.

Advertisements

ಆರೋಪಿಗಳು ಹೆಣ್ಣು ಮಕ್ಕಳಿಗೆ ಜನ್ಮ ನೀಡುವ ಗರ್ಭಿಣಿಯರನ್ನು ಮಂಡ್ಯದ ಆಲೆಮನೆಯೊಂದರಲ್ಲಿ ಸ್ಕ್ಯಾನ್ ಮಾಡಿಸುತಿದ್ದರು. ಮೈಸೂರಿನ ಉದಯಗಿರಿಯ ಆಸ್ಪತ್ರೆಯೊಂದರಲ್ಲಿ ಭ್ರೂಣ ಹತ್ಯೆಯ ಕೃತ್ಯ ನಡೆಸುತ್ತಿದ್ದರು. ಒಂಬತ್ತು ಆರೋಪಿಗಳು ಸೇರಿ ಸಿಂಡಿಕೇಟ್ ಮಾಡಿಕೊಂಡು ವ್ಯವಸ್ಥಿತವಾಗಿ ಕೃತ್ಯ ಎಸಗುತಿದ್ದರು. ಪ್ರತಿ ತಿಂಗಳು 20 ರಿಂದ 25 ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಲ್ಲಿ ಸುಮಾರು 900ಕ್ಕೂ ಹೆಚ್ಚು ಭ್ರೂಣ ಹತ್ಯೆ ಮಾಡಿದ್ದಾರೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಅಸ್ಪೃಶ್ಯತೆ ಆಚರಣೆ ನ್ಯಾಯಾಲಯದ ಆತ್ಮಸಾಕ್ಷಿಯನ್ನು ಬೆಚ್ಚಿಬೀಳಿಸುತ್ತದೆ: ಹೈಕೋರ್ಟ್‌

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮೈಸೂರಿನ ಉದಯಗಿರಿಯಲ್ಲಿನ ಮಾತಾ ಆಸ್ಪತ್ರೆ ಮತ್ತು ರಾಜ್ ಕುಮಾರ್ ರಸ್ತೆಯ ಆಯುರ್ವೇದಿಕ್ ಫೈಲ್ಸ್ ಡೇ ಕೇರ್ ಸೆಂಟರ್ ಅನ್ನು ಸಹ ಪೊಲೀಸರು ಸೀಜ್ ಮಾಡಿದ್ದು, ಆಯುರ್ವೇದ ಡೇ ಕೇರ್ ಸೆಂಟರ್‌ನಲ್ಲಿಯೇ ಭ್ರೂಣ ಹತ್ಯೆ ನಡೆಯುತಿತ್ತು ಎಂಬುದು ಬಯಲಿಗೆ ಬಂದ ಹಿನ್ನೆಲೆ ಸೀಜ್ ಮಾಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X