ಬೆಂಗಳೂರು | ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಲ್ಲಿ ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ಸಾವು

Date:

Advertisements

ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ಮೃತಪಟ್ಟ ಘಟನೆ ಕಾಡುಗೋಡಿ ವರ್ತೂರಿನ ಪ್ರೆಸ್ಟೀಜ್ ಹೆಬಿಟೇಡ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಮಾನ್ಯ(10) ಮೃತ ಬಾಲಕಿ. ಗುರುವಾರ (ಡಿ.28) ಸಂಜೆ ಸುಮಾರು 7.30ರ ಸುಮಾರಿಗೆ ಈ ಘಟನೆ ನಡೆದಿದೆ.

ಬಾಲಕಿ ಮಾನ್ಯ ಗುರುವಾರ ಅಪಾರ್ಟ್‌ಮೆಂಟ್‌ನ ಸ್ವಿಮಿಂಗ್ ಫೂಲ್ ಬಳಿ ಆಟವಾಡುತ್ತಿದ್ದಳು. ಈ ವೇಳೆ, ಫೂಲ್ ಪಕ್ಕದಲ್ಲಿದ್ದ ವಿದ್ಯುತ್ ದೀಪದ ತಂತಿಯನ್ನು ಬಾಲಕಿ ತುಳಿದ ಪರಿಣಾಮ ಶಾಕ್ ಹೊಡೆದಿದೆ. ಬಾಲಕಿ ಪ್ರಜ್ಞೆ ತಪ್ಪಿ ಸ್ವಿಮಿಂಗ್ ಫೂಲ್ ಒಳಗೆ ಬಿದ್ದಿದ್ದಾಳೆ.

Advertisements

ಇದನ್ನು ಕಂಡ ಅಪಾರ್ಟ್‌ಮೆಂಟ್ ನಿವಾಸಿಗಳು ಬಾಲಕಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿದ್ದಾರೆ.

ಇನ್ನು ಬಾಲಕಿ ಸಾವಿಗೆ ಅಪಾರ್ಟ್‌ಮೆಂಟ್‌ ನಿರ್ವಹಣಾ ಸಿಬ್ಬಂದಿ ಬೇಜವಾಬ್ದಾರಿ ಕಾರಣ ಎಂದು ಅಪಾರ್ಟ್‌ಮೆಂಟ್ ನಿವಾಸಿಗಳು ಆರೋಪ ಮಾಡಿದ್ದು ರಾತ್ರಿಯಿಡಿ ನಿರ್ವಹಣಾ ಸಿಬ್ಬಂದಿ ವಿರುದ್ಧ 100ಕ್ಕೂ ಹೆಚ್ಚು ಜನರು ಪ್ರತಿಭಟನೆ ನಡೆಸಿದರು.

ವಿದ್ಯುತ್ ಪೂರೈಕೆ, ವಿದ್ಯುತ್ ಕಂಬಗಳ ನಿರ್ವಹಣೆಯನ್ನು ಅಪಾರ್ಟ್‌ಮೆಂಟ್‌ನ ಪಿಪಿಎಮ್‌ಸಿ ವಿಭಾಗ ನೋಡಿಕೊಳ್ಳುತ್ತಿತ್ತು. ಪಿಪಿಎಮ್‌ಸಿ ನಿರ್ಲಕ್ಷ್ಯದಿಂದಲೇ ಮಗು ಸಾವಾಗಿದೆ. ಈ ನಿರ್ಲಕ್ಷ್ಯ ಇದೇ ಮೊದಲಲ್ಲ. ಈ ಹಿಂದೆಯೂ ನಡೆದಿತ್ತು. ಈ ಹಿಂದೆ ಸಹ ನಮಗೆ ವಿದ್ಯುತ್ ಶಾಕ್ ಅನುಭವವಾಗಿದೆ. ಈ ಬಗ್ಗೆ ಹಲವು ಬಾರಿ ದೂರು ನೀಡಿದರು ನಿರ್ವಹಣಾ ಸಿಬ್ಬಂದಿ ಕ್ರಮಕೈಗೊಂಡಿಲ್ಲ. ನಿರ್ವಹಣಾ ಸಿಬ್ಬಂದಿ ಸರಿಯಾದ ರೀತಿ ಕೆಲಸ ಮಾಡುತ್ತಿಲ್ಲ. ಆದ್ದರಿಂದಲೇ, ಈ ಘಟನೆ ಸಂಭವಿಸಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಪ್ರತಿ ವರ್ಷ ‘ಎಫ್‌ಸಿ’ ಕಡ್ಡಾಯ; ಹೈಕೋರ್ಟ್‌ ಸೂಚನೆ

ಪ್ರಕರಣ ಸಂಬಂಧ ಮೃತ ಬಾಲಕಿ ಮಾನ್ಯ ತಂದೆ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತಿದ್ದಾರೆ.

ಮಗು ಮೃತಪಟ್ಟ ಹಿನ್ನೆಲೆ ಅತ್ತಿಬೆಲೆಯಿಂದ ವರ್ತೂರು ಬರುವ ಮುಖ್ಯರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಈ ವೇಳೆ, ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X