ಬ್ಯಾಂಕ್ ಕಿರುಕುಳ | ಸಚಿವ ಜಮೀರ್ ನ್ಯಾಯ ಕೊಡಿಸಲಿಲ್ಲವೆಂದು ವಿಧಾನಸೌಧದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ದಂಪತಿ

Date:

Advertisements

ಸಾಲ ತೀರಿಸುವಂತೆ ಖಾಸಗಿ ಬ್ಯಾಂಕ್‌ನಿಂದ ನಿರಂತರ ಕಿರುಕುಳಕ್ಕೆ ಒಳಗಾದ ದಂಪತಿ ಬೆಂಗಳೂರಿನ ವಿಧಾನಸೌಧದ ಎದುರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಬೆಂಗಳೂರಿನ ಜಗಜೀವನ ರಾಮ್ ನಗರ (ಜೆಜೆ ನಗರ) ಗೋರಿಪಾಳ್ಯದ ಶಾಯಿಸ್ತಾ ದಂಪತಿ ಆತ್ಮಹತ್ಯೆಗೆ ಯತ್ನಿಸಿದವರು.

ದಂಪತಿ ಬೆಂಗಳೂರು ಸಹಕಾರಿ ಬ್ಯಾಂಕ್ನಿಂದ ವ್ಯಾಪಾರಕ್ಕಾಗಿ ₹50 ಲಕ್ಷ ಸಾಲ ಪಡೆದಿದ್ದರು. ಸಾಲ ಪಡೆದ ದಂಪತಿಯಿಂದ ಬ್ಯಾಂಕ್‌ ಈಗಾಗಲೇ ₹95 ಲಕ್ಷ ಹಣ ಪಾವತಿಸಿಕೊಂಡಿದೆ. ಆದರೂ, ಇನ್ನು 1 ಕೋಟಿ 41 ಲಕ್ಷ ಹಣ ಪಾವತಿ ಮಾಡಬೇಕು ಎಂದು ಬ್ಯಾಂಕ್ಸಿಬ್ಬಂದಿ ಹೇಳಿದ್ದರು.

Advertisements

ಸಾಲ ಪಾವತಿಸದ ಹಿನ್ನೆಲೆ, ಬ್ಯಾಂಕ್ನವರು ಜಮೀನು ಹರಾಜು ಹಾಕಿದ್ದರು. ಇದರಿಂದ ಮನನೊಂದ ಮುಸ್ಲಿಂ ದಂಪತಿ ಬುಧವಾರ 11. 45 ಗಂಟೆಗೆ ವಿಧಾನಸೌಧ ಮೂರನೇ ಗೇಟ್ ಮುಂದೆ ನ್ಯಾಯಕ್ಕಾಗಿ ಆಗ್ರಹಿಸಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ದಂಪತಿಯನ್ನು ತಡೆದು, ಸಂತ್ರಸ್ತ ಕುಟುಂಬವನ್ನು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅತ್ತೆ ಮನೆಯಲ್ಲಿ ಕಳ್ಳತನ!

“ಶುಂಠಿ ವ್ಯಾಪಾರಕ್ಕೆ ಮನೆಯನ್ನು ಒತ್ತೆಯಿಟ್ಟು 50 ಲಕ್ಷ ಸಾಲ ಪಡೆದಿದ್ದೆವು. ಬ್ಯಾಂಕ್‌ನವರು ಕೇವಲ ₹1.41 ಕೋಟಿಗೆ ಮೂರು ಕೋಟಿ ಮೌಲ್ಯದ ಮನೆಯನ್ನು ಹರಾಜು ಹಾಕಿದ್ದಾರೆ. ಇದರಿಂದ ಸಾಲ ಪಡೆದ ನಮಗೆ ಬ್ಯಾಂಕ್ಅನ್ಯಾಯ ಮಾಡಿದೆ. ನಮ್ಮ ಕುಟುಂಬ ಬೀದಿಗೆ ಬಿದ್ದಿದೆ. ಸಚಿವ ಜಮೀರ್ ಅಹಮದ್ಖಾನ್ ಅವರಿಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದೆವು. ಅವರು ನ್ಯಾಯ ಕೊಡಿಸಲಿಲ್ಲಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X