ಗಾಂಜಾ ಇಡುತ್ತೇನೆ ಎಂದು ಹೆದರಿಸಿ ದಂಪತಿಯಿಂದ ಒಂದೂವರೆ ಕೋಟಿ ಹಣ ವಸೂಲಿ ಮಾಡಿದ ನಕಲಿ ಪೊಲೀಸ್

Date:

Advertisements

ಹಣ ನೀಡದಿದ್ದರೆ ಮನೆಯಲ್ಲಿ ಗಾಂಜಾ ಇಡುತ್ತೇನೆ ಎಂದು ಹೆದರಿಸಿ ನಕಲಿ ಪೊಲೀಸ್‌ ವೇಷಧಾರಿವೊಬ್ಬ ದಂಪತಿಯಿಂದ ಬರೋಬ್ಬರಿ ಒಂದೂವರೆ ಕೋಟಿ ಹಣ ವಸೂಲಿ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನ 3ನೇ ಸೆಕ್ಷನ್‌ ಫ್ಲಾಟ್ ನಲ್ಲಿ ಉತ್ತರ ಭಾರತ ಮೂಲದ ದಂಪತಿ ವಾಸ ಮಾಡುತ್ತಿದ್ದರು. ಡಿಸೆಂಬರ್ 17ರಂದು ರಾತ್ರಿ 9:30ರ ಸುಮಾರಿಗೆ ಪೊಲೀಸ್‌ ವೇಷದಲ್ಲಿ ಬಂದ ಆರೋಪಿ ಹಣ ನೀಡದಿದ್ದರೇ, ಮನೆಯಲ್ಲಿ ಗಾಂಜಾ ಇಡುತ್ತೇವೆ ಎಂದು ಬೆದರಿಕೆ ಹಾಕಿದ್ದಾನೆ.

ಮನೆಯಲ್ಲಿರುವ ಹಣ ಮತ್ತು ಒಡವೆ ನೀಡುವಂತೆ ಹೇಳಿದ್ದಾನೆ. ಆತನನ್ನೇ ನಿಜವಾದ ಪೊಲೀಸ್ ಎಂದು ಭಾವಿಸಿದ ದಂಪತಿ ಆತ ಹೇಳಿದ ಹಾಗೇ ಕೇಳಿದ್ದಾರೆ.

Advertisements

ಆರೋಪಿ ಮೊದಲಿಗೆ ಮನೆಯ ಮಾಲೀಕ ಸಂಜೀವ್ ಭೋರಾ ಅವರನ್ನು ಕರೆದುಕೊಂಡು ಹೋಗಿ ಅವರ ಎಟಿಎಂನಿಂದ ಹಣ ಡ್ರಾ ಮಾಡಿಸಿಕೊಂಡು ಮತ್ತೆ ಅವರ ಜೊತೆಗೆ ಅವರ ಮನೆಗೆ ಬಂದಿದ್ದಾನೆ. ನಂತರದಲ್ಲಿ ಭೋರಾ ಅವರ ದಂಪತಿಯನ್ನು ಆಕೆಯ ಎಟಿಎಂ ಕಾರ್ಡ್‌ನೊಂದಿಗೆ ಕರೆದುಕೊಂಡು ಹೋಗಿ ಆಕೆಯ ಬಳಿಯಿಂದಲೂ ಹಣ ಡ್ರಾ ಮಾಡಿಸಿಕೊಂಡು ಆಕೆಯನ್ನು ಮನೆಗೆ ಬಿಟ್ಟು ಪರಾರಿಯಾಗಿದ್ದಾನೆ.

ದಂಪತಿಯ ಬಳಿಯಿಂದ ಆರೋಪಿ ಬರೋಬ್ಬರಿ ಒಂದೂವರೆ ಕೋಟಿ ಹಣ ಡ್ರಾ ಮಾಡಿಸಿಕೊಂಡಿದ್ದಾನೆ. ಘಟನೆ ನಡೆದ ಮೂರು ದಿನಗಳ ಬಳಿಕ ಮನೆಗೆ ಬಂದಿರುವುದು ನಕಲಿ ಪೊಲೀಸ್ ಎಂದು ದಂಪತಿಗೆ ತಿಳಿದುಬಂದಿದೆ. ಆರೋಪಿ ಬೆಳಗಿನ ಜಾವ 3 ಗಂಟೆವರೆಗೆ ದಂಪತಿ ಮನೆಯಲ್ಲಿ ಸುತ್ತಾಡಿದ್ದಾನೆ.

ಈ ಸುದ್ದಿ ಓದಿದ್ದೀರಾ? ಕ್ರಿಸ್​ಮಸ್ ಹಬ್ಬ | ಚರ್ಚ್‌ಗಳಲ್ಲಿ ಕ್ರೈಸ್ತ ಬಾಂಧವರ ವಿಶೇಷ ಪ್ರಾರ್ಥನೆ: ಚರ್ಚ್ ಸುತ್ತಮುತ್ತ ಪೊಲೀಸರ ಗಸ್ತು

ಬಳಿಕ, ಡಿಸೆಂರ್‌ 20ರಂದು ದಂಪತಿ ಎಚ್‌ಎಸ್‌ಆರ್‌ ಲೇಔಟ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿ ಕ್ಯಾಮೆರಾ ಆಧರಿಸಿ ಆರೋಪಿ ಪತ್ತೆ ಕಾರ್ಯ ಆರಂಭಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X