ಬೆಂಗಳೂರು | ಹೊಸ ಕಾರಿನ ಮೇಲೆ ಬಿದ್ದ ದೊಡ್ಡ ಮರ; ಕಾರು ಸಂಪೂರ್ಣ ಜಖಂ

Date:

Advertisements

ಹೊಚ್ಚ ಹೊಸ ಕಾರಿನ ಮೇಲೆ ದೊಡ್ಡ ಒಣಗಿದ ಮರ ಬಿದ್ದು, ಕಾರು ಸಂಪೂರ್ಣವಾಗಿ ಜಖಂ ಆದ ಘಟನೆ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿ ನಡೆದಿದೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ನಗರದ ಹೃದಯ ಭಾಗದ ಲ್ಯಾವೆಲ್ಲೆ ರಸ್ತೆಯಲ್ಲಿ ಮೇ 2ರಂದು ಬೆಳಗ್ಗೆ 9.15ರ ಸುಮಾರಿಗೆ ಹಳೆಯ ದೊಡ್ಡದಾದ ಒಣಗಿದ ಮರವೊಂದು ನೆಲಕ್ಕುರುಳಿದೆ.

ಬೌರಿಂಗ್ ಇನ್‌ಸ್ಟಿಟ್ಯೂಟ್ ಹಿಂಭಾಗದಲ್ಲಿರುವ ದಕ್ಷಿಣ್ ಹೋಂಡಾ ಕಾರ್ ಡೀಲರ್‌ಶಿಪ್ ಎದುರು ಹೊಸದಾಗಿ ನೋಂದಾಯಿಸಲಾದ ಹೋಂಡಾ ಎಲಿವೇಟ್ ಎಸ್‌ಯುವಿ ಕಾರು ನಿಲ್ಲಿಸಲಾಗಿತ್ತು. ಒಣಗಿದ ಮರವು ಈ ಹೊಚ್ಚ ಹೊಸ ಕಾರಿನ ಮೇಲೆ ಬಿದ್ದಿದೆ. ಅದರ ಛಾವಣಿ ಮತ್ತು ವಿಂಡ್‌ಶೀಲ್ಡ್ ಹಾನಿಗೊಳಗಾಗಿದೆ. ಯಾರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.

Advertisements

ಸ್ಥಳಕ್ಕೆ ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ದೌಡಾಯಿಸಿ ಅವಶೇಷಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

“ಬೌರಿಂಗ್ ಇನ್ಸ್ಟಿಟ್ಯೂಟ್ ಕಾಂಪೌಂಡ್ ಗೋಡೆಯಿಂದ ಚಾಚಿಕೊಂಡಿರುವ ಮರವು ಹಲವಾರು ವರ್ಷಗಳಿಂದ ಒಣಗಿದೆ. ಅಲ್ಲದೇ, ಬಿಸಿಲಿನ ತಾಪಕ್ಕೆ ಮರ ಬಿದ್ದಿರುವ ಸಾಧ್ಯತೆ ಇದೆ” ಎಂದು ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದರು.

ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಸಂಚಾರ ಪೊಲೀಸರು ಪ್ರಯಾಣಿಕರು ಪರ್ಯಾಯ ಮಾರ್ಗದಲ್ಲಿ ತೆರಳುವಂತೆ ಸವಾರರಿಗೆ ಸಲಹೆ ಸೂಚನೆ ನೀಡಿ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೋರ್‌ವೆಲ್ ಕೊರೆಯುತ್ತಿರುವ ಜಲಮಂಡಳಿ; ಧೂಳಿನಲ್ಲಿ ಮುಳುಗಿದ ಬೆಂಗಳೂರು

ಮರಗಳು ಬಿದ್ದು ಸಾವು-ನೋವುಗಳಿಗೆ ಕಾರಣವಾಗುವ ಇಂತಹ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ವರದಿಯಾಗುತ್ತಿವೆ. ಏಪ್ರಿಲ್ 5 ರಂದು ಶಾಂತಿನಗರದ ನಂಜಪ್ಪ ರಸ್ತೆಯಲ್ಲಿ ದೊಡ್ಡ ಮರವೊಂದು ಉರುಳಿ ಬಿದ್ದ ಪರಿಣಾಮ ಚಂಚಲ್ ಚೌಧರಿ ಎಂಬುವವರು ಗಾಯಗೊಂಡಿದ್ದರು.

ಕಳೆದ ವರ್ಷ ಜುಲೈನಲ್ಲಿ 18 ವರ್ಷದ ರಾಜಶೇಖರ್ ಕೆ ವಿ ಎಂಬ ವಿದ್ಯಾರ್ಥಿಯು ಚಂದ್ರಿಕಾ ಹೋಟೆಲ್ ಜಂಕ್ಷನ್‌ನಲ್ಲಿ ಬೃಹತ್ ಮರವೊಂದು ಬಿದ್ದು ಅವರಿಗೆ ಗಂಭೀರ ಗಾಯಗಳಾಗಿದ್ದವು. ಈ ಘಟನೆ ನಡೆದು ಸುಮಾರು ಒಂದು ವರ್ಷ ಕಳೆದಿದೆ. ಆದರೆ, ರಾಜಶೇಖರ್ ಅವರು ಇನ್ನೂ ನಡೆಯಲು ಇನ್ನು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X