ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

Date:

Advertisements

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಫೆಬ್ರುವರಿ 26ರಿಂದ (ಸೋಮವಾರ) ಹೆಚ್ಚುವರಿ ಮೆಟ್ರೋ ರೈಲು ಸೇವೆ ಒದಗಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಯೋಜಿಸಿದೆ.

ಟ್ರಿನಿಟಿ, ಇಂದಿರಾನಗರ, ಬೆನ್ನಿಗಾನಹಳ್ಳಿ ಮತ್ತು ಕೆಆರ್ ಪುರ ಮೆಟ್ರೋ ನಿಲ್ದಾಣಗಳ ಕಡೆಗೆ ಹೋಗುವ ಪ್ರಯಾಣಿಕರ ಅವಶ್ಯಕತೆ ಪೂರೈಸಲು ಇದು ಸಹಾಯವಾಗಲಿದೆ.

”ಈ ಮಾರ್ಗದಲ್ಲಿ ಬೆಳಗ್ಗೆ 8.45 ರಿಂದ 10.20 ಗಂಟೆಯವರೆಗೆ, ಪ್ರತಿ ಮೂರು ನಿಮಿಷಕ್ಕೆ ಮೆಟ್ರೋ ರೈಲು ಸೇವೆಗಳು ವಾರದ ಎಲ್ಲ ದಿನಗಳಲ್ಲಿ (ಶನಿವಾರ, ಭಾನುವಾರ ಮತ್ತು ಸಾಮಾನ್ಯ ರಜಾ ದಿನಗಳನ್ನು ಹೊರತುಪಡಿಸಿ) ಲಭ್ಯವಿರುತ್ತವೆ” ಎಂದು ಹೇಳಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫೆ.24 ರಂದು ಐಐಎಸ್‌ಸಿಯಲ್ಲಿ ಓಪನ್ ಡೇ ಕಾರ್ಯಕ್ರಮ; ಸಂಚಾರ ಮಾರ್ಗ ಬದಲಾವಣೆ

”ಇದಲ್ಲದೆ, ಭಾರತೀಯ ರೈಲ್ವೆ / ಇಂಟರ್‌ಸಿಟಿ ಬಸ್‌ಗಳ ಮೂಲಕ ಬೆಂಗಳೂರು ನಗರಕ್ಕೆ ಮುಂಜಾನೆ ಆಗಮಿಸುವ ಪ್ರಯಾಣಿಕರ ಅನುಕೂಲಕ್ಕಾಗಿ, ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲ ದಿಕ್ಕುಗಳಿಗೆ ಮೊದಲ ರೈಲು ಭಾನುವಾರ ಹೊರತುಪಡಿಸಿ ವಾರದ ಎಲ್ಲ ದಿನಗಳಲ್ಲಿ ಬೆಳಗ್ಗೆ 5 ಗಂಟೆಗೆ ಪ್ರಾರಂಭವಾಗಲಿದೆ. ಸಾರ್ವಜನಿಕರು ಮೇಲಿನ ಬದಲಾವಣೆಗಳನ್ನು ಉಪಯೋಗಿಸುವಂತೆ ಕೋರಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X