ಬೆಂಗಳೂರು | ನಕಲಿ ಟಿಕೆಟ್ ಬಳಸಿ ವಿಮಾನ ನಿಲ್ದಾಣದೊಳಗೆ ಪ್ರವೇಶಿಸಿದ್ದ ಯುವಕನ ಬಂಧನ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ನಕಲಿ ಟಿಕೆಟ್ ಬಳಸಿ ಪ್ರವೇಶಿಸಿದ್ದ ಯುವಕನನ್ನು ನಗರದ ಏರ್‌ಪೋರ್ಟ್‌ ಸಿಬ್ಬಂದಿ ಬಂಧಿಸಿದ್ದಾರೆ.

ಪ್ರಖರ್ ಶ್ರೀವಾಸ್ತವ (24 ವರ್ಷ) ಬಂಧಿತ ಆರೋಪಿ. ಈತ ಮೂಲತಃ ಜಾರ್ಖಂಡ್‌ದವನು. ಬಂಧಿತನ ಸ್ನೇಹಿತೆ ಸಂಸ್ಕ್ರತಿ ಬೆಂಗಳೂರಿನಿಂದ ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಸ್ನೇಹಿತೆ ಸಂಸ್ಕ್ರತಿಯನ್ನು ಕಳುಹಿಸಿ ಕೊಡಲು ಪ್ರಖರ್ ಪ್ರಯಾಣದ ನಕಲಿ ಟಿಕೆಟ್ ತಯಾರಿಸಿ ವಿಮಾನ ನಿಲ್ದಾಣಕ್ಕೆ ಬಂದಿದ್ದನು.

ಅಲ್ಲದೇ, ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಒಳಗೆ ಬಂದಿದ್ದಾನೆ. ವಿಮಾನದಲ್ಲಿ ಪ್ರಯಾಣಿಸದೆ, ಸ್ನೇಹಿತೆಯನ್ನು ಕಳುಹಿಸಿ ವಾಪಸ್ಆಗಿದ್ದಾನೆ.

Advertisements

ಸ್ನೇಹಿತೆಯನ್ನು ಕಳುಹಿಸಿ ವಾಪಾಸ್ ಬರುವಾಗ ಗೇಟ್ ನಂ. 9 ಭದ್ರತಾ ಸಿಬ್ಬಂದಿ ಪ್ರಶ್ನೆ ಮಾಡಿದ್ದಾರೆ. ಆಗ, ನನಗೆ ತುರ್ತು ಕರೆ ಬಂದ ಕಾರಣ ನಾನು ವಾಪಾಸಾಗುತ್ತಿದ್ದೇನೆ ಎಂದು ಹೇಳಿದ್ದಾನೆ.

ಈತನ ಹೇಳಿಕೆಯಿಂದ ಅನುಮಾನಗೊಂಡ ಭದ್ರತಾ ಸಿಬ್ಬಂದಿ ಪ್ರಖರ್ ಪ್ರಯಾಣದ ಟಿಕೆಟ್ಅನ್ನು ಮತ್ತೊಮ್ಮೆ ಪರಿಶೀಲಿಸಿದ್ದಾರೆ. ಆಗ ಅದು ನಕಲಿ ಟಿಕೆಟ್‌ ಎಂಬುವುದು ತಿಳಿದುಬಂದಿದೆ. ಕೂಡಲೇ, ಪ್ರಖರ್‌ನನ್ನು ವಿಮಾನ ನಿಲ್ದಾಣದ ಸಿಬ್ಬಂದಿ ವಶಕ್ಕೆ ಪಡೆದು ವಿಮಾನ ನಿಲ್ದಾಣದ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಪ್ರಕರಣದ ಶಂಕಿತ ಆರೋಪಿ ಶಬ್ಬೀರ್ ಎನ್ಐಎ ವಶಕ್ಕೆ

ಪ್ರಖರನನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ ಸ್ನೇಹಿತೆಯನ್ನು ನಿಲ್ದಾಣದ ಒಳಗಿನಿಂದ ಕಳುಹಿಸಲು ಈ ರೀತಿ ನಕಲು ವಿಮಾನ ಟಿಕೆಟ್ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.

ವಿಮಾನ ನಿಲ್ದಾಣದ ಒಳಗೆ ಅತಿಕ್ರಮಣ, ನಕಲಿ ಟಿಕೆಟ್ಮತ್ತು ವಂಚನೆಯ ಅಡಿಯಲ್ಲಿ ಆರೋಪಿ ವಿರುದ್ಧ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X