ಬೆಂಗಳೂರು | ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್​ ಧ್ವಂಸಗೊಳಿಸಿದ ಆರು ಕಿಡಿಗೇಡಿಗಳ ಬಂಧನ

Date:

Advertisements

ರಸ್ತೆ ಬದಿ ಪಾರ್ಕ್‌ ಮಾಡಿದ್ದ ಕಾರು ಮತ್ತು ಬೈಕ್‌ಗಳನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ರಾಜಗೋಪಾಲನಗರ ಠಾಣಾ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಗಳು ಏರಿಯಾದಲ್ಲಿ ಹವಾ ಇಡಲು, ಕಂಠಪೂರ್ತಿ ಕುಡಿದು ಬೈಕ್​ಗಳಲ್ಲಿ ಬಂದು ಮನಬಂದಂತೆ ರಾಡ್ ಮತ್ತು ಲಾಂಗ್​ಗಳಿಂದ 15 ಕಾರು ಹಾಗೂ ಬೈಕ್​ಗಳ ಗ್ಲಾಸ್ ಪುಡಿ ಪುಡಿ ಮಾಡಿ ಪರಾರಿಯಾಗಿದ್ದರು.

ಏನಿದು ಘಟನೆ?

Advertisements

ಬೆಂಗಳೂರಿನ ಲಗ್ಗೆರೆಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ 15 ಕಾರು ಮತ್ತು ಬೈಕ್‌ಗಳನ್ನು ದೊಣ್ಣೆ, ಲಾಂಗುಗಳಿಂದ ಕಾರಿನ ಗಾಜು ಪುಡಿ ಪುಡಿ ಮಾಡಿ ಹಾನಿ ಮಾಡಿದ್ದರು.

ಮುಖಕ್ಕೆ ಗೂಬೆ ಮುಖದ ಮಾಸ್ಕ್ ಧರಿಸಿದ್ದ ಪುಂಡರ ಗುಂಪು ಈ ಕೃತ್ಯ ಎಸಗಿತ್ತು. ಲಗ್ಗೆರೆಯ ರಾಜೀವ್ ಗಾಂಧಿನಗರದಲ್ಲಿ ನವೆಂಬರ್ 10 ರಂದು (ಶುಕ್ರವಾರ) ಬೆಳಗಿನ ಜಾವ 3 ಗಂಟೆಗೆ ಈ ಘಟನೆ ನಡೆದಿದೆ. ಪುಂಡರ ಅಟ್ಟಹಾಸಕ್ಕೆ 15 ಕಾರು, ಬೈಕ್, ಆಟೋರಿಕ್ಷಾ ಸೇರಿ 17 ವಾಹನಗಳು ಜಖಂಗೊಂಡಿದ್ದವು.

ಪುಂಡರ ಗುಂಪೊಂದು ಮಾರಕಾಸ್ತ್ರ ಹಿಡಿದು ರಾಜೀವ್ ಗಾಂಧಿ ನಗರಕ್ಕೆ ಬಂದಿದ್ದು, ಈ ವೇಳೆ ರಸ್ತೆಗೆ ಹೊಂದಿಕೊಂಡಂತೆ ಮನೆಗಳ ಬಳಿ ನಿಲುಗಡೆ ಮಾಡಿದ್ದ ಕಾರುಗಳು ಹಾಗೂ ಆಟೋ ರಿಕ್ಷಾಗಳ ಮೇಲೆ ಮಾರಕಾಸ್ತ್ರಗಳಿಂದ ಹೊಡೆದಿದ್ದಾರೆ. ಅದರಿಂದ ವಾಹನಗಳ ಗಾಜುಗಳು ಪುಡಿಯಾಗಿ ವಾಹನಗಳಿಗೆ ಹಾನಿಯಾಗಿದೆ.

ಈ ಸುದ್ದಿ ಓದಿದ್ದೀರಾ? ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್‌ ಪ್ರಕರಣ: ಮೂವರ ವಿರುದ್ಧ ಎಫ್‌ಐಆರ್ ದಾಖಲು

ಘಟನಾ ಸ್ಥಳದ ಸುತ್ತಮುತ್ತಲ ಕಟ್ಟಡಗಳ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಲಾಗಿದೆ. ದುಷ್ಕರ್ಮಿಗಳು ಮುಖಕ್ಕೆ ಗೂಬೆ ಮುಖದ ಮಾಸ್ಕ್ ಧರಿಸಿಕೊಂಡು ಈ ಕೃತ್ಯ ಎಸಗಿದ್ದಾರೆ.

ಸ್ಥಳಕ್ಕೆ ಶಾಸಕ ಮುನಿರತ್ನ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದರು. ಸ್ಥಳಕ್ಕೆ ರಾಜಗೋಪಾಲನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಘಟನೆ ಸಂಬಂಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X