ಬೆಂಗಳೂರು | ಕಾರು ಅಡ್ಡಗಟ್ಟಿ ಸುಲಿಗೆ ಮಾಡಲು ಯತ್ನ; ಮೂವರ ಬಂಧನ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಬೈಕ್‌ಗೆ ಢಿಕ್ಕಿ ಹೊಡೆದಿದ್ದೀರಿ’ ಎಂದು ಕಾರನ್ನು ಅಡ್ಡಗಟ್ಟಿ ಸುಲಿಗೆ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದೀಗ, ನಗರದ ಸರ್ಜಾಪುರ-ಅತ್ತಿಬೆಲೆ ರಸ್ತೆಯಲ್ಲಿ ಟೆಕ್ಕಿಯೊಬ್ಬರ ಕಾರನ್ನು ಅಡ್ಡಗಟ್ಟಿ ಸುಲಿಗೆ ಮಾಡಲು ಯತ್ನಿಸಿದ ಮೂವರನ್ನು ಬೆಂಗಳೂರು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಚರಣ್ ಪಾಲ್ ಸಿಂಗ್ ಟೆಕ್ಕಿ. ಇವರು ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾನುವಾರ ಸಾಯಂಕಾಲ ಬೆಂಗಳೂರಿನ ಸರ್ಜಾಪುರ-ಅತ್ತಿಬೆಲೆ ರಸ್ತೆಯಲ್ಲಿ ಕಾರಿನಲ್ಲಿ ಸಹೋದ್ಯೋಗಿಗಳ ಜತೆಗೆ ತೆರಳುತ್ತಿದ್ದರು.

ಈ ವೇಳೆ, ಸ್ಕೋಟರ್‌ನಲ್ಲಿ ಬಂದ ನಾಲ್ವರು ಕಿಡಿಗೇಡಿಗಳು ‘ನಮ್ಮ ಬೈಕ್​ಗೆ ಡಿಕ್ಕಿ ಹೊಡೆದಿದ್ದೀರಿ, ಹಣ ನೀಡಿ’ ಎಂದು  ಕಾರ್‌ನ್ನು ಅಡ್ಡಗಟ್ಟಿ ಹಣ ನೀಡುವಂತೆ ಕೇಳಿದ್ದಾರೆ.

Advertisements

ಈ ಸಮಯದಲ್ಲಿ ಚರಣ್ ಸಿಂಗ್ ಹಾಗೂ ಸಹೋದ್ಯೋಗಿಗಳು ಕಾರಿನಲ್ಲಿಯೇ ಕುಳಿತಿದ್ದರು. ಚರಣ್ ಅವರು ನಾವು ಯಾವುದೇ ವಾಹನಕ್ಕೆ ಢಿಕ್ಕಿ ಹೊಡೆದಿಲ್ಲ ಹಣ ನೀಡುವುದಿಲ್ಲ ಎಂದು ಹೇಳಿದರೂ ಕೇಳದ ನಾಲ್ವರು ಕಿಡಿಗೇಡಿಗಳು ಕಾರಿನ ಗಾಜನ್ನು ಓಡೆದು ಬೆದರಿಕೆ ಹಾಕಲು ಮುಂದಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದೇವಾಲಯಗಳಲ್ಲಿ ಜ.10 ರಿಂದ ವಸ್ತ್ರಸಂಹಿತೆ ಜಾರಿ

ಕಾರು ಮುಂದೆ ತೆರಳದಂತೆ ಓರ್ವ ಕಿಡಿಗೇಡಿ ವಾಹನದ ಮುಂದೆ ನಿಂತರೇ, ಮತ್ತೋರ್ವ ಕಿಟಕಿಯ ಬಳಿ ಬಂದು ಬೆದರಿಕೆ ಹಾಕುತ್ತಿದ್ದನು. ಚರಣ ಅವರು ಭಯದಿಂದ ಕಾರನ್ನು ಚಾಲನೆ ಮಾಡಿ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಈ ವೇಳೆ, ಆರೋಪಿಗಳು ಸಹ ವಾಹನವನ್ನು ಹಿಂಬಾಲಿಸಿದ್ದಾರೆ. ಇಡೀ ಘಟನೆ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಬಗ್ಗೆ ಸಾಫ್ಟ್‌ವೇರ್ ಎಂಜಿನಿಯರ್ ಚರಣ್ ಪಾಲ್ ಸಿಂಗ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವು ಜನ ಕಮೆಂಟ್ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

Download Eedina App Android / iOS

X