ಬೆಂಗಳೂರು | ಹೆಚ್ಚು ಕೆಲಸ ಮಾಡು ಎಂದ ಸಹೋದ್ಯೋಗಿ ಕೊಲೆಗೈದ ಆರೋಪಿ ಬಂಧನ

Date:

Advertisements

‘ನಿನಗೆ ಕೆಲಸದ ಅನುಭವವಿದೆ ಹಾಗಾಗಿ, ಹೆಚ್ಚು ಕೆಲಸ ಮಾಡು’ ಎಂದು ಹೇಳಿದ ಸಹೋದ್ಯೋಗಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸದ್ಯ ಆರೋಪಿಯನ್ನು ಬೇಗೋರು ಪೊಲೀಸರು ಬಂಧಿಸಿದ್ದಾರೆ.

ಗುಲ್ಫಾಮ್ ಮೃತ ವ್ಯಕ್ತಿ. ಈತನು ಮೂಲತಃ ಉತ್ತರ ಪ್ರದೇಶದ ಬರೇಲಿಯ ಮುರ್ಷಿದಾಬಾದ್‌ ಗ್ರಾಮದವನು. ದಿಲ್ಖುಷ್ ಬಂಧಿತ ಆರೋಪಿ. ಈತನು ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದಾನೆ.

ಬಂಧಿತ ಆರೋಪಿ ಫ್ಯಾಬ್ರಿಕೇಟರ್‌ ಆಗಿ ದೇವರಚಿಕ್ಕನಹಳ್ಳಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದನು. ಮೃತ ವ್ಯಕ್ತಿಯೂ ಅಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದನು.

Advertisements

ನಿನಗೆ ಕೆಲಸದ ಅನುಭವವಿದೆ ಹಾಗಾಗಿ, ನೀನು ಹೆಚ್ಚು ಕೆಲಸ ಮಾಡು ಎಂದು ಮೃತ ಗುಲ್ಫಾಮ್, ದಿಲ್ಖುಷ್ ಮೇಲೆ ಒತ್ತಡ ಹೇರುತ್ತಿದ್ದನು. ಈ ವಿಚಾರವಾಗಿ ಇಬ್ಬರ ಮಧ್ಯೆ ಆಗಾಗ ಜಗಳವಾಗುತ್ತಿತ್ತು ಎಂದು ತಿಳಿದುಬಂದಿದೆ. ಒಂದು ದಿನ ಗುಲ್ಫಾಮ್ ಮಲಗಿದ್ದಾಗ ಆತನ ಮೇಲೆ ದಿಲ್ಖುಷ್ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗೀಸರ್‌ ಗ್ಯಾಸ್‌ ಸೋರಿಕೆಯಿಂದ ಯುವತಿ ಸಾವು

ಘಟನಾ ಸ್ಥಳಕ್ಕೆ ಆಗಮಿಸಿ ಬೇಗೋರು ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಮುಂದುವರೆಸಿದ್ದರು. ಈ ವೇಳೆ, ಘಟನೆ ನಡೆದ ಬಳಿಕ ಗುಲ್ಫಾಮ್ ಜತೆಗೆ ಮಲಗುತ್ತಿದ್ದ ವ್ಯಕ್ತಿ ದಿಲ್ಖುಷ್ ವಾರಾಣಾಸಾಗಿ ತೆರಳಿದ್ದನು. ಇದರಿಂದ ಅನುಮಾನಗೊಂಡ ಪೊಲೀಸರು ವಾರಣಾಸಿಗೆ ತೆರಳಿ ದಿಲ್ಖುಷ್​ನನ್ನು ಅವನ ನಿವಾಸದಲ್ಲಿ ಬಂಧಿಸಿದ್ದಾರೆ. ಆತನ ಕೂಡ ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಬೇಗೂರು ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X