ಬೆಂಗಳೂರು | ಕರ್ತವ್ಯ ನಿರತ ಸಂಚಾರ ಪೊಲೀಸ್‌ ಮೇಲೆ ಹಲ್ಲೆ: ಬಂಧನ

Date:

Advertisements

ರೋಡ್‌ನಿಂದ ಪಕ್ಕಕ್ಕೆ ಹೋಗು ಎಂದ ಬೆಂಗಳೂರು ಸಂಚಾರ ಪೊಲೀಸ್‌ ಕಾನ್‌ಸ್ಟೆಬಲ್ ಗೆ ವ್ಯಕ್ತಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಜು ಬಂಧಿತ ಆರೋಪಿ. ನಗರದ ಕೆ.ಎಸ್.ಲೇಔಟ್ ಸಂಚಾರ ಠಾಣೆ ಕಾನ್‌ಸ್ಟೆಬಲ್ ಕರಿಬಸವಯ್ಯ ಅವರು ಉತ್ತರಹಳ್ಳಿ ಬಳಿಯ ಹರೇಹಳ್ಳಿ ಸಮೀಪ ಡಿಸೆಂಬರ್ 23ರಂದು ಎಂದಿನಂತೆ ಟ್ರಾಫಿಕ್ ನಿರ್ವಹಣೆ ಕೆಲಸ ಮಾಡುತ್ತಿದ್ದರು. ಈ ವೇಳೆ, ಬಂಧಿತ ಆರೋಪಿ ರಾಜುಗೆ ಕಾನ್‌ಸ್ಟೆಬಲ್ ರೋಡ್‌ನಿಂದ ಪಕ್ಕಕ್ಕೆ ತೆರಳುವಂತೆ ಹೇಳಿದ್ದರು.

ಇದಕ್ಕೆ ಕೋಪಗೊಂಡ ರಾಜು ಕಾನ್‌ಸ್ಟೆಬಲ್ ಕರಿಬಸಯ್ಯ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ. ಬಳಿಕ ರಾಜು ಕಾನ್‌ಸ್ಟೆಬಲ್ ಕರಿಬಸಯ್ಯ ಅವರಿಗೆ ಹಲ್ಲೆ ಮಾಡಿದ್ದಾರೆ. ಈ ವೇಳೆ, ಇಬ್ಬರು ಕೈ ಕೈ ಮಿಲಾಯಿಸಿದ್ದಾರೆ. ಬಳಿಕ, ಆರೋಪಿ ಪರಾರಿಯಾಗುವುದನ್ನು ಗಮನಿಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಳೆ ವೈಷಮ್ಯ: ಸಚಿವರ ಮನೆ ಸಮೀಪ ರೌಡಿಶೀಟರ್​ ಬರ್ಬರ ಹತ್ಯೆ

ಸದ್ಯ ಆರೋಪಿ ವಿರುದ್ಧ ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X