ಬೆಂಗಳೂರು | ಮಹಿಳಾ ಪ್ರಯಾಣಕಿ ಮೇಲೆ ಆಟೋ ಚಾಲಕನಿಂದ ಹಲ್ಲೆ

Date:

Advertisements

ಆಟೋ ಚಾಲಕನೊಬ್ಬ ಮಹಿಳಾ ಪ್ರಯಾಣಕಿ ಮೇಲೆ ಅನುಚಿತ ವರ್ತನೆ ತೋರಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಬೆಳ್ಳಂದೂರಿನಲ್ಲಿ ನಡೆದಿದೆ.

ಜನವರಿ 20ರಂದು ಬೆಳಗ್ಗೆ 8.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಮಹಿಳೆಯೊಬ್ಬರು ಬೆಂಗಳೂರಿನ ವೈಟ್‌ಫೀಲ್ಡ್‌ ತುಬರಹಳ್ಳಿಗೆ ತೆರಳುವುದಕ್ಕೆ ಆಟೋವೊಂದನ್ನು ಬುಕ್ ಮಾಡಿದ್ದರು. ಮಹಿಳೆ ನೀಡಿದ ಸ್ಥಳಕ್ಕೆ ಆಟೋ ಬಂದ ನಂತರ ಬುಕ್ಕಿಂಗ್ ರೈಡ್ ಕ್ಯಾನ್ಸ್‌ಲ್ ಆಗಿದೆ.

ಇದಕ್ಕೆ ಜಗಳ ಆರಂಭಿಸಿದ ಆಟೋ ಚಾಲಕ ರಸ್ತೆಯಲ್ಲಿ ಮಹಿಳೆಯನ್ನು ಎಳೆದಾಡಿ ಆಕೆಯ ಜತೆಗೆ ಅನುಚಿತವಾಗಿ ವರ್ತಿಸಿದ್ದಾನೆ. ಅಲ್ಲದೇ, ಮಹಿಳೆ ಮೇಲೆ ಗುಂಡಾವರ್ತನೆ ತೋರಿ ಹಲ್ಲೆ ಮಾಡಿದ್ದಾನೆ. ಆಟೋ ಚಾಲಕ ಮಹಿಳೆ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಮತದಾರರ ಜಾಗೃತಿಗೆ ವ್ಯಂಗ್ಯ ಚಿತ್ರಕಾರರ ಕಾರ್ಯಾಗಾರ ಮತ್ತು ಪ್ರದರ್ಶನ

ಮಹಿಳೆ ಬೆಂಗಳೂರಿನಲ್ಲಿ ಯಾವುದೇ ದೂರು ದಾಖಲು ಮಾಡಿಲ್ಲ. ಆದರೆ, ಆಕೆ ತನ್ನ ಸ್ನೇಹಿತನಿಂದ ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು ಸದ್ಯ ಆಟೋ ಚಾಲಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X