ಬೆಂಗಳೂರು | ಘನತ್ಯಾಜ್ಯ ನಿರ್ವಹಣೆ ಬಗ್ಗೆ ನಾಗರಿಕರಲ್ಲಿ ಜಾಗೃತಿ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮಾರ್ಚ್‌ 17ರಂದು ಘನತ್ಯಾಜ್ಯ ನಿರ್ವಹಣೆಗೆ ಕುರಿತಂತೆ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸಲಾಯಿತು.

ಘನತ್ಯಾಜ್ಯ ನಿರ್ವಹಣೆ ಕುರಿತಂತೆ ದಕ್ಷಿಣ ವಲಯದ ನಾನಾ ಸ್ಥಳಗಳಲ್ಲಿ ‘ತ್ಯಾಜ್ಯ ವಿಂಗಡಣೆ, ಪರಿಸರ ಸ್ವಚ್ಛತೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ’ ಕುರಿತಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಂಬಂಧ ದಕ್ಷಿಣ ವಲಯದ ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಜಂಟಿ ಆಯುಕ್ತ ಶಿವಕುಮಾರ್ ರವರ ಅಧ್ಯಕ್ಷತೆ ಹಾಗೂ ಮುಖ್ಯ ಅಭಿಯಂತರ ಎಸ್.ವಿ ರಾಜೇಶ್ ರವರ ನೇತೃತ್ವದಲ್ಲಿ ಸ್ಥಳೀಯ ಮಟ್ಟದಲ್ಲಿ ಸಾಮೂಹಿಕವಾಗಿ ಮಾಹಿತಿ, ಶಿಕ್ಷಣ ಮತ್ತು ಸಂವಹನ (IEC, Information, Education and Communication) ಚಟುವಟಿಕೆಯನ್ನು ನಡೆಸಲಾಯಿತು.

ದಕ್ಷಿಣ ವಲಯದಲ್ಲಿ ಘನತ್ಯಾಜ್ಯ ವಿಲೇವಾರಿ, ಹಸಿ ಕಸ, ಒಣ ಕಸ ಹಾಗೂ ಸ್ಯಾನಿಟರಿ ಕಸ ವಿಂಗಡಣೆ, ಮೂಲದಲ್ಲಿಯೆ ತ್ಯಾಜ್ಯವನ್ನು ಸಂಸ್ಕರಿಸುವ, ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಷೇಧ, ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಬಿಸಾಡದಿರುವುದು, ಖಾಲಿ ನಿವೇಶನಗಳಲ್ಲಿ ಕಸ ಹಾಕದಿರುವುದು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸಲಾಯಿತು.

Advertisements

ಪ್ರತಿನಿತ್ಯ ಆಟೋ ಟಿಪ್ಪರ್‌ಗಳ ಮೂಲಕ ಮನೆ ಮನೆಗೆ ತರಳಿ ಹಸಿ ಕಸ ಸಂಗ್ರಹಿಸಲಾಗುತ್ತದೆ. ಇನ್ನು ವಾರಕ್ಕೆ ಎರಡು ದಿನಗಳ ಕಾಲ ಒಣ ಕಸವನ್ನು ಸಂಗ್ರಹಿಸಲಾಗುತ್ತದೆ. ಎಲ್ಲ ನಾಗರಿಕರು ರಸ್ತೆ, ಬೀದಿ ಬದಿ ಹಾಗೂ ಖಾಲಿ ನಿವೇಶನಗಳಲ್ಲಿ ಕಸವನ್ನು ಬಿಸಾಡದೆ ಆಟೋ ಟಿಪ್ಪರ್‌ಗಳಿಗೆ ಕಸವನ್ನು ನೀಡಿ ನಗರವನ್ನು ಸ್ವಚ್ಛ – ಸುಂದರ ನಗರವನ್ನಾಗಿಸುವ ಪಣವನ್ನು ಎಲ್ಲರೂ ತೊಡೋಣ ಎಂದು ಅರಿವು ಮೂಡಿಸಲಾಯಿತು.

ಘನತ್ಯಾಜ್ಯ ಸಮರ್ಪಕ ನಿರ್ವಹಣೆಯ ಕುರಿತು ಭಿತ್ತಿ ಪತ್ರ ಹಂಚುತ್ತಾ, ರಸ್ತೆಯುದ್ದಕ್ಕೂ ಜಾಗೃತಿ ಘೋಷಣೆ ಕೂಗುತ್ತಾ ನಾಗರಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಯಿತು.

ಬೀದಿ ನಾಟಕದ ಮೂಲಕ ಅರಿವು

ಘನತ್ಯಾಜ್ಯ ನಿರ್ವಹಣೆ ಕುರಿತಂತೆ ನಾನಾ ಸ್ಥಳಗಳಲ್ಲಿ ಬೀದಿ ನಾಟಕಗಳನ್ನು ಆಯೋಜಿಸಿ ನಾಟಕದ ಮೂಲಕ ಕಸ ವಿಂಗಡಣೆ, ಪ್ಲಾಸ್ಟಿಕ್ ನಿಷೇಧ ಸೇರಿದಂತೆ ಇನ್ನಿತರೆ ವಿಚಾರಗಳ ಕುರಿತು ನಾಗರಿಕರಲ್ಲಿ ಅರಿವು ಮೂಡಿಸಲಾಯಿತು.

ಮಡಿವಾಳ ಹಾಗೂ ಸಾರಕ್ಕಿ ಮಾರುಕಟ್ಟೆಯಲ್ಲಿ ಬಟ್ಟೆ ಬ್ಯಾಗ್ ಹಂಚುವ ಮೂಲಕ ಜಾಗೃತಿ

ನಗರದ ಮಡಿವಾಳ ಹಾಗೂ ಸಾರಕ್ಕಿ ಮಾರುಕಟ್ಟೆಗೆ ಬಂದಂತಹ ನಾಗರಿಕರಿಗೆ ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಸಂಪೂರ್ಣ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ಬಳಕೆ ಪರಿಸರಕ್ಕೆ ಮಾರಕವಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ದುಷ್ಪರಿಣಾಮ ಬೀರಲಿದೆ. ಆದ್ದರಿಂದ ಬಟ್ಟೆಯಿಂದ, ನಾರಿನಿಂದ ಹಾಗೂ ಪೇಪರ್‌ನಿಂದ ತಯಾರಿಸಿದ ಬ್ಯಾಗ್‌ಗಳನ್ನು ಮಾತ್ರ ಬಳಸಲು ಅರಿವು ಮೂಡಿಸಲಾಯಿತು.

ಜೊತೆಗೆ ಪಾಲಿಕೆ ವತಿಯಿಂದಲೇ ಬಟ್ಟೆಯಿಂದ ತಯಾರಿಸಿರುವ ಬ್ಯಾಗ್‌ಗಳನ್ನು ನಾಗರಿಕರಿಗೆ ವಿತರಿಸಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಕೈಚೀಲಗಳನ್ನು ಬಳಸದಂತೆ ಅರಿವು ಮೂಡಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹20 ಲಕ್ಷ ವಶಕ್ಕೆ

ಪದ್ಮನಾಭನಗರ ವಿಭಾಗದ ಗಣೇಶ ಮಂದಿರ ವಾರ್ಡ್ ಸುತ್ತಮುತ್ತಲಿನ ಪ್ರದೇಶ, ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶ, ಬಿಟಿಎಂ ಬಡಾವಣೆಯ ಸುತ್ತಮುತ್ತಲಿನ ಪ್ರದೇಶ ಹಾಗೂ ಮಡಿವಾಳ ಮಾರುಕಟ್ಟೆ, ಬಸವನಗುಡಿ ಕತ್ರಿಗುಪ್ಪೆ ವ್ಯಾಪ್ತಿಯ ಸ್ಮಾರ್ಟ್ ಬಜಾರ್, ವಿಜಯ ನಗರದ ಜಿಟಿ ಮಾಲ್, ಜಯನಗರ ಸಾರಕ್ಕಿ ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶ, ಚಿಕ್ಕಪೇಟೆಯ ಲಾಲ್ ಬಾಗ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಜಾಗೃತಿ ಅರಿವು ಮೂಡಿಸಲಾಯಿತು.

ಜಾಗೃತಿ ಕಾರ್ಯದಲ್ಲಿ ಘನತ್ಯಾಜ್ಯ ವಿಭಾಗದ ಅಧಿಕಾರಿಗಳು, ಕಿರಿಯ ಆರೋಗ್ಯ ಪರಿವೀಕ್ಷಕರು, ಲಿಂಕ್ ವರ್ಕರ್ಸ್‌ಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರತಿನಿಧಿಗಳು, ನಾನಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಮಾರ್ಷಲ್‌ಗಳು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X