ಬೆಂಗಳೂರು | ಚಿನ್ನಾಭರಣಕ್ಕಾಗಿ ಮಹಿಳೆಯ ಬರ್ಬರ ಕೊಲೆ; ಆರೋಪಿಯ ಬಂಧನ

Date:

Advertisements

ಚಿನ್ನಾಭರಣಕ್ಕಾಗಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. ಕೊಲೆ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಒಂದು ವಾರದ ಹಿಂದೆ ಮಹಿಳೆಯ ಕೊಲೆ ನಡೆದಿದೆ. ಯಾವುದೇ ಸಾಕ್ಷ್ಯ ಸಿಗದಂತೆ ಮಹಿಳೆಯನ್ನು ಕೊಲೆ ಮಾಡಿ ಪೆಟ್ರೋಲ್​ನಿಂದ ಸುಟ್ಟು ಹಾಕಲಾಗಿದೆ. ವಾರದ ಹಿಂದೆ ತಲೆ ಬುರುಡೆ, ಮೂಳೆಗಳು ಪತ್ತೆಯಾಗಿದ್ದವು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಸುಕನ್ಯಾ (36) ಮೃತ ದುರ್ದೈವಿ. ಈಕೆ ಮೂಲತಃ ದೊಡ್ಡಕಮ್ಮನಹಳ್ಳಿ ನಿವಾಸಿ. ಅದೇ ಗ್ರಾಮದ ಜಶ್ವಂತ (20) ಕೊಲೆ ಮಾಡಿದ ಆರೋಪಿ. ಈತ ಸುಕನ್ಯಾಳ ಪತಿಯ ತಂಗಿ ಮಗ.

Advertisements

ಫೆಬ್ರುವರಿ 12ರಂದು ಸುಕನ್ಯಾ ನಾಪತ್ತೆಯಾಗಿದ್ದಾರೆ ಎಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಳಿಕ ಬಿಂಗೀಪುರ ಗ್ರಾಮದಲ್ಲಿ ಅಪರಿಚಿತ ಮಹಿಳೆಯ ತಲೆ ಬುರುಡೆ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.

ಅತ್ತೆ ಸುಕನ್ಯಾ ಅವರ ಜತೆಗೆ ಸಲುಗೆಯಿಂದ ಇದ್ದ ಜಶ್ವಂತ ಆಕೆ ಬಳಿ ಪದೇಪದೆ ಹಣಕ್ಕೆ ಬೇಡಿಕೆ ಇಡುತ್ತಿದ್ದನು. ಅಲ್ಲದೇ, ತನ್ನ ಕಾರು ರೀಪೇರಿಗೆ ದುಡ್ಡು ಕೇಳುತ್ತಿದ್ದನು. ಇನ್ನಿತರ ಖರ್ಚು ವೆಚ್ಚಗಳಿಗಾಗಿ ಪದೇಪದೆ ಹಣಕ್ಕೆ ಬೇಡಿಕೆ ಇಡುತ್ತಿದ್ದನು. ಮೃತ ಮಹಿಳೆ ಸುಕನ್ಯಾ ಹಣ ನೀಡದೆ ಇದ್ದಾಗ ಆಕೆಯ ಚಿನ್ನಾಭರಣ ನೀಡುವಂತೆ ಪೀಡಿಸುತ್ತಿದ್ದನು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವ್ಹೀಲಿಂಗ್ ಮಾಡುವವರ ವಿರುದ್ದ ಕಾರ್ಯಾಚರಣೆಗಿಳಿದ ಪೊಲೀಸರು

ಅತ್ತೆ ಸುಕನ್ಯಾಳನ್ನು ಜಶ್ವಂತ ತನ್ನ ಕಾರಿನಲ್ಲಿ ಒಂದು ದಿನ ಬಿಂಗೀಪುರದ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ, ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿರುವ ಗುರುತು ಸಿಗಬಾರದು ಎಂದು ಆಕೆಯ ಕೂದಲನ್ನು ಕತ್ತರಿಸಿ, ಮೃತದೇಹವನ್ನ ನಿರ್ಜನ ಪ್ರದೇಶದ ಕಾಂಪೌಂಡ್​ ಬಳಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಬಳಿಕ ಆಕೆಯ ಚಿನ್ನಾಭರಣ ತೆಗೆದುಕೊಂಡು ಗೋವಾದಲ್ಲಿ ವ್ಯಾಲಂಟೈನ್ಸ್ ಡೇ ಸೆಲೆಬ್ರೆಷನ್ ಮಾಡಿದ್ದನು ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X