ಬೆಂಗಳೂರು | ಏಕ ಬಳಕೆಯ ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿರುವ ಮಳಿಗೆಗಳಿಗೆ ಬೀಗ ಜಡಿದ ಬಿಬಿಎಂಪಿ

Date:

Advertisements

ಬೆಂಗಳೂರಿನ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ 6 ಮಳಿಗೆಗಳಲ್ಲಿ ಪ್ಲಾಸ್ಟಿಕ್ ವಶಪಡಿಸಿಕೊಂಡು ಮಳಿಗೆಗಳಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ.

“ರಾಜರಾಜೇಶ್ವರಿ ನಗರದ ಜೆ.ಪಿ ಪಾರ್ಕ್ ವಾರ್ಡ್‌ನ ಮೋಹನ್ ಕುಮಾರ್ ಮುಖ್ಯ ರಸ್ತೆಯಲ್ಲಿ ಬರುವ ಮಳಿಗೆಗಳು ಹಾಗೂ ರಾಜರಾಜೇಶ್ವರಿ ನಗರ ವಾರ್ಡ್‌ನ ಐಡಿಯಲ್ ಹೋಮ್ಸ್‌ನಲ್ಲಿನ ಜವಹಾರ್‌ಲಾಲ್ ನೆಹರು ರಸ್ತೆಯಲ್ಲಿರುವ ಮಳಿಗೆಗಳಿಗೆ ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಈಗಗಾಲೇ ಸೂಚನೆ ನೀಡಲಾಗಿತ್ತು. ಆದರೂ ಡಿ.14 ರಂದು ಪರಿಶೀಲನೆ ನಡೆಸಿದ ವೇಳೆ ಏಕ ಬಳಕೆ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿರುವುದನ್ನು ಗಮನಿಸಿ ಜೆಪಿ ಪಾರ್ಕ್ ವಾರ್ಡ್‌ನಲ್ಲಿ ಆರ್.ಎಸ್ ವೆಜಿಟೆಬಲ್ ಮಳಿಗೆ, ಗ್ರೀನ್ ವಾಲಿ ಫಾರಂ, ಜಾಫರ್ ಫೋಟ್ ಶಾಪ್ ಹಾಗೂ ಆರ್.ಆರ್ ನಗರ ವಾರ್ಡ್‌ನಲ್ಲಿರುವ ಮಾತಾಜಿ ಡಿಪಾರ್ಟ್‌ಮೆಂಟಲ್ ಸ್ಟೋರ್ಸ್, ಸತೀಶ್ ಸ್ಟೋರ್ಸ್, ಕನಕಶ್ರೀ ಕ್ರೀಯೇಷನ್ಸ್ ಸೇರಿ 6 ಮಳಿಗೆಗಳಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ” ಎಂದು ಹೇಳಿದೆ.

ರಾಜರಾಜೇಶ್ವರಿನಗರ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರ ಸೂಚನೆಯಂತೆ ಬೀಗ ಹಾಕಿ ಸೀಲ್ ಮಾಡಿರುವ ಮಳಿಗೆಗಳ ಮುಂಭಾಗದಲ್ಲಿ ‘ಈ ಅಂಗಡಿ ಮಳಿಗೆಯಲ್ಲಿ ಏಕ ಬಳಕೆ ನಿಷೇದಿತ ಪ್ಲಾಸ್ಟಿಕ್ ಬಳಸದಂತೆ ಈಗಾಗಲೇ ಈ ಹಿಂದೆ ಹಲವಾರು ಬಾರಿ ಸೂಚನೆ ನೀಡಿದರೂ ಸಹ ಏಕ ಬಳಕೆ ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿರುವುದು ದೃಢಪಟ್ಟಿರುವುದರಿಂದ ಪ್ಲಾಸ್ಟಿಕ್ ಬ್ಯಾನ್ ನೋಟಿಫಿಕೇಶನ್ ನಿಯಮ 4(ಸಿ), 4(ಡಿ) ಹಾಗೂ 14(1) ರ ಅನ್ವಯ ಹಾಗೂ ಹಸಿರು ನ್ಯಾಯಾಧಿಕರಣ ಮಂಡಳಿ ರಾಜ್ಯಮಟ್ಟದ ಸಮಿತಿ ರವರ ನಿರ್ದೇಶನಗಳಂತೆ ಈ ಅಂಗಡಿ ಮಳಿಗೆಯನ್ನು ಮುಂದಿನ ಆದೇಶದವರೆವಿಗೂ ಪಾಲಿಕೆಯ ವತಿಯಿಂದ ಮುಚ್ಚಲಾಗಿದೆ’ ಎಂಬ ಭಿತ್ತಿಪತ್ರವನ್ನು ಅಂಟಿಸಲಾಗಿದೆ.

Advertisements

₹44,400 ದಂಡ ವಸೂಲಿ

ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ ಬೀದಿ ಬದಿ ವ್ಯಾಪಾರಿಗಳು, ಅಂಗಡಿ ಮುಂಗಟ್ಟುಗಳು ಹಾಗೂ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿದ್ದ ಮಳಿಗೆಗೆಗಳಿಂದ ಒಟ್ಟಾರೆ ₹44,400 ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಡಿ.17 ರಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಧ್ವನಿವರ್ಧಕಗಳ ಮೂಲಕ ಜಾಗೃತಿ

ಸಾರ್ವಜನಿಕರಿಗೆ ಮಾರ್ಷಲ್ ವಾಹನದ ಧ್ವನಿವರ್ಧಕದ ಮೂಲಕ ಹಾಗೂ ಪ್ರತಿದಿನ ಮನೆಮನೆಗಳಿಂದ ತ್ಯಾಜ್ಯ ಸಂಗ್ರಹಣೆ ಮಾಡುವ ಆಟೋಟಿಪ್ಪರ್‌ಗಳ ಧ್ವನಿವರ್ಧಕದ ಮೂಲಕ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ಕೈಚೀಲವನ್ನು ಬಳಸದಂತೆ ಜಾಗೃತಿ ಮೂಡಿಸಿದರು.

ಪರಿಶೀಲನೆಯ ವೇಳೆ ಘನತ್ಯಾಜ್ಯ ನಿರ್ವಹಣೆ ವಿಭಾಗದ ಅಭಿಯಂತರರು ಮತ್ತು ಸಿಬ್ಬಂದಿ, ಕಾಮಗಾರಿ ವಿಭಾಗದ ಅಭಿಯಂತರರು, ಆರೋಗ್ಯ ವಿಭಾಗದ ಅಧಿಕಾರಿಗಳು, ಮಾರ್ಷಲ್‌ಗಳು ಹಾಗೂ ಸ್ಥಳೀಯ ಪೋಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X