ಬೆಂಗಳೂರು | ರಸ್ತೆಗುಂಡಿ ಮುಚ್ಚಲು ಪ್ರತಿ ವಾರ್ಡ್‌ಗೆ ₹15 ಲಕ್ಷ ಬಿಡುಗಡೆ ಮಾಡಿದ ಬಿಬಿಎಂಪಿ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಎಲ್ಲೇಂದರಲ್ಲಿ ಗುಂಡಿಗಳು ಕಾಣಿಸುತ್ತಿವೆ. ನಗರದಲ್ಲಿ ಬರೋಬ್ಬರಿ 11,366 ರಸ್ತೆ ಗುಂಡಿಗಳಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂಕಿ ಅಂಶಗಳು ತಿಳಿಸಿವೆ. ಇಷ್ಟು ತಿಂಗಳು ಮಳೆ ಇದ್ದ ಕಾರಣ ರಸ್ತೆ ಗುಂಡಿಗಳನ್ನು ಮುಚ್ಚಲು ಆಗಿಲ್ಲ ಎಂದು ಪಾಲಿಕೆ ತಿಳಿಸಿದೆ. ಇದೀಗ ಮಾನ್ಸೂನ್‌ ಮುಗಿದಿದ್ದು, ಪಾಲಿಕೆ ರಸ್ತೆ ಗುಂಡಿಗಳನ್ನು ಮುಚ್ಚಲು ಸಜ್ಜಾಗಿದೆ. ಗುಂಡಿಗಳನ್ನು ಮುಚ್ಚಲು 225 ವಾರ್ಡ್ಗಳಿಗೆ ತಲಾ ₹15 ಲಕ್ಷ ಬಿಡುಗಡೆ ಮಾಡಿದೆ.

ಬೆಂಗಳೂರಿನಲ್ಲಿ ಮಳೆಯ ಕಾರಣದಿಂದಾಗಿ ರಸ್ತೆ ಗುಂಡಿಗಳು ನಿರ್ಮಾಣ ಆಗುತ್ತವೆ. ಮಳೆ ಬಿಟ್ಟೂ ಬಿಡದೆ ಸುರಿಯುವ ಕಾರಣದಿಂದಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗಿಲ್ಲ. ಇದೇ ಕಾರಣಕ್ಕೆ ಬೆಂಗಳೂರು ನಗರ ಗುಂಡಿ ಮುಕ್ತ ಆಗುತ್ತಿಲ್ಲ ಎಂಬುವುದು ಬಿಬಿಎಂಪಿ ವಾದ. ನಗರದಲ್ಲಿ ಸದ್ಯ 11,366 ರಸ್ತೆ ಗುಂಡಿಗಳು ಇವೆ ಎಂದು ಬಿಬಿಎಂಪಿ ಅಂಕಿ ಅಂಶಗಳು ತಿಳಿಸಿವೆ. ಗುಂಡಿಗಳನ್ನು ಮುಚ್ಚಲು ಪ್ರತಿ ವಾರ್ಡ್ಗೆ ₹15 ಲಕ್ಷ ಹಣವನ್ನು ಬಿಡುಗಡೆ ಮಾಡಲಾಗಿದೆ. ಹಲವು ವಾರ್ಡ್ಗಳ ಟೆಂಡರ್ಕರೆಯಲಾಗಿದ್ದು, ಕೆಲವು ಪ್ರದೇಶದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ.

225 ವಾರ್ಡ್ಗಳಿಗೆ ತಲಾ ₹15 ಲಕ್ಷದಂತೆ ₹33 ಕೋಟಿಯನ್ನು ಹಂಚಲಾಗಿದೆ. ಕಳೆದ ವರ್ಷ ವಾರ್ಡ್ವೊಂದಕ್ಕೆ ₹20 ಲಕ್ಷ ನೀಡಲಾಗಿತ್ತು. ಕಳೆದ ಬಾರಿಯ ಅನುದಾನ ಬಳಕೆ ತೃಪ್ತಿಕರವಾಗಿಲ್ಲದ ಕಾರಣ ಬಾರಿ ಹಣ ಕಡಿತ ಮಾಡಲಾಗಿದೆ ಎನ್ನಲಾಗಿದೆ. ಅನುದಾನವನ್ನು ಸರಿಯಾಗಿ ಬಳಕೆ ಮಾಡಿಕೊಂಡರೆ, ₹15 ಲಕ್ಷದಲ್ಲಿ ವಾರ್ಡ್‌ಗಳಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚಿಸಬಹುದು. 1 ಚದರ ಮೀಟರ್‌ ಗುಂಡಿ ಮುಚ್ಚಲು ₹1,200 ವೆಚ್ಚವಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Advertisements

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, “ನವೆಂಬರ್ನಿಂದ ಗುಂಡಿಗಳನ್ನು ಮುಚ್ಚಲು ವಲಯ ಮತ್ತು ವಾರ್ಡ್ ಎಂಜಿನಿಯರ್ಗಳಿಗೆ ತಿಳಿಸಲಾಗಿದೆ. ನವೆಂಬರ್‌ನಿಂದ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಆರಂಭವಾಗಲಿದೆ. ವಾರ್ಡ್ ಸಮಿತಿ ಕಾಮಗಾರಿಗಳ ಮೇಲ್ವಿಚಾರಣೆ ನಡೆಸಲಿದೆ. ಪ್ರತಿ ವಾರ್ಡ್ಗೆ ₹15 ಲಕ್ಷ ನೀಡಲಾಗಿದ್ದು ಅವುಗಳಲ್ಲಿ ಕೆಲವು ಕಾಮಗಾರಿ ಈಗಾಗಲೇ ಆರಂಭಗೊಂಡಿದೆ. ಟೆಂಡರ್ ಒಪ್ಪಂದವು 12 ತಿಂಗಳ ಅವಧಿಗೆ ಇರುತ್ತದೆಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ; ಗಡುವು ವಿಸ್ತರಣೆ ಸಾಧ್ಯತೆ

ಬಿಬಿಎಂಪಿ ಅಂಕಿ ಅಂಶಗಳ ಪ್ರಕಾರ ನಗರದಲ್ಲಿ ಸದ್ಯ 11,366 ರಸ್ತೆ ಗುಂಡಿಗಳಿವೆ. ಪೈಕಿ ದಾಸರಹಳ್ಳಿ ವಲಯದಲ್ಲೇ ಅತಿ ಹೆಚ್ಚು ಗುಂಡಿಗಳಿವೆ. ಆರ್ಆರ್ ನಗರ ವ್ಯಾಪ್ತಿಯಲ್ಲಿ 845, ಬೊಮ್ಮನ ಹಳ್ಳಿ ವಲಯದಲ್ಲಿ 319, ಮಹದೇವಪುರ 595, ಬೆಂಗಳೂರು ದಕ್ಷಿಣ 401, ಬೆಂಗಳೂರು ಪಶ್ಚಿಮ 422 ಹಾಗೂ ಯಲಹಂಕ ವಲಯದಲ್ಲಿ 423 ರಸ್ತೆ ಗುಂಡಿಗಳಿವೆ ಎಂದು ತಿಳಿದುಬಂದಿದೆ.

ಇನ್ನು ವಿಧಾನಸಭಾ ಕ್ಷೇತ್ರವಾರು ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಅನುದಾನ ಮೀಸಲಿಟ್ಟಿದೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ₹3.6 ಕೋಟಿ ಹಣ ಮೀಸಲಿಡಲಾಗಿದೆ. ಶಿವಾಜಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ₹1.5 ಕೋಟಿ, ಚಿಕ್ಕಪೇಟೆ, ಜಯನಗರ ಹಾಗೂ ಬಸವನಗುಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ತಲಾ ₹90 ಲಕ್ಷ, ಮಲ್ಲೇಶ್ವರಂ ₹75 ಲಕ್ಷ, ಗೋವಿಂದರಾಜನಗರ ₹60 ಲಕ್ಷ, ಆರ್ಆರ್ ನಗರ, ಹೆಬ್ಬಾಳ, ಪುಲಕೇಶಿ ನಗರ ಹಾಗೂ ಶಾಂತಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ತಲಾ ₹15 ಲಕ್ಷ ಅನುದಾನ ಮೀಸಲಿಡಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X