ಬೆಂಗಳೂರು | ₹5 ಕೋಟಿ ವೆಚ್ಚದಲ್ಲಿ ಫ್ರೀಡಂ ಪಾರ್ಕ್ ನವೀಕರಣ

Date:

Advertisements

ಪ್ರತಿಭಟನೆಗಳಿಗೆಂದೆ ಸೀಮಿತವಾಗಿರುವ ಬೆಂಗಳೂರಿನ ಹೃದಯಭಾಗದಲ್ಲಿರುವ ಫ್ರೀಡಂಪಾರ್ಕ್‌ ಅನ್ನು ನವೀಕರಿಸಿ ಪ್ರೇಕ್ಷಣೀಯ ಸ್ಥಳ ಹಾಗೂ ಹೆರಿಟೇಜ್ ಹಬ್ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ. ಜತೆಗೆ, ಇದರಿಂದ ಬಿಬಿಎಂಪಿಗೆ ಆದಾಯ ಬರುವಂತೆ ಮಾಡಿಕೊಳ್ಳಲು ಯೋಜಿಸಿದೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಸದ್ಯ ಪ್ರತಿಭಟನೆಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಸ್ಥಳ ಪ್ರತಿಭಟನೆ ನಡೆಯಲು ಮಾತ್ರ ಸೀಮಿತವಾಗಿದೆ ಎನ್ನುವಂತಾಗಿದೆ. ಇದೀಗ, 21 ಎಕರೆಯಲ್ಲಿರುವ ಈ ಫ್ರೀಡಂ ಪಾರ್ಕ್ ಅನ್ನು ನವೀಕರಣಗೊಳಿಸಲು ಬಿಬಿಎಂಪಿ ₹5 ಕೋಟಿ ಮೀಸಲಿಟ್ಟಿದ್ದು, ನವೀಕರಣ ಮಾಡಿ ಪ್ರೇಕ್ಷಣೀಯ ಸ್ಥಳದ ಜತೆಗೆ, ಹೆರಿಟೇಜ್ ಹಬ್ ಮಾಡಲು ಬಿಬಿಎಂಪಿ ಯೋಜಿಸಿದೆ.

ಇದೀಗ, ಫ್ರೀಡಂ ಪಾರ್ಕ್‌ನಲ್ಲಿ ಅಸ್ತಿತ್ವದಲ್ಲಿರುವ ಕಟ್ಟಡಗಳ ನವೀಕರಣ, ಹಳೆಯ ಸೆಂಟ್ರಲ್ ಜೈಲ್ ರಚನೆಗಳು, ವಿದ್ಯುತೀಕರಣ ಹಾಗೂ ದುರಸ್ತಿಗಾಗಿ ಬಿಬಿಎಂಪಿ ಯೋಜನೆ ರೂಪಿಸಿದೆ. ಜತೆಗೆ, ಕಟ್ಟಡಗಳಿಗೆ ಹಾನಿ ಸೇರಿದಂತೆ ನಾನಾ ಕಾಮಗಾರಿಯೊಂದಿಗೆ ರಾಮಚಂದ್ರ ರಸ್ತೆಯಿಂದ ಫ್ರೀಡಂ ಪಾರ್ಕ್ಗೆ ಎರಡನೇ ಪ್ರವೇಶ ದ್ವಾರ ನಿರ್ಮಾಣಕ್ಕೆ ಯೋಜನೆ ನಡೆದಿದೆ.

Advertisements

ಫ್ರೀಡಂ ಪಾರ್ಕ್ ಅನ್ನು 2008ರಲ್ಲಿ ಸಾರ್ವಜನಿಕರಿಗೆ ತೆರೆಯಲಾಯಿತು. ಈ ಫ್ರೀಡಂ ಪಾರ್ಕ್‌ನಲ್ಲಿ ಈ ಹಿಂದಿನ ಕೇಂದ್ರ ಕಾರಾಗೃಹ ಒಳಗೊಂಡಿದೆ. ಕಾಲಾನಂತರದಲ್ಲಿ, ಫ್ರೀಡಂ ಪಾರ್ಕ್ ಹದಗೆಟ್ಟಿದೆ. ವಿಶೇಷವಾಗಿ ಕೇಂದ್ರ ಕಾರಾಗೃಹ ಭಾಗ ಸಂಪೂರ್ಣವಾಗಿ ಹದಗೆಟ್ಟಿದೆ. ಸದ್ಯ ಫ್ರೀಡಂ ಪಾರ್ಕ್ ಒಳಗಡೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ಮುಂದಿನ ದಿನಗಳಲ್ಲಿ ಪಾರ್ಕ್ನವೀಕರಣ ಮಾಡಿ ವಾಣಿಜ್ಯ ಆದಾಯ ಬರುವಂತೆ ಮಾಡಲು ಪಾಲಿಕೆ ಯೋಜಿಸಿದೆ.

ಈಗ ಬಿಬಿಎಂಪಿಯು ಫ್ರೀಡಂ ಪಾರ್ಕ್ ಅಸ್ತಿತ್ವದಲ್ಲಿರುವ ರಚನೆಗಳ ನವೀಕರಣ, ಅಕೌಸ್ಟಿಕ್ಸ್ ಮತ್ತು ವಿದ್ಯುದ್ದೀಕರಣಕ್ಕಾಗಿ ಟೆಂಡರ್ ಕರೆದಿದೆ. ಸಂಪೂರ್ಣ ಕಾಮಗಾರಿಗೆ 5 ಕೋಟಿ ವೆಚ್ಚವಾಗಬಹುದು ಎಂದು ಬಿಬಿಎಂಪಿ ಬಜೆಟ್‌ ನೀಡಿದೆ. ಕೋವಿಡ್ ಕಾಲದಲ್ಲಿ ₹2 ಕೋಟಿ ವೆಚ್ಚದಲ್ಲಿ ಬಿಬಿಎಂಪಿ ಫ್ರೀಡಂ ಪಾರ್ಕ್‌ ಅನ್ನು ನವೀಕರಿಸಿದೆ. ಈ ಸಮಯದಲ್ಲಿ ಖಾಲಿ ಇದ್ದ ಸ್ಥಳದಲ್ಲಿ ಆಂಫಿ ಥಿಯೇಟರ್​​​, ಹೊರ ಸಭಾಂಗಣ ಹಾಗೂ ಗಾರ್ಡನ್ ಅನ್ನು ಹೊಸದಾಗಿ ನಿರ್ಮಿಸಲಾಗಿತ್ತು. ಆದರೆ, ಕಳಪೆ ಕಾಮಗಾರಿಯಿಂದ ಎಲ್ಲವೂ ಸಂಪೂರ್ಣ ಹಾಳಾಗಿದೆ. ಜತೆಗೆ, ಪಾರ್ಕ್‌ ಒಳಗಿರುವ ಹಳೆಯ ಜೈಲು ಕುಸಿಯುವ ಹಂತದಲ್ಲಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ತಾಂತ್ರಿಕ ದೋಷದಿಂದ ನೇರಳೆ ಮಾರ್ಗದ ಮೆಟ್ರೋ ಸಂಚಾರ ವ್ಯತ್ಯಯ: ನಿಲ್ದಾಣಗಳಲ್ಲಿ ಜನಸಂದಣಿ

ಪಾರ್ಕ್‌ ನವೀಕರಿಸಲು ಬಿಬಿಎಂಪಿ ₹8 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಿತ್ತು. ಆದರೀಗ, ನವೀಕರಣಕ್ಕೆ ₹5 ಕೋಟಿ ಬಜೆಟ್‌ ಇದೆ. ಈ ಹಿನ್ನೆಲೆ, ಆಂಫಿಥಿಯೇಟರ್ ಒಳಗೆ ಹವಾನಿಯಂತ್ರಣ ಮತ್ತು ಅಕೌಸ್ಟಿಕ್ಸ್ ಯೋಜನೆಗಳನ್ನು ಬಿಬಿಎಂಪಿ ಕೈಬಿಟ್ಟಿದೆ ಎನ್ನಲಾಗಿದೆ.

60 ಆಸನಗಳ ಆಂಫಿಥಿಯೇಟರ್ ಅನ್ನು ನವೀಕರಿಸುವ ಯೋಜನೆಯನ್ನು ಪಾಲಿಕೆ ಕೈಬಿಟ್ಟಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ. ಪ್ರಸ್ತುತ, ಬಿಬಿಎಂಪಿಯು ಪ್ರವೇಶ ಶುಲ್ಕವಿಲ್ಲದೆ ಫ್ರೀಡಂ ಪಾರ್ಕ್ ಒಳಗೆ ಪ್ರವಾಸಿಗರಿಗೆ ಅವಕಾಶ ನೀಡುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X