ರಾಜ್ಯ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂನ ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ವ್ಯಕ್ತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಉದ್ಯಾನವನದ ಸಿಬ್ಬಂದಿ ವ್ಯಕ್ತಿಯ ಶವ ಸ್ಯಾಂಕಿ ಕೆರೆಯಲ್ಲಿ ತೇಲುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಸದಾಶಿವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ತೆರಿಗೆ ಬಾಕಿ | ರಾಕ್ ಲೈನ್ ಮಾಲ್ ಸೀಲ್ ಮಾಡಿದ ಬಿಬಿಎಂಪಿ ಅಧಿಕಾರಿಗಳು
ಸುಮಾರು 50 ವರ್ಷದ ವ್ಯಕ್ತಿಯ ಶವ ಕೆರೆಯಲ್ಲಿ ತೇಲುತ್ತಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಕೆರೆಯಿಂದ ಶವವನ್ನು ಹೊರತೆಗೆಯಲಾಗಿದ್ದು, ತನಿಖೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.