ಬೆಂಗಳೂರು | ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಮೇಲ್

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಹುಸಿ ಬಾಂಬ್‌ ಬೆದರಿಕೆ ಕರೆಗಳು ಹೆಚ್ಚಳವಾಗಿವೆ. ಕಳೆದ ಕೆಲವು ದಿನಗಳ ಹಿಂದೆ ನಗರದಲ್ಲಿರುವ 65ಕ್ಕೂ ಹೆಚ್ಚು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಮೆಸೇಜ್‌ ಬಂದಿತ್ತು. ಇದೀಗ ಮತ್ತೊಂದು ಇಂತಹದೇ ಘಟನೆ ನಡೆದಿದ್ದು, ದುಷ್ಕರ್ಮಿಗಳು ಶುಕ್ರವಾರ ಸರ್‌.ಎಂ.ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಹಾಕಿದ್ದಾರೆ.

ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಸರ್.ಎಂ.ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಬೆದರಿಕೆ ಮೇಲ್ ಬಂದಿದೆ. ಎಂದಿನಂತೆ ಸಿಬ್ಬಂದಿ ಮೇಲ್ ಚೆಕ್‌ ಮಾಡುವ ಹಾಗೇ ಇಂದೂ ಕೂಡ ಮೇಲ್ ಚೆಕ್ ಮಾಡಿದ್ದಾರೆ. ಆಗ Morgue999lol ಎಂಬ ಮೇಲ್ ಐಡಿಯಿಂದ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಸಂದೇಶ ಬಂದಿದೆ.

ಮ್ಯೂಸಿಯಂ ಒಳಗೆ ಗೌಪ್ಯ ಸ್ಥಳದಲ್ಲಿ ಸ್ಫೋಟಕ ವಸ್ತು ಇಟ್ಟಿದ್ದೇವೆ. ಈ ಬಾಂಬ್‌ ಬೆಳಗ್ಗೆ ಸ್ಫೋಟಗೊಂಡು ಮ್ಯೂಸಿಯಂ ನಲ್ಲಿರುವ ಎಲ್ಲರೂ ಸಾವನ್ನಪ್ಪಲ್ಲಿದ್ದಾರೆ. ನಾವುಟೆರರಿಸರ್ಸ್ 111′ ಎಂಬ ಸಂಘಟನೆಗೆ ಸೇರಿದವರು. ನಮ್ಮ ಗ್ರೂಪ್ ಹೆಸರನ್ನ ಮಾಧ್ಯಮದವರಿಗೆ ನೀಡಿ ಎಂದು ಮೇಲ್ ಕಳಿಸಿದ್ದಾರೆ.

Advertisements

ಮೇಲ್ ನೋಡಿದ ಕೂಡಲೇ ಆಡಳಿತ ಮಂಡಳಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿತ್ತು. ಸ್ಥಳಕ್ಕಾಗಮಿಸಿದ ಪೊಲೀಸ್ ಸಿಬ್ಬಂದಿ, ಶ್ವಾನ ದಳ, ಬಾಂಬ್ ನಿಶ್ಕ್ರಿಯ ದಳದ ತಂಡ ಪರಿಶೀಲನೆ ನಡೆಸಿದೆ. ಈ ವೇಳೆ, ಇಲ್ಲಿ ಯಾವುದೇ ಸ್ಫೋಟಕ ವಸ್ತು ಕಂಡು ಬಂದಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ?  ಮಾರ್ಚ್‌ನಲ್ಲಿ ಬಿಬಿಎಂಪಿ ಬಜೆಟ್ ಮಂಡನೆ ಸಾಧ್ಯತೆ

ಈ ಮ್ಯೂಸಿಯಂಗೆ ಪ್ರತಿ ದಿನ ಶಾಲಾ ಮಕ್ಕಳು ಸೇರಿದಂತೆ ಸಾವಿರಾರು ಜನ ಭೇಟಿ ನೀಡುತ್ತಾರೆ. ಈ ಘಟನೆಯಿಂದಾಗಿ ಕೆಲಕಾಲ ಮ್ಯೂಸಿಯಂ ಸುತ್ತ-ಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸದ್ಯ ಘಟನೆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹಿಂದೆ, ಬೆಂಗಳೂರು ಹಾಗೂ ಆನೇಕಲ್‌ನ 65ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ಬೆದರಿಕೆಯ ಮೇಲ್ಬಂದಿತ್ತುಆದರೆ, ಶಾಲೆಗಳಿಗೆ ಬಾಂಬ್ ಮೇಲ್ ಕಳಿಸಿದ್ದವರ ಗುರುತು ಇನ್ನೂ ಪತ್ತೆಯಾಗಿಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X