ಬೆಂಗಳೂರು | ಅಂತರಿಕ್ಷಯಾನದ ಪರಿಕಲ್ಪನೆಯಡಿ ಜನವರಿ 7ರಂದು ಚಿತ್ರಸಂತೆ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿವರ್ಷ ಕಡಲೆಕಾಯಿ ಪರಿಷೆ, ಕರಗ, ಅವರೆ ಮೇಳ, ಕೃಷಿ ಮೇಳ, ಕೇಕ್ ಶೋ ಸೇರಿದಂತೆ ಹಲವಾರು ಕಾರ್ಯಕ್ರಮಗಳು ನಡೆಯುತ್ತವೆ. ಪ್ರತಿ ವರ್ಷದಂತೆ ಈ ವರ್ಷವೂ ನಗರದ ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆ ನಡೆಸಲಾಗುತ್ತಿದೆ.

ಕರ್ನಾಟಕ ಚಿತ್ರಕಲಾ ಪರಿಷತ್‌ ‘ಎಲ್ಲರಿಗಾಗಿ ಕಲೆಎಂಬ ಶೀರ್ಷಿಕೆಯಡಿ ನಗರದಲ್ಲಿ ರಾಷ್ಟ್ರೀಯ ಮಟ್ಟದಚಿತ್ರಸಂತೆಆಯೋಜಿಸುತ್ತಿದ್ದು, ಕುಮಾರಕೃಪಾ ರಸ್ತೆಯಲ್ಲಿ ನಡೆಯಲಿರುವ 21ನೇ ಚಿತ್ರಸಂತೆ ಇದಾಗಿದೆ.

ಚಿತ್ರಕಲಾ ಪರಿಷತ್ ಪ್ರತಿ ವರ್ಷದ ಆರಂಭ ಅಂದರೆ ಜನವರಿ ತಿಂಗಳಿನಲ್ಲಿ ಮೊದಲನೇ ಭಾನುವಾರ ಈ ಚಿತ್ರಸಂತೆ ನಡೆಸಲಾಗುತ್ತದೆ. ಈ ವರ್ಷವೂ ಜನವರಿ 7ರಂದು ಚಿತ್ರಸಂತೆ ನಡೆಯಲಿದ್ದು, ಬೆಳ್ಳಗ್ಗೆ 8 ಗಂಟೆಗೆ ಆರಂಭವಾಗಿ, ಸಂಜೆ 8 ಗಂಟೆಯವರೆಗೂ ನಡೆಯಲಿದೆ.‌‌ ಚಿತ್ರಸಂತೆಯಲ್ಲಿ ₹100 ಆರಂಭವಾಗಿ ಲಕ್ಷದವರೆಗೂ ಚಿತ್ರಕಲೆಗಳು ಸಿಗಲಿವೆ. ಈ ಬಾರಿಯ ಚಿತ್ರಸಂತೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ. ಅಂತರಿಕ್ಷಯಾನದ ಪರಿಕಲ್ಪನೆಯಡಿ ಚಿತ್ರಸಂತೆಯನ್ನು ಈ ಬಾರಿ ಆಯೋಜನೆ ಮಾಡಲಾಗಿದೆ.

Advertisements

ಚಿತ್ರಸಂತೆಗೆ ಬರುವುದಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಚಿತ್ರಕಲಾಪ್ರಿಯರಿಗೆ ಆಹ್ವಾನಿಸಲಾಗಿದೆ. ಈಗಾಗಲೇ 3 ಸಾವಿರಕ್ಕೂ ಹೆಚ್ಚು ಚಿತ್ರಕಲಾ ಪ್ರಿಯರು ಚಿತ್ರಸಂತೆಗೆ ಬರಲು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಬಾರಿ 7 ಲಕ್ಷಕ್ಕೂ ಹೆಚ್ಚು ಜನರು ಚಿತ್ರಸಂತೆಗೆ ಬರುವ ಸಾಧ್ಯತೆ ಇದೆ.

ಚಿತ್ರಕಲಾ ಪರಿಷತ್ ಚಿತ್ರಸಂತೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳುತ್ತಿದೆ. ಈ ಬಾರಿ ಚಿತ್ರಸಂತೆಯಲ್ಲಿ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಬಾಹ್ಯಾಕಾಶ ಕುರಿತಂತೆ ಚಿತ್ರಕಲೆ, ಶಿಲ್ಪಕಲೆ, ರಾಕೆಟ್‌ ಹೆಸರಿನಲ್ಲಿ ಪ್ರದರ್ಶನಕ್ಕೆ ಇರಿಸಲಾಗುತ್ತಿದೆ.

ಚಂದ್ರಯಾನ-3 ಉಡಾವಣೆಯ ಯಶಸ್ಸಿನ ಹಿನ್ನೆಲೆ, ಚಿತ್ರಸಂತೆಯನ್ನು ಅಂತರಿಕ್ಷಯಾನದ ಶೀರ್ಷಿಕೆಯಡಿ ರಾಕೆಟ್‌, ಬಾಹ್ಯಾಕಾಶ ಸೇರಿದಂತೆ ಚಿತ್ರಕಲೆ, ಶಿಲ್ಪಕಲೆ ಮತ್ತಿತರ ಪ್ರದರ್ಶನ ಗ್ಯಾಲರಿ ನಿರ್ಮಿಸಲಾಗುವುದು. ಪರಿಷತ್ತಿನ ಆವರಣದಲ್ಲಿ ಬಾಹ್ಯಾಕಾಶ ಕುರಿತಂತೆ ಪ್ರದರ್ಶನವೂ ಇರಲಿದೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ ಬಸ್‌ಗಳಲ್ಲಿ ಆಡಿಯೊ ವ್ಯವಸ್ಥೆ ಕಲ್ಪಿಸುವಂತೆ ನಿರ್ದೇಶಿಸಿದ ಹೈಕೋರ್ಟ್‌

ಸಾಂಪ್ರದಾಯಿಕ ಮೈಸೂರು ಶೈಲಿಯ ಕಲೆ, ತಂಜಾವೂರು ಶೈಲಿ, ರಾಜಸ್ಥಾನಿ ಶೈಲಿ, ಮಧುಬನಿ ಶೈಲಿ, ತೈಲ ಮತ್ತು ಜಲವರ್ಣಗಳಲ್ಲಿ ರಚಿಸಿರುವ ಚಿತ್ರಗಳು, ಆಕ್ರಿಲಿಕ್‌, ಗಾಜಿನ ಮೇಲೆ ಬಿಡಿಸಿರುವ ಚಿತ್ರಗಳು, ಕೊಲಾಜ್‌, ಲಿಥೋಗ್ರಾಫ್‌, ಡೂಡಲ್‌, ಎಂಬೋಸಿಂಗ್‌, ವಿಡಿಯೋ ಕಲೆ, ಗ್ರಾಫಿಕ್ಕಲೆ, ಶಿಲ್ಪ ಕಲೆ, ಇನ್ಸ್ಟಲೇಶನ್‌ (ಪ್ರತಿಧಿಷ್ಠಾಧಿಪನಾ ಕಲೆ), ಪರ್ಫಾರ್ಮೆನ್ಸ್ಕಲೆ ಹೀಗೆ ನಾನಾ ಮಾಧ್ಯಮದ ಚಿತ್ರಗಳು ಒಂದೇ ಸೂರಿನಡಿ ಪ್ರದರ್ಶನಗೊಳ್ಳಲಿವೆ.

ಎಂದಿನಂತೆ ಕುಮಾರಕೃಪಾ ರಸ್ತೆಯಲ್ಲಿ ಇಡೀ ದಿನ ಸಂತೆ ನಡೆಯುತ್ತದೆ. ರಾಷ್ಟ್ರೀಯ ಮಟ್ಟದ ಚಿತ್ರಸಂತೆಯಾಗಿರುವುದರಿಂದ ಕರ್ನಾಟಕ, ಒಡಿಶಾ, ಪಂಜಾಬ್‌, ತಮಿಳುನಾಡು, ಕೇರಳ, ಆಂಧ್ರ ಸೇರಿದಂತೆ ದೇಶದ ನಾನಾ ರಾಜ್ಯಗಳಿಂದ ಕಲಾವಿದರು ಆಗಮಿಸಲಿದ್ದಾರೆ.

ಚಿತ್ರಕಲಾ ಸಂತೆಗೆ ಹೆಚ್ಚಿನ ಜನರು ಬರುವ ಹಿನ್ನೆಲೆ ಚಿತ್ರಕಲಾ ಪರಿಷತ್ ರಸ್ತೆ ಸಂಪರ್ಕಿಸುವ ರಸ್ತೆ ಜನವರಿ 7 ರಂದು ಬಂದ್ ಆಗಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X