ಬೆಂಗಳೂರು | ಪ್ರತಿಷ್ಠಿತ ಬ್ರ್ಯಾಂಡ್‌ಗಳ ನಕಲು ದಂಧೆ : ಸಿಸಿಬಿ ಬಲೆಗೆ ಬಿದ್ದ ಗ್ಯಾಂಗ್

Date:

Advertisements

ದಿನನಿತ್ಯ ಜನರು ಬಳಸುವ ವಸ್ತುಗಳನ್ನು ಗುರಿಯಾಗಿಟ್ಟುಕೊಂಡು ಪ್ರತಿಷ್ಠಿತ ಕಂಪನಿಗಳ ಹೆಸರು ಹಾಕಿ ಕಳೆದ ಐದು ವರ್ಷಗಳಿಂದ ನಕಲಿ ವಸ್ತುಗಳನ್ನು ತಯಾರು ಮಾಡುತ್ತಿದ್ದ ಗ್ಯಾಂಗ್‌ವೊಂದು ಸಿಸಿಬಿ ಬಲೆಗೆ ಬಿದ್ದಿದೆ.

ಶಿವಪಾಟೀಲ್, ದೌಲತ್ ಸಿಂಗ್ ಹಾಗೂ ಶುಬಂ ಬಂಧಿತ ಆರೋಪಿಗಳು. ಈ ಗ್ಯಾಂಗ್ ಕಳೆದ ಐದು ವರ್ಷದಿಂದ ಪ್ರತಿಷ್ಠಿತ ಕಂಪನಿಗಳ ಹೆಸರು ಬಳಸಿಕೊಂಡು ನಕಲಿ ವಸ್ತುಗಳ ಮಾರಾಟ ಮಾಡುತ್ತಿತ್ತು.

ನಕಲಿ ವಸ್ತು ತಯಾರಿಸುತ್ತಿದ್ದವರ ಬಗ್ಗೆ ಮಾಹಿತಿ ಪಡೆದ ಪ್ರತಿಷ್ಠಿತ ಕಂಪನಿಗಳಾದ ಹಿಂದೂಸ್ಥಾನ್ ಯುನಿಲಿವರ್ ಲಿಮಿಟೆಡ್ ಹಾಗೂ ರೆಕಿಟ್ ಬೆಂಕಿಸರ್ ಇಂಡಿಯಾ ಲಿಮಿಟೆಡ್ ಕಂಪನಿಗಳ ಅಧಿಕೃತ ಪ್ರತಿನಿಧಿಗಳು ಸಿಸಿಬಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಪ್ರಕರಣದ ತನಿಖೆ ಕೈಗೊಂಡ ಸಿಸಿಬಿ ನಕಲಿ ಜಾಲವನ್ನು ಭೇದಿಸಿದೆ.

Advertisements

ಸರ್ಪ್‌ ಎಕ್ಸೆಲ್, ವಿಮ್ ಲಿಕ್ವಡ್, ಲೈಫ್ ಬಾಯ್ ಹ್ಯಾಂಡ್ ವಾಶ್, ರಿನ್, ವೀಲ್ ಡಿಟರ್ಜಂಟ್ ಪೌಡರ್, ರೆಡ್ ಲೇಬಲ್ ಟಿ ಪೌಡರ್, ಲೈಜಾಲ್, ಹಾರ್ಪಿಕ್ ಸೇರಿದಂತೆ ಹಲವು ಉತ್ಪನ್ನಗಳ ನಕಲಿ ವಸ್ತುಗಳನ್ನು ಇರಿಸಲಾಗಿದ್ದ ವಿಲ್ಸನ್ ಗಾರ್ಡನ್‌ನ ಗೋಡಾನ್ ಹಾಗೂ ಇದನ್ನು ತಯಾರಿಸುತಿದ್ದ ಆವಲಹಳ್ಳಿ ಬಳಿಯ ರಾಮಪುರ ಮತ್ತು ಬಿದರಹಳ್ಳಿಯ ಫ್ಯಾಕ್ಟರಿಗಳಿಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ನಕಲಿ ತಯಾರಿಕಾ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಈ ಬಗ್ಗೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರಿಂದ ₹95 ಲಕ್ಷ ಮೌಲ್ಯದ ನಕಲಿ ವಸ್ತುಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ.

ಬಂಧಿತ ಆರೋಪಿಗಳು ಉತ್ತರ ಭಾರತದವರು. ಕಳೆದ ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ಇವರು ನಕಲಿ ವಸ್ತುಗಳನ್ನು ತಯಾರು ಮಾಡುವಲ್ಲಿ ಕುಖ್ಯಾತಿ ಹೊಂದಿದ್ದ ಎನ್ನಲಾದ ಮಹೇಶ್ ಗಾಂಧಿ ಎಂಬಾತನ ಬಳಿ ಕೆಲವು ವರ್ಷ ಕೆಲಸ ಮಾಡಿದ್ದಾರೆ.

ಈ ಸಮಯದಲ್ಲಿ ಬ್ರಾಂಡ್ ಹೆಸರಿನ ವಸ್ತುಗಳನ್ನು ನಕಲು ಮಾಡಿ ಮಾರಾಟ ಮಾಡುವ ಬಗ್ಗೆ ಕಲಿತ ಆರೋಪಿಗಳು ನಂತರದ ದಿನಗಳಲ್ಲಿ ತಮ್ಮದೇ ಆದ ವ್ಯವಸ್ಥಿತ ಜಾಲ ತೆರೆದಿದ್ದಾರೆ. ದಿನಕಳೆದಂತೆ ಇವರು ರಾಜ್ಯ ಸೇರಿದಂತೆ ಹಲವೆಡೆ ತಮ್ಮದೇ ಜಾಲ ರೂಪಿಸಿಕೊಂಡು ವ್ಯವಹಾರ ಆರಂಭ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ : ಅಪರಿಚಿತ ವ್ಯಕ್ತಿ ವಿರುದ್ಧ ಎಫ್​​ಐಆರ್​ ದಾಖಲು

ಬಂಧಿತ ಆರೋಪಿಗಳ ಪೈಕಿ ಶಿವ ಪಾಟೀಲ್ ನಕಲಿ ವಸ್ತುಗಳನ್ನು ತಯಾರಿ ಮಾಡುತ್ತಿದ್ದನು. ಮತ್ತೋರ್ವ ಆರೋಪಿ ದೌಲತ್ ಸಿಂಗ್ ಅದರ ಡಿಸ್ಟ್ರಿಬ್ಯೂಟಿಂಗ್ ಬಗ್ಗೆ ನೋಡಿಕೊಳ್ಳುತ್ತಿದ್ದನು. ಕಳೆದ ಐದು ವರ್ಷದಿಂದ ಬಂಧಿತ ಆರೋಪಿಗಳು ಈ ಕೃತ್ಯ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X