ಬೆಂಗಳೂರು ಗ್ರಾಮಾಂತರ | ಆನೇಕಲ್​ ಬಳಿ ಮನೆಯ ಸಿಲಿಂಡರ್​ ಸ್ಫೋಟ

Date:

Advertisements

ಮನೆಯಲ್ಲಿನ ಸಿಲಿಂಡರ್​ ಸ್ಫೋಟಗೊಂಡು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್​ ಬಳಿಯ ಬನ್ನೇರುಘಟ್ಟದ ಸುದರ್ಶನ್​ ಲೇಔಟ್​ನಲ್ಲಿ ನಡೆದಿದೆ.

ರಾಜೇಂದ್ರ ಎಂಬುವವರಿಗೆ ಗಂಭೀರವಾಗಿ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಾಜೇಂದ್ರ ಅವರು ಎಂದಿನಂತೆ ನ.3ರಂದು ಬೆಳಗ್ಗೆ 5 ಗಂಟೆಗೆ ಸಿಲಿಂಡರ್ ಆನ್ ಮಾಡಲು ಅಡುಗೆ ಮನೆಗೆ ಹೋಗಿದ್ದರು. ಈ ವೇಳೆ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡಿದೆ. ಸ್ಪೋಟದಿಂದಾಗಿ ರಾಜೇಂದ್ರ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಸ್ಪೋಟ ಸಂಭವಿಸಿದಾಗ ಮನೆಯಲ್ಲಿ ರಾಜೇಂದ್ರ ಹಾಗೂ ಅವರ ಮಗಳು ಇದ್ದರು ಎಂದು ತಿಳಿದುಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರತಿಷ್ಠಿತ ಐಸ್ ಕ್ರೀಂ ಕಂಪನಿ ಮಾಲೀಕರ ಸೊಸೆ ಆತ್ಮಹತ್ಯೆ ಪ್ರಕರಣ; ವಾರದ ಬಳಿಕ ಹೊರಬಿದ್ದ ಸತ್ಯ

ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮೂರ್ನಾಲ್ಕು ಮನೆಗಳಿಗೂ ಹಾನಿಯಾಗಿದೆ. ಅಕ್ಕಪಕ್ಕ ಮನೆಯ ಬಾಗಿಲು, ಡೋರ್ ಹಾಗೂ ಮನೆಯಲ್ಲಿದ್ದ ವಸ್ತುಗಳೆಲ್ಲ ಚಲ್ಲಾಪಿಲ್ಲಿಯಾಗಿವೆ. ಮನೆಯ ಮುಂಭಾಗ ನಿಲ್ಲಿಸಿದ್ದ ಕಾರು ಹಾಗೂ ಬೈಕ್​​ಗಳಿಗೂ ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಠಾಣಾ ಸಿಬ್ಬಂದಿ, ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X