ಬೆಂಗಳೂರು | ಪ್ರಿಯಕರನಿಂದ ಭ್ರೂಣ ಹತ್ಯೆ: ದೂರು ದಾಖಲಿಸಿದ ಯುವತಿ

Date:

Advertisements

ಭ್ರೂಣ ಹತ್ಯೆ ಪ್ರಕರಣಗಳು ಒಂದಾಂದ ಮೇಲೊಂದರಂತೆ ಬೆಳಕಿಗೆ ಬರುತ್ತಿರುವುದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸದ್ಯ ರಾಜ್ಯದಲ್ಲಿ ಭ್ರೂಣ ಹತ್ಯೆಯ ಕೃತ್ಯದ ಬಗ್ಗೆ ಭಾರೀ ಸುದ್ದಿಯಾಗುತ್ತಿದೆ. ಈ ಪ್ರಕರಣದಲ್ಲಿ ಕೆಲ ವೈದ್ಯರು, ನರ್ಸ್‌ಗಳು ಬಂಧನವಾಗಿದ್ದಾರೆ. ಈ ನಡುವೆ, ತನ್ನ ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣವನ್ನು ಪ್ರಿಯಕರ ಹತ್ಯೆ ಮಾಡಿಸಿದ್ದಾನೆ ಎಂದು ಯುವತಿಯೊಬ್ಬಳು ಆರೋಪಿಸಿದ್ದಾಳೆ.

ಫೇಸ್​ಬುಕ್‌ನಲ್ಲಿ ತನ್ನ ಪ್ರಿಯಕರ ಬಾಲಕೃಷ್ಣ ಸುನೀಲ್ ಎಂಬಾತನ ವಿರುದ್ಧ ಆರೋಪ ಮಾಡಿದ್ದಾರೆ. ಆತ ತನ್ನ ಗರ್ಭದಲ್ಲಿ ಭ್ರೂಣವನ್ನು ಹತ್ಯೆ ಮಾಡಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಹಾಸನ ಜಿಲ್ಲಾ ಪೊಲೀಸರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಟ್ಯಾಗ್ ಮಾಡಿ ಪ್ರಿಯಕರನ ವಿರುದ್ಧ ದೂರು ನೀಡಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

Advertisements

ಯುವತಿ ಪೋಸ್ಟ್‌ನಲ್ಲಿ ಏನಿದೆ?

ಬಾಲಕೃಷ್ಣ ಸುನೀಲ್ ಎಂಬಾತ ಕಳೆದ ಆರು ವರ್ಷಗಳಿಂದ ನನ್ನನ್ನು ಪ್ರೀತಿಸಿ, ಮದುವೆ ಆಗುತ್ತೀನಿ ಎಂದು ಮೋಸ ಮಾಡಿದ್ದಾನೆ. ಬೆಂಗಳೂರಿನಲ್ಲಿ ಗಂಡ ಹೆಂಡತಿಯರಂತೆ ಒಟ್ಟಿಗೆ ಇದ್ದೆವು. ಅಲ್ಲದೇ, ನನ್ನನ್ನು ಮದುವೆ ಆಗುವುದಾಗಿ ವಂಚಿಸಿ, ದೈಹಿಕವಾಗಿ ಬಳಸಿಕೊಂಡು ಗರ್ಭಿಣಿಯಾಗುವಂತೆ ಮಾಡಿ, ಕೊನೆಗೆ ಭ್ರೂಣ ಹತ್ಯೆ ಮಾಡಿದ್ದಾನೆ. ಇದರ ಜತೆಗೆ ನನ್ನಲ್ಲಿದ್ದ ಹಣವನ್ನೂ ದೋಚಿದ್ದಾನೆ.

ಇದೀಗ ಬೇರೊಬ್ಬ ಯುವತಿಯೊಂದಿಗೆ ಮದುವೆ ಮಾಡಿಕೊಂಡು ಹಾಸನದ ಸಕಲೇಶಪುರದ ಅಗಲಟ್ಟಿ ಎಂಬ ಊರಿನಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದು, ನ್ಯಾಯ ಕೊಡಿಸಿ ಎಂದು ಮನವಿ ಮಾಡಿಕೊಂಡಿದ್ದಾಳೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X