ಬೆಂಗಳೂರು | ಬಿಲ್ಡರ್ ಅಪಹರಿಸಿ ಕಿರುಕುಳ ನೀಡಿದ 8 ಜನರ ವಿರುದ್ಧ ಎಫ್ಐಆರ್ ದಾಖಲು

Date:

Advertisements

ಕಳೆದ ಒಂದು ವರ್ಷದಿಂದ ಬಂಧನದಲ್ಲಿದ್ದ ಬಿಲ್ಡರ್‌ವೊಬ್ಬರು ತಪ್ಪಿಸಿಕೊಂಡು ಬಂದು ಪೊಲೀಸ್‌ ಠಾಣೆಗೆ ದೂರು ನೀಡಿದ್ದಕ್ಕೆ, ಮತ್ತೆ ಅಪಹರಿಸಿ ಅವರಿಗೆ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಿರುಕುಳ ನೀಡಿದ್ದ ಆರೋಪಿಗಳ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಶೋಕ್ ಶಿವರಾಜ್ ಎಂಬುವವರು ಹಲವು ವರ್ಷಗಳಿಂದ ಬಿಲ್ಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವ್ಯವಹಾರದಲ್ಲಿ ಕುಸಿತ ಕಂಡ ಹಿನ್ನೆಲೆ, ವೀರೇಶ್ ಮತ್ತು ರಶ್ಮಿ ಎಂಬುವವರು ಪರಿಚಯವಾಗಿ ಪಾರ್ಟ್ನರ್ ಆಗಿ ಜೊತೆಗೆ ಕಾರ್ಯನಿರ್ವಹಿಸುತ್ತಾರೆ.

ಅಶೋಕ್ ಶಿವರಾಜ್ ಅವರ ಬಳಿ ಇದ್ದ ಆಸ್ತಿಗೆ ಮಾರು ಹೋದ ವೀರೇಶ್ ಮತ್ತು ರಶ್ನಿ ಅವರ ಆಸ್ತಿಯನ್ನು ಕಬಳಿಸಲು ಸಂಚು ರೂಪಿಸಿ, ಅಶೋಕ್ ಶಿವರಾಜ್ ಅವರನ್ನು ಕಳೆದ ಒಂದು ವರ್ಷದಿಂದ ಬಂಧನದಲ್ಲಿರಿಸಿ, ಅವರಿಂದ ಬಲವಂತವಾಗಿ ಜಮೀನು, ಫ್ಲಾಟ್ ಸೇರಿದಂತೆ ಕೆಲವು ಆಸ್ತಿಗಳಿಗೆ ಸಹಿ ಹಾಕಿಸಿಕೊಂಡು ಕಬಳಿಸಿರುವ ಆರೋಪ ಕೇಳಿಬಂದಿದೆ.

Advertisements

ಆರೋಪಿಗಳ ಬಂಧನದಿಂದ ತಪ್ಪಿಸಿಕೊಂಡು ಬಂದ ಅಶೋಕ್ ಶಿವರಾಜ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿ ಆರೋಪಿಸಿದ್ದಕ್ಕೆ ಮತ್ತೆ ಆರೋಪಿಗಳು ಜನವರಿ 12 ರಂದು ಜ್ಞಾನಭಾರತಿ ಸಮುದಾಯ ಭವನ‌ ಬಳಿಯಿಂದ ಅಶೋಕ್ ಶಿವರಾಜ್ ಅವರನ್ನು ಅಪಹರಣ ಮಾಡಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಸಂಬಂಧಿ ಉಷಾ ಎಂಬುವವರು ನಿರಂತರ ಕರೆ ಮಾಡಿದಾಗ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ 112ಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಪೊಲೀಸರು ಕರೆ ಮಾಡಿದ ಬಳಿಕ ಅಶೋಕ್​ ಶಿವರಾಜ್ ಅವರನ್ನು ವಾಪಸ್​​ ಬಿಟ್ಟು ಹೋಗಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರೇಶ್, ರಶ್ಮಿ, ಕೃಷ್ಣಪ್ಪ, ರಾಜಶೇಖರ್, ರಘು ಸೇರಿ 8 ಜನರ ವಿರುದ್ಧ ದೂರು ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿಗೆ ಜ.19ರಂದು ಪ್ರಧಾನಿ ಮೋದಿ ಆಗಮನ; ಸಂಚಾರ ಮಾರ್ಗ ಬದಲಾವಣೆಯ ವಿವರ ಇಲ್ಲಿದೆ

ಈ ಎಂಟು ಜನ ಆರೋಪಿಗಳು ಅಶೋಕ್​ ಅವರನ್ನು ಒಂದು ವರ್ಷ ಬಂಧನದಲ್ಲಿಟ್ಟು ಹಿಂಸೆ ನೀಡಿದ್ದರು ಎಂದು ಅಶೋಕ್ ಶಿವರಾಜ್ ಅವರು ಆರೋಪಿಸಿದ್ದಾರೆ.

ಇನ್ನು ಅಶೋಕ್ ಶಿವರಾಜ್​ ವಿರುದ್ಧವೂ ನಗರದ ನಾನಾ ಪೊಲೀಸ್ ಠಾಣೆಯಲ್ಲಿ ಹಲವು ವಂಚನೆ ಪ್ರಕರಣಗಳಿದ್ದು, ಎಫ್ಐಆರ್ ದಾಖಲಾಗಿರುವುದು ಪತ್ತೆಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X