ಬೆಂಗಳೂರು | ತಮಾಷೆ ಮಾಡಲು ಗುದನಾಳಕ್ಕೆ ‘ಏರ್‌ಪ್ರೆಶರ್‌’ನಿಂದ ಗಾಳಿ ಬಿಟ್ಟ ಸ್ನೇಹಿತ: ಕರುಳು ಛಿದ್ರವಾಗಿ ಯುವಕ ಸಾವು

Date:

Advertisements

ತಮಾಷೆ ಮಾಡಲು ಹೋಗಿ ತನ್ನ ಸ್ನೇಹಿತನ ಗುದನಾಳಕ್ಕೆಏರ್ ಪ್ರೆಶರ್ ಪೈಪ್‌’ನಿಂದ ಗಾಳಿ ಬಿಟ್ಟ ಪರಿಣಾಮ ಒತ್ತಡ ಹೆಚ್ಚಾಗಿ ದೇಹದೊಳಗಿನ ಕರುಳು ಛಿದ್ರವಾಗಿದ್ದು, ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯೋಗೇಶ್ (24) ಮೃತ ಯುವಕ. ಆರೋಪಿ ಮುರುಳಿ ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ಮಾರ್ಚ್‌ 25ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೂಲತಃ ದೇವನಹಳ್ಳಿ ತಾಲೂಕಿನ ಯೇಗೇಶ್ ಥಣಿಸಂದ್ರದಲ್ಲಿದ್ದ ತನ್ನ ಅಜ್ಜಿ ಮನೆಯಲ್ಲಿ ತಂದೆ ಹಾಗೂ ಅಕ್ಕನೊಂದಿಗೆ ವಾಸವಾಗಿದ್ದರು. ಫಾರ್ಮಾ ಕಂಪೆನಿಯೊಂದರಲ್ಲಿ ಡೆಲಿವರಿ ಬಾಯ್ಆಗಿ ಕೆಲಸ ಮಾಡುತ್ತಿದ್ದರು. ಮುಂದಿನ ಏಪ್ರಿಲ್ ತಿಂಗಳಿನಲ್ಲಿ ಆತನ ಸಹೋದರಿಯ ವಿವಾಹವೂ ನಿಶ್ಚಯವಾಗಿತ್ತು. ಹೀಗಾಗಿ, ಮದುವೆ ಕೆಲಸ ಕಾರ್ಯಗಳಿಗಾಗಿ ಓಡಾಡುತ್ತಿದ್ದರು.

Advertisements

ಮಾರ್ಚ್‌ 25 ಸಂಜೆ ತನ್ನ ಬೈಕ್‌ ಸರ್ವೀಸ್‌ಗಾಗಿ ಥಣಿಸಂದ್ರದಲ್ಲಿ ವಾಹನ ಸರ್ವೀನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ತನ್ನ ಸ್ನೇಹಿತ ಮುರುಳಿಗೆ ಬೈಕ್‌ ಕೊಡಲು ಯೋಗೇಶ್‌ ಹೋಗಿದ್ದರು.  ವೇಳೆ, ಯೋಗೇಶ್ ನಿಂತಿದ್ದಲ್ಲಿಗೆ ತೆರಳಿದ ಮುರುಳಿ ತಮಾಷೆಗಾಗಿ ಏಕಾಏಕಿ ಆತನ ಗುದದ್ವಾರಕ್ಕೆ ಏರ್ ಪ್ರೆಶರ್​​ನಿಂದ ಗಾಳಿ ಬಿಟ್ಟಿದ್ದಾನೆ ಎನ್ನಲಾಗಿದೆ.

ಗಾಳಿಯ ಒತ್ತಡ ಹೆಚ್ಚಾಗಿ ದೇಹದ ಹೊಟ್ಟೆಯೊಳಗಿನ ಕರುಳು ಸ್ಫೋಟಗೊಂಡು ಯೋಗೇಶ್ ಅಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೂಡಲೇ, ಆತನನ್ನು ಮುರುಳಿ ಹಾಗೂ ಇನ್ನಿತರರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯೋಗೇಶ್ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 304 ಅಡಿ ಪ್ರಕರಣ ದಾಖಲಾಗಿದೆ. ಆರೋಪಿ ಮುರುಳಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ವಿಪಕ್ಷಗಳ ಮೇಲೆ ಮೋ-ಶಾ ಪ್ರಯೋಗಿಸುತ್ತಿರುವ ಅಸ್ತ್ರಗಳಿವು

ಘಟನೆ ಸಂಬಂಧ ಮಾತನಾಡಿದ ಡಿಸಿಪಿ ಲಕ್ಷ್ಮೀ ಪ್ರಸಾದ್, “ಮೃತ ಯೋಗೇಶ್ ಮೂಲತಃ ವಿಜಯಪುರದವರು. ಬೆಂಗಳೂರಿನಲ್ಲಿ ಡೆಲವರಿ ಏಜೆಂಟ್ ಆಗಿ ಕೆಲಸ ಮಾಡಿಕೊಂಡು ನಗರದ ಥಣಿಸಂದ್ರದಲ್ಲಿ ವಾಸವಿದ್ದನು. ಮುರುಳಿ ಹಾಗೂ ಯೋಗೇಶ್ ಇಬ್ಬರು ಸ್ನೇಹಿತರಾಗಿದ್ದ ಕಾರಣ ಆಟ ಆಡಲು ಹೋಗಿ ಈ ಘಟನೆ ಸಂಭವಿಸಿದೆ. ಮೊದಲಿಗೆ ಮುರುಳಿ, ಯೋಗೇಶ್‌ನ ಮುಖ ಹಾಗೂ ಎದೆಗೆ ಗಾಳಿ ಬಿಟ್ಟಿದ್ದಾನೆ” ಎಂದರು.

ಬಳಿಕ, ಹಿಂಬದಿಯಿಂದ ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದಾನೆ. ವೇಳೆ ಹೊಟ್ಟೆ ಒಮ್ಮೆಲೆ ಊದಿಕೊಂಡು ಯೋಗೇಶ್ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ” ಎಂದು ವಿವರಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X