ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕನೊಬ್ಬ ಅಪಾರ್ಟ್ಮೆಮಟ್ನ 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಂಜಿತ್ (25) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಮನವರ್ತ್ ಕಾವಲಿನಲ್ಲಿರುವ ಅಪಾರ್ಟ್ಮೆಂಟ್ ನಿವಾಸಿ. ಏ.29ರ ಸಾಯಂಕಾಲ 7:30ರ ಸುಮಾರಿಗೆ ಈ ಘಟನೆ ನಡೆದಿದೆ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಸಂಜಿತ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರೆದಿದೆ.
ಸಂಜಿತ್ ಪದವಿ ವ್ಯಾಸಾಂಗ ಮುಗಿಸಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿದ್ದನು. ಯಾರೊಂದಿಗೂ ಹೆಚ್ಚಾಗಿ ಮಾತನಾಡುತ್ತಿರಲಿಲ್ಲ ಎಂದು ತಿಳಿದುಬಂದಿದೆ.
ಸೋಮವಾರ ರಾತ್ರಿ 7.30ರ ಸುಮಾರಿಗೆ ಅಪಾರ್ಟ್ಮೆಂಟ್ನ 14ನೇ ಮಹಡಿಯಿಂದ ಸಂಜಿತ್ ಜಿಗಿದಿದ್ದನು. ಬಾಳೆಗಿಡಗಳ ಮೇಲೆ ಬಿದ್ದು ಬಳಿಕ ನೆಲಕ್ಕೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾನೆ. ಜೋರಾದ ಶಬ್ದ ಕೇಳಿದ ಅಪಾರ್ಟ್ಮೆಂಟ್ ನಿವಾಸಿಗಳು ಹೊರಗೆ ಬಂದು ನೋಡಿದಾಗ, ಸಂಜಿತ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ| ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಕೂಡಲೇ ಆತನ ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಸ್ಥಳೀಯರ ಸಹಾಯದಿಂದ ಆತನನ್ನ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.