ಬೆಂಗಳೂರು | ‘ಆರ್‌ಸಿಬಿ’ಗೆ ನಿರ್ಣಾಯಕ ಪಂದ್ಯ; ಮಳೆಯಾದ್ರೆ ಗತಿಯೇನು?

Date:

Advertisements

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)​ ಹಂಗಾಮದಲ್ಲಿ 10 ತಂಡಗಳ ಹಣಾಹಣಿ ನಡೆಯುತ್ತಿದೆ. ಈಗಾಗಲೇ, ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಗೆಲುವು ಸಾಧಿಸುವುದರೊಂದಿಗೆ ಕೆಕೆಆರ್ ತಂಡ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿದೆ. ಆದರೀಗ, ಫ್ಲೇ ಆಫ್‌ ಕನಸನ್ನು ಇನ್ನು ಜೀವಂತವಾಗಿರಿಸಿಕೊಂಡಿರುವ ಆರ್‌ಸಿಬಿಗೆ ಉಳಿದಿರುವ ಎರಡು ಪಂದ್ಯಗಳು ನಿರ್ಣಾಯಕವಾಗಿವೆ.

ರಾಯಲ್ ಚಾಲೆಂಜರ್ಸ್ (ಆರ್‌ಸಿಬಿ)ಯ ಎರಡು ನಿರ್ಣಾಯಕ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಹೈವೋಲ್ಟೆಜ್ ಅಂತಾನೇ ಕರೆಯಿಸಿಕೊಳ್ಳುತ್ತಿರುವ ಈ ಪಂದ್ಯ ಇಂದು ಅಂದರೆ, ಮೇ 12ರಂದಯ ಸಂಜೆ 7:30ಕ್ಕೆ ನಡೆಯಲಿದೆ. ಪ್ಲೇ ಆಫ್​ಗೆ ಏರಲು ಉಭಯ ತಂಡಗಳಿಗೂ ಈ ಪಂದ್ಯ ನಡೆಯುವುದು ಅತ್ಯವಶ್ಯಕವಾಗಿದೆ.

ಆದರೆ, ರಾಜ್ಯಾದ್ಯಂತ ಮಳೆ ಸುರಿಯುತ್ತಿದ್ದು, ನಗರದಲ್ಲಿ ಸಾಯಂಕಲದಿಂದ ಮೋಡ ಕವಿದ ವಾತಾವರಣವಿದೆ. ಬೆಂಗಳೂರಿಗೂ ವರುಣ ಆಗಮಿಸುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ, ಪಂದ್ಯ ನಡೆಯುವವ ವೇಳೆಯೂ ಮಳೆಯಾಗಬಹುದು ಎನ್ನಲಾಗಿದೆ. ಮಳೆ ಪಂದ್ಯಕ್ಕೆ ಅಡ್ಡಿಪಡಿಸುವ ಸಾಧ್ಯತೆಗಳು ಹೆಚ್ಚಾಗಿದೆ.

Advertisements

ಮೇ 12ರ ಮಧ್ಯಾಹ್ನದಿಂದಲೇ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಧಾರಕಾರ ಮಳೆ ಸುರಿಯುತ್ತಿದೆ. ಹೀಗಾಗಿ, ಇಂದಿನ ಪಂದ್ಯದಲ್ಲಿ ಗೆದ್ದು ಆರ್​ಸಿಬಿ ಪ್ಲೇಆಫ್​ಗೆ ಹತ್ತಿರವಾಗುವುದನ್ನು ನೋಡಬೇಕೆಂದುಕೊಂಡಿದ್ದ ಅಭಿಮಾನಿಗಳಲ್ಲಿ ಆತಂಕ ಮನೆಮಾಡಿದೆ.

2ನೇ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಆರ್​ಸಿಬಿ ಎದುರಾಗಲಿದ್ದು, ಎರಡು ತಂಡಗಳಿಗೂ ಗೆಲುವು ಅನಿವಾರ್ಯವಾಗಿದೆ. ಪ್ಲೇ ಆಫ್​ಗಾಗಿ ರೇಸ್​ನಲ್ಲಿರುವ ತಂಡಗಳ ಪೈಕಿ ಎರಡೂ ಪೈಪೋಟಿಯಲ್ಲಿವೆ. ಡೆಲ್ಲಿ 12ರಲ್ಲಿ ತಲಾ 6 ಗೆಲುವು ಸೋಲು ಕಂಡಿದೆ. ರನ್​ರೇಟ್​ನಲ್ಲಿ -0.316 ಹೊಂದಿದ್ದು, ಆರ್​ಸಿಬಿ ವಿರುದ್ಧ ಗೆದ್ದಲ್ಲಿ ಪಾಯಿಂಟ್ಸ್​ ಮತ್ತು ರನ್​ರೇಟ್​ ಉತ್ತಮವಾಗಲಿದೆ. ಆಗ, ಲಖನೌ ವಿರುದ್ಧದ ಪಂದ್ಯದ ಫಲಿತಾಂಶದ ಮೇಲೆ ತಂಡದ ಹಣೆಬರಹ ಗೊತ್ತಾಗಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾರಿನ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಸಾವು

ಇತ್ತ ಆರ್​ಸಿಬಿ ಸತತ 5 ಸೋಲುಗಳನ್ನು ಕಂಡ ಬಳಿಕ ಟೂರ್ನಿಯಲ್ಲಿ ಎಲಿಮಿನೇಟ್​ ಆಗುವ ಮೊದಲ ತಂಡವಾಗಲಿದೆ ಎಂದು ಭಾವಿಸಲಾಗಿತ್ತು. ಆದರೆ, ಫೀನಿಕ್ಸ್​ ಹಕ್ಕಿಯಂತೆ ಎದ್ದು ಬಂದ ಫಾಫ್​ ಡು ಪ್ಲೆಸಿಸ್​ ನೇತೃತ್ವದ ಪಡೆ ಸತತ 4 ಗೆಲುವು ದಾಖಲಿಸಿತು. ಆಡಿರುವ 12ರಲ್ಲಿ 5 ಪಂದ್ಯ ಗೆದ್ದಿದ್ದು, 7ರಲ್ಲಿ ಸೋತು 10 ಪಾಯಿಂಟ್ಸ್​ ಹೊಂದಿದೆ. ಆರ್​​ಆರ್ ವಿರುದ್ಧ ಇಂದು ಚೆನ್ನೈ ಸೋಲಬೇಕು. ಡೆಲ್ಲಿ ವಿರುದ್ಧ ದೊಡ್ಡ ಅಂತರದಲ್ಲಿ ತಾನು ಗೆಲ್ಲಬೇಕು. ಕೊನೆಯ ಪಂದ್ಯ ಸಿಎಸ್​ಕೆ ವಿರುದ್ಧ ನಡೆಯಲಿದ್ದು, ಅಲ್ಲಿ ಗೆಲುವೊಂದೇ ಮಂತ್ರವಾಗಿದೆ. ಆಗ ಮಾತ್ರ ಪ್ಲೇಆಫ್​ ಹಾದಿಯಲ್ಲಿ ಉಳಿಯಲು ಸಾಧ್ಯ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X