ಬೆಂಗಳೂರು | ಹುಸ್ಕೂರು ಮದ್ದೂರಮ್ಮ ಜಾತ್ರೆ; ನಿಯಂತ್ರಣ ತಪ್ಪಿ ನೆಲಕ್ಕುರುಳಿದ 120 ಅಡಿ ಎತ್ತರದ ತೇರು

Date:

Advertisements

ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನೂರಾರು ವರ್ಷಗಳ ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆ ನಡೆಯುತ್ತಿದೆ. ಈ ಜಾತ್ರೆಗೆ ಹತ್ತಾರು ಊರುಗಳಿಂದ ತೇರು ಬರುತ್ತವೆ. ಹೀಲಲಿಗೆ ಗ್ರಾಮದಿಂದ ಜಾತ್ರೆಗೆ ಬರುತ್ತಿದ್ದ ಸುಮಾರು 120 ಅಡಿ ಉದ್ದದ ತೇರು ನೆಲಕ್ಕುರುಳಿದ ಘಟನೆ ನಡೆದಿದೆ.

ಆನೇಕಲ್ ತಾಲೂಕಿನ ಹೀಲಲಿಗೆಯಿಂದ ಹುಸ್ಕೂರಿಗೆ ಸುಮಾರು 70 ಎತ್ತುಗಳು ಹಾಗೂ ಟ್ರ್ಯಾಕ್ಟರ್ ಮೂಲಕ ತೇರನ್ನು ಎಳೆದುಕೊಂಡು ಹೋಗಲಾಗುತ್ತಿತ್ತು. ತೇರು ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ಎಡಭಾಗಕ್ಕೆ ವಾಲಿಕೊಂಡು ನಿಧಾನವಾಗಿ ತೇರು ನೆಲಕ್ಕೆ ಅಪ್ಪಳಿಸಿದೆ. ರಥವು ಹೆಚ್ಚು ಎತ್ತರದಲ್ಲಿದ್ದ ಕಾರಣ ನಿಯಂತ್ರಣ ತಪ್ಪಿ ತೇರು ಕುಸಿದು ಬಿದ್ದಿದೆ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಘಟನೆಯಿಂದ ಯಾವುದೇ ಸಾವುನೋವು ಸಂಭವಿಸಿಲ್ಲ.

ಇನ್ನು ಈ ಘಟನೆ ಇದೇ ಮೊದಲಲ್ಲ, 2018ರಲ್ಲಿಯೂ ಮದ್ದೂರಮ್ಮ ಜಾತ್ರೆಯಲ್ಲಿ ತೇರು ಕುಸಿದು ಬಿದ್ದಿತ್ತು.

Advertisements

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯಿಂದ 5 ಕಿ.ಮೀ. ದೂರದಲ್ಲಿರುವ ಹುಸ್ಕೂರು ಮದ್ದೂರಮ್ಮನ ಜಾತ್ರೆಗೆ ನೂರಾರು ವರ್ಷಗಳ ಇತಿಹಾಸವಿದೆ. ಈ ದೇವಾಲಯವನ್ನು ಚೋಳ ರಾಜರು ನಿರ್ಮಿಸಿದ್ದಾರೆ ಎಂಬ ಇತಿಹಾಸವಿದೆ.

ಈ ಸುದ್ದಿ ಓದಿದ್ದೀರಾ? ಏ.6 ರಿಂದ ಏ.10 ರವರೆಗೆ ತಾಪಮಾನದಲ್ಲಿ ಏರಿಕೆ ಸಾಧ್ಯತೆ: ಜನರಿಗೆ ಸಲಹೆ ನೀಡಿದ ಹವಾಮಾನ ಇಲಾಖೆ

ಪ್ರತಿ ವರ್ಷ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಮದ್ದೂರಮ್ಮನ ಜಾತ್ರೆ ನಡೆಯುತ್ತದೆ. ಹುಸ್ಕೂರಿನ ಮದ್ದೂರಮ್ಮ ದೇವಸ್ಥಾನಕ್ಕೆ ಸುತ್ತಲಿನ 10ಕ್ಕೂ ಅಧಿಕ ಗ್ರಾಮಗಳಿಂದ ತೇರನ್ನು ತೆಗೆದುಕೊಂಡು ಬರಲಾಗುತ್ತದೆ. ಇಲ್ಲಿನ ಗ್ರಾಮೀಣ ಭಾಗದ ಜನರು ಅತಿ ಎತ್ತರದ ತೇರುಗಳನ್ನು ನಿರ್ಮಿಸಿಕೊಂಡು ಬಂದು ಮದ್ದೂರಮ್ಮನಿಗೆ ಅರ್ಪಣೆ ಮಾಡುತ್ತಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X