ಬೆಂಗಳೂರು | ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯ: ವಿಚಾರಣೆಗೆ ಹಾಜರಾಗಲು ನೋಟಿಸ್​!

Date:

Advertisements

ಸತತ 42 ಗಂಟೆಗಳ ಪರಿಶೀಲನೆಯ ನಂತರ ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯವಾಗಿದೆ. ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಮೆಟ್ರೋ ಕಾರ್ಪ್ ಕಂಪನಿ ಪಾಲುದಾರರಾಗಿರುವ ಅಂಬಿಕಾಪತಿ ಪುತ್ರ ಪ್ರದೀಪ್ ಮತ್ತು ಪ್ರಮೋದ್​​ಗೆ ಐಟಿಯಿಂದ ನೋಟಿಸ್​ ನೀಡಲಾಗಿದೆ.

ನಗರದ ಮಾನ್ಯತಾ ಟೆಕ್​ಪಾರ್ಕ್‌ನಲ್ಲಿರುವ ಗುತ್ತಿಗೆದಾರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಅವರ ನಿವಾಸದಲ್ಲಿ ಕಳೆದ 42 ಗಂಟೆಗಳಿಂದ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹಲವು ಮಹತ್ವದ ದಾಖಲೆಗಳೊಂದಿಗೆ ಪಂಚನಾಮೆ ಕಾರ್ಯ ಪೂರ್ಣಗೊಳಿಸಿದ್ದಾರೆ.

ಗುರುವಾರ ಕಂತೆ ಕಂತೆ ಹಣ ಪತ್ತೆಯಾದ ಬೆನ್ನಲ್ಲೇ, ಐಟಿ ಅಧಿಕಾರಿಗಳು ಅಂಬಿಕಾಪತಿ ಅವರ ನಿವಾಸದಲ್ಲಿ ತಂಗಿದ್ದು, ಶನಿವಾರವೂ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇನ್ನು ಮಾನ್ಯತಾ ಟೆಕ್​ ಪಾರ್ಕ್​ನ ಮನೆಯಲ್ಲಿ ಐಟಿ ಅಧಿಕಾರಿಗಳ ಶೋಧ ಕಾರ್ಯ ಮುಂದುವರೆದಿದೆ.

Advertisements

ಶುಕ್ರವಾರ ರಾತ್ರಿ ಲಾಕರ್​ನಲ್ಲಿ ಎರಡು ಸೂಟ್ ಕೇಸ್ ಪತ್ತೆಯಾಗಿವೆ. ಇದರಲ್ಲಿ ಅಶ್ವಥಮ್ಮ, ಅಂಬಿಕಾಪತಿ ಅವರ ಆಸ್ತಿಗೆ ಸಂಬಂಧಿಸಿದ ಕೆಲ ದಾಖಲೆಗಳು ದೊರೆತಿವೆ.

ಸದ್ಯ ಅಧಿಕಾರಿಗಳು ಚಿನ್ನಾಭರಣ, ನಗದು ಹಣ, ದಾಖಲೆ ಪತ್ರಗಳು ಎಲ್ಲವನ್ನೂ ಕ್ರೋಡೀಕರಿಸಿ ಲೆಕ್ಕ ಹಾಕಿ ಜಪ್ತಿ ಮಾಡಿದ್ದಾರೆ.

“ಕಳೆದ 15 ವರ್ಷಗಳಿಂದ ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡುತ್ತಿದ್ದೇವೆ. ಐಟಿ ದಾಳಿ ವೇಳೆ, ದೊರೆತ ₹42 ಕೋಟಿ ಹಣದ ಬಗ್ಗೆ ಐಟಿ ಇಲಾಖೆಗೆ ವಿವರಣೆ ನೀಡುತ್ತೇವೆ. ಹಾಗೆಯೇ, ನಮ್ಮ ಕೆಲವು ಆಸ್ತಿಯನ್ನು ಮಾರಾಟ ಮಾಡಿದ ಹಣವನ್ನು ಮನೆಯಲ್ಲಿ ಇಡಲಾಗಿತ್ತು. ಎಲ್ಲ ದಾಖಲೆಗಳನ್ನು ನೀಡಿ, ಹಣವನ್ನು ಬಿಡಿಸಿಕೊಳ್ಳುತ್ತೇವೆ. ಈ ದುಡ್ಡಿಗೂ ನಮ್ಮ ತಂದೆ ಅಂಬಿಕಾಪತಿ ಅವರಿಗೂ ಯಾವುದೇ ಸಂಬಂಧವಿಲ್ಲ. ಸುಮ್ಮನೆ ಅವರನ್ನು ಈ ವಿಚಾರದಲ್ಲಿ ಎಳೆದು ತರಬೇಡಿ. ಐಟಿ ಅಧಿಕಾರಿಗಳು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ವಿಚಾರಣೆಗೆ ಹಾಜರಾಗುತ್ತೇನೆ” ಎಂದು ಅಂಬಿಕಾಪತಿ ಪುತ್ರ ಪ್ರದೀಪ್‌ ತಿಳಿಸಿದ್ದಾರೆ.

₹42 ಕೋಟಿಗೂ ಅಧಿಕ ಹಣಕ್ಕೆ ಅಂಬಿಕಾಪತಿ ಕುಟುಂಬ ಲೆಕ್ಕ ಕೊಡಬೇಕಿದೆ. ಹಣದ ಮೂಲ ಕೆದಕುವುದಕ್ಕೆ ಮುಂದಾಗಿರುವ ಐಟಿ ಅಧಿಕಾರಿಗಳು ಮಂಗಳವಾರದಿಂದ ತನಿಖೆ ಆರಂಭಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಚದಡಿ ₹42 ಕೋಟಿ ನಗದು ಪತ್ತೆ; ಅಂಬಿಕಾಪತಿ ದಂಪತಿ ಬಂಧನ ಸಾಧ್ಯತೆ

ಐಟಿ ಅಧಿಕಾರಿಗಳು ಗುರುವಾರ ಚಿನ್ನದ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾಗ ಭಾರೀ ಪ್ರಮಾಣದ ನಗದು ಸಂಗ್ರಹವಾಗಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದೆ. ಆ ಮಾಹಿತಿ ಆಧರಿಸಿ ಅಂಬಿಕಾಪತಿ ನಿವಾಸದ ಮೇಲೆ ದಾಳಿ ಮಾಡಿದಾಗ ಮಂಚದ ಕೆಳಗೆ ಕಂತೆ ಕಂತೆ ನಗದು ಪತ್ತೆಯಾಗಿತ್ತು.

ಪಂಚರಾಜ್ಯ ಚುನಾವಣೆ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಈ ಭಾರೀ ಮೊತ್ತದ ಹಣವನ್ನು ಎಲೆಕ್ಷನ್ ಫಂಡಿಂಗ್ ನೀಡಲು ಸಿದ್ದತೆ ನಡೆದಿತ್ತು ಎಂದು ತಿಳಿದು ಬಂದಿದೆ. ಆದರೆ ಐಟಿ ಅಧಿಕಾರಿಗಳು ಖಚಿತ ಮಾಹಿತಿಯನ್ನು ಆಧರಿಸಿ ದಾಳಿ ಮಾಡಿ ಮಂಚದಡಿ ಸಂಗ್ರಹಿಸಿಟ್ಟ ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.

ಅಂಬಿಕಾಪತಿ ಮನೆ ಮೇಲೆ ಐಟಿ ದಾಳಿ

ಗುತ್ತಿಗೆದಾರ ಅಂಬಿಕಾಪತಿ ಮನೆ, ಆರ್​​ಟಿ ನಗರದ ವೈಟ್​ ಗೌಸ್​ನಲ್ಲಿರುವ ಅಂಬಿಕಾಪತಿ ಮಗಳ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಒಂದು ಮನೆ ಮತ್ತು ಆರ್​ಟಿ ನಗರದ ಸುಲ್ತಾನ್ ಪಾಳ್ಯದಲ್ಲಿ ಎರಡು ಕಡೆ ದಾಳಿ ಮಾಡಲಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X