ಬೆಂಗಳೂರು | ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಃಶ್ಚೇತನಕ್ಕೆ ಜಲಮಂಡಳಿ ಸಿದ್ದತೆ

Date:

Advertisements

ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿಗೆ 1896ರಲ್ಲಿ ಅರ್ಕಾವತಿ ನದಿಯ ನೀರನ್ನ ಹರಿಸಿದ್ದ ಐತಿಹಾಸಿಕ ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಃಶ್ಚೇತನಗೊಳಿಸುವ ಐತಿಹಾಸಿಕ ನಿರ್ಧಾರವನ್ನು ಜಲಮಂಡಳಿ ಕೈಗೊಂಡಿದೆ.

ದೇಶದಲ್ಲೇ ಮೊದಲ ಬಾರಿಗೆ ವ್ಯವಸ್ಥಿತವಾದ ನೀರು ಸರಬರಾಜು ವ್ಯವಸ್ಥೆಯನ್ನು ಹೊಂದಿದ ಎರಡನೇ ನಗರ ಬೆಂಗಳೂರು. 1873ರಲ್ಲಿ ಮೊದಲ ಬಾರಿಗೆ ಮಿಲ್ಲರ್ಸ್‌ ಟ್ಯಾಂಕ್ ಎಂದು ಹೆಸರು ಪಡೆದಂತಹ ಹಲವಾರು ಕೆರೆಗಳ ಜಾಲದ ಮೂಲಕ ಬೆಂಗಳೂರು ನಗರಕ್ಕೆ ನೀರು ಪೂರೈಸುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. 1875-77ರ ಧಾತು ಈಶ್ವರ ಕ್ಷಾಮ(Great Famine of 1875-77) ದಿಂದ ಎರಡೂವರೆ ವರ್ಷಗಳ ಕಾಲ ಮಳೆ ಇಲ್ಲದೆ ಎಲ್ಲ ಜಲಮೂಲಗಳೂ ಬತ್ತಿ ಹೋಗಿದ್ದವು.

ಬೆಳೆಯುತ್ತಿರುವ ನಗರದ ನೀರಿನ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಅಂದಿನ ಮೈಸೂರು ರಾಜರ ದಿವಾನರಾಗಿದ್ದ ಕೆ.ಶೇಷಾದ್ರಿ ಅಯ್ಯರ್‌ ಅವರು, ಹೆಸರುಘಟ್ಟ ಕೆರೆಯ ಮೂಲಕ ಅರ್ಕಾವತಿ ನದಿಯ ನೀರನ್ನ ಬೆಂಗಳೂರಿಗೆ ಹರಿಸುವ ಚಿಂತನೆ ನಡೆಸಿದರು. ಚಾಮರಾಜೇಂದ್ರ ವಾಟರ್‌ ವರ್ಕ್ಸ್‌ ಎಂದು ಇದಕ್ಕೆ ಹೆಸರಿಡಲಾಗಿತ್ತು.

Advertisements

ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ ಪುನಃಶ್ಚೇತನ

ಭೀಕರ ಕ್ಷಾಮದಿಂದ ಬಳಲಿದ್ದ ಬೆಂಗಳೂರು ನಗರಕ್ಕೆ ನೀರು ಹರಿಸಿದ್ದ ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ನಿಂದ 1896ರಲ್ಲಿ ನೀರು ಹರಿಸಿದಂತೆ ಹೆಸರಘಟ್ಟ ಕೆರೆಯಿಂದ ಮತ್ತೆ ನಗರಕ್ಕೆ ನೀರು ಹರಿಸಲು ಜಲಮಂಡಳಿ ಚಿಂತನೆ ನಡೆಸುತ್ತಿದೆ.

ಸದ್ಯ ಹೆಸರಘಟ್ಟ ಕೆರೆಯಲ್ಲಿ ಸುಮಾರು 0.3 ಟಿಎಂಸಿ ಯಷ್ಟು ನೀರು ಲಭ್ಯವಿದೆ. ಇದಕ್ಕೆ ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ನಲ್ಲಿ ಅಗತ್ಯ ಟ್ರೀಟ್‌ಮೆಂಟ್‌ ನೀಡಿ, ಎಂ.ಇ.ಐ ಲೇಔಟ್‌ನಲ್ಲಿರುವ ಜಲಸಂಗ್ರಾಹಾರಕ್ಕೆ ಪಂಪ್‌ ಮಾಡಲಾಗುವುದು. ಇಲ್ಲಿನಿಂದ ಅಗತ್ಯವಿರುವಂತಹ ಪ್ರದೇಶಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವುದು ಇದರ ಉದ್ದೇಶವಾಗಿದೆ.

ಏಪ್ರಿಲ್‌ 20ರ ಒಳಗಾಗಿ ಸಿದ್ದತೆ ಪೂರ್ಣಗೊಳಿಸಲು ಸೂಚನೆ

ಏಪ್ರಿಲ್‌ 20 ರ ಒಳಗಾಗಿ ಈ ಪಂಪಿಂಗ್‌ ಸ್ಟೇಷನ್‌ನ ಪುನಶ್ಚೇತನಕ್ಕೆ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳುವಂತೆ ಜಲಮಂಡಳಿ ಅಧ್ಯಕ್ಷ ಡಾ ವಿ ರಾಮ್‌ ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮಹಿಳೆಯರ ಕುರಿತು ಎಚ್‌ಡಿಕೆ ಆಕ್ಷೇಪಾರ್ಹ ಹೇಳಿಕೆ; ಪ್ರಕರಣ ದಾಖಲಿಸಲು ಮುಂದಾದ ಮಹಿಳಾ ಆಯೋಗ

“128 ವರ್ಷಗಳ ಹಿಂದಿನ ಭೀಕರ ಬರಗಾಲದ ಸಮಯದಲ್ಲಿ ನಗರದ ಭವಿಷ್ಯಕ್ಕಾಗಿ ಅಂದಿನ ಮಹನೀಯರುಗಳು ಕೈಗೊಂಡ ಮಹತ್ವದ ನಿರ್ಧಾರಗಳಿಂದ ಇಂದು ಬೆಂಗಳೂರು ನಗರ ಸಮರ್ಪಕ ನೀರು ಸರಬರಾಜನ್ನು ಕಾಣುತ್ತಿದೆ. ಮೇ ತಿಂಗಳಲ್ಲಿ ಮಳೆ ಬೀಳದೇ ನೀರಿನ ಕೊರತೆ ಹೆಚ್ಚಾದಲ್ಲಿ ಅದನ್ನ ಎದುರಿಸಲು ಜಲಮಂಡಳಿ ಸಿದ್ದವಾಗುತ್ತಿದೆ. ಗತಕಾಲದ ವೈಭವ ಮತ್ತು ತಂತ್ರಜ್ಞಾನವನ್ನು ಸಾರವಂತಹ ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ ಪುನಃಶ್ಚೇತಗೊಳಿಸುವಂತೆ ಸೂಚನೆ ನೀಡಲಾಗಿದೆ. ಈ ಮೂಲಕ ಇತಿಹಾಸದ ಮೈಲುಗಲ್ಲನ್ನ ಇಂದಿಗೂ ಪ್ರಸ್ತುತಗೊಳಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X