ಬೆಂಗಳೂರು | ಲೌಡ್ ಸ್ಪೀಕರ್ ಜಗಳ; ಐವರ ಬಂಧನ

Date:

ಬೆಂಗಳೂರಿನ ನಗರತ್​ಪೇಟೆಯ ಮೊಬೈಲ್ ಶಾಪ್‌ವೊಂದರಲ್ಲಿ ಹಾಕಲಾಗಿದ್ದ ಸ್ಪೀಕರ್‌ನ ಶಬ್ದ ಜಾಸ್ತಿಯಾಗಿದೆ ಎಂದು ಗಲಾಟೆ ನಡೆದಿದೆ. ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣೆಯ ಪೊಲೀಸರು ಐವರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿಗಳಾದ ಸುಲೇಮಾನ್, ತರುಣ್, ಶನವಾಜ್, ರೋಹಿತ್ ಹಾಗೂ ಡ್ಯಾನಿಶ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 506, 504, 149, 307, 323 ಹಾಗೂ 324ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ನಗರತ್​ಪೇಟೆಯ ಸಿದ್ದಣ್ಣ ಗಲ್ಲಿಯಲ್ಲಿ ಮಾ.17ರ ಸಾಯಂಕಾಲ ಕೃಷ್ಣ ಟೆಲಿಕಾಂ ಅಂಗಡಿ ಮಾಲೀಕ ಮುಕೇಶ್ ಎಂಬಾತನ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿದೆ ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಘಟನೆಗೆ ಸಂಬಂಧಿಸಿದಂತೆ ಮುಖೇಶ್ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ‘ಲೌಡ್ ಸ್ಪೀಕರ್ ಜೋರಾಗಿ ಇಟ್ಟಿದ್ದಕ್ಕೆ ಯುವಕರ ಗುಂಪು ನನ್ನ ಮೇಲೆ ಹಲ್ಲೆ ಮಾಡಿದೆ’ ಎಂದು ದೂರುದಾರ ಮುಕೇಶ್ ಆರೋಪಿಸಿದ್ದಾರೆ.

ಆತನ ದೂರಿನ ಮೇರೆಗೆ ಸುಲೇಮಾನ್, ಶಾನವಾಝ್, ರೋಹಿತ್, ದಾನಿಶ್, ತರುಣಾ ಅಲಿಯಾಸ್ ದಡಿಯ ಹಾಗೂ ಇತರರ ವಿರುದ್ದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಆರೋಪಿಗಳ ವಿರುದ್ಧ ಐಪಿಸಿ 1860ರ ಅಡಿಯಲ್ಲಿ ಬರುವ ಕಲಂ 506, 504, 149, 307, 323 8 324 ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸುತ್ತಿರುವ ದೃಶ್ಯವು ಮೊಬೈಲ್ ಅಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಲೌಡ್ ಸ್ಪೀಕರ್ ಜಗಳಕ್ಕೆ ಕೋಮು ಬಣ್ಣ ಬಳಿಯಲೆತ್ನಿಸಿದ ಬಿಜೆಪಿ; ಎಫ್‌ಐಆರ್‌ನಲ್ಲಿ ಇರೋದೇನು?

ಈ ಪ್ರಕರಣಕ್ಕೆ ಕೋಮು ಬಣ್ಣ ಬಳೆಯಲು ಯತ್ನಿಸಿದ ಬಿಜೆಪಿ, ಕಾಂಗ್ರೆಸ್ ಸರ್ಕಾರ ವಿರುದ್ಧ ಹರಿಹಾಯ್ದಿದೆ. ಜೋರಾದ ಧ್ವನಿಯಲ್ಲಿ ಹಾಡು ಹಾಕಿದ್ದಕ್ಕೆ ಗಲಾಟೆ ನಡೆದಿದ್ದನು. ಯುವಕ ಪೂಜೆ ಮಾಡುವ ಸಮಯದಲ್ಲಿ ಹನುಮಾನ ಚಾಲೀಸ್‌ ಹಾಕಿದ್ದಕ್ಕೆ ಮತಾಂಧರ ಗುಂಪೊಂದು ಯುವಕನ ಮೇಲೆ ಹಲ್ಲೆ ಮಾಡಿದೆ ಎಂದು ಪ್ರಕರಣವನ್ನು ತಿರುಚಿದೆ.

ಅಲ್ಲದೇ, ಸ್ಥಳಕ್ಕೆ ಭೇಟಿ ನೀಡಿದ ಸಂಸದ ತೇಜಸ್ವಿ ಸೂರ್ಯ, ಚಿಕ್ಕಪೇಟೆಯಲ್ಲಿ ಎಲ್ಲ ಕಡೆಯೂ ಹನುಮಾನ್ ಚಾಲೀಸಾ ಮತ್ತು ಹನುಮ ಧ್ವಜ ಹಾಕುವಂತೆ ಕರೆ ನೀಡಿ ಕೋಮು ಧ್ವೇಷ ಹರಡಲು ಯತ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...