ಬೆಂಗಳೂರು | ಮಾರ್ಚ್ ತಿಂಗಳ ನಂತರ ಅತಿ ಕಡಿಮೆ ತಾಪಮಾನ ದಾಖಲು

Date:

Advertisements

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿತ್ತು. ಬಿಸಿಲಿನ ತಾಪಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನ ಜನ ಬೇಸತ್ತಿದ್ದರು. ಕಳೆದ ಎರಡು ದಿನಗಳಿಂದ ನಗರದಲ್ಲಿ ಸಾಯಂಕಾಲ ವೇಳೆ ಮಳೆಯಾಗುತ್ತಿದೆ. ಸುಮಾರು ಎರಡು ತಿಂಗಳ ಕಾಲ ವಿಪರೀತ ಬಿಸಿಲಿನ ವಾತಾವರಣಕ್ಕೆ ಬೇಸತ್ತಿದ್ದ ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಜತೆಗೆ, ಬೆಂಗಳೂರಿನಲ್ಲಿ ಮಾರ್ಚ್‌ನಿಂದ ಕನಿಷ್ಠ ತಾಪಮಾನ ದಾಖಲಾಗಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ಪ್ರಕಾರ, “ಶುಕ್ರವಾರ ನಗರದಲ್ಲಿ ಗರಿಷ್ಠ ತಾಪಮಾನ 31.9 ಡಿಗ್ರಿ ಸೆಲ್ಸಿಯಸ್‌ನಲ್ಲಿದೆ. ಫೆಬ್ರುವರಿಯಲ್ಲಿ ಕೇವಲ ಒಂದೆರಡು ದಿನ ಮಾತ್ರ ತಾಪಮಾನ ಕಡಿಮೆಯಾಗಿತ್ತು. ತೀವ್ರವಾದ ಬಿಸಿ ವಾತಾವರಣದ ದೀರ್ಘಾವಧಿಯ ನಂತರ ಶುಕ್ರವಾರ ಗರಿಷ್ಠ 31.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿಗೆ ಮೇ ತಿಂಗಳ ಸರಾಸರಿಗಿಂತ 1.3 ಡಿಗ್ರಿ ಕಡಿಮೆಯಾಗಿದೆ” ಎಂದು ತಿಳಿಸಿದೆ.

“ಏಪ್ರಿಲ್‌ನಲ್ಲಿ ಮಳೆಯ ಕೊರತೆಯಿಂದ ಬೆಂಗಳೂರು ಅಧಿಕ ತಾಪಮಾನ ಅನುಭವಿಸಿತು. ಮಾರ್ಚ್‌ 22ರಂದು ಗರಿಷ್ಠ ತಾಪಮಾನ 32.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಏಪ್ರಿಲ್‌ನಲ್ಲಿ ದಾಖಲಿಸಿದ ಅತ್ಯಂತ ಕಡಿಮೆ ತಾಪಮಾನ ಎಂದರೆ ಅದು 34 ಡಿಗ್ರಿ ಸೆಲ್ಸಿಯಸ್ ಆಗಿದೆ ”ಎಂದು ಐಎಂಡಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

Advertisements

“ಮಳೆಯು ತಾಪಮಾನ ತಣ್ಣಗಾಗಲು ಸಹಾಯ ಮಾಡಿದೆ. ಮುಂದಿನ ವಾರದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ” ಎಂದು ಐಎಂಡಿ ವಿಜ್ಞಾನ ಮತ್ತು ನಿರ್ದೇಶಕ ಸಿಎಸ್ ಪಾಟೀಲ್ ಅವರು ಮುನ್ಸೂಚನೆಯನ್ನು ನೀಡಿದ್ದಾರೆ.

“ಈ ಮೇ ತಿಂಗಳಲ್ಲಿ ನಗರವು ಸಾಮಾನ್ಯ ಮಳೆಯನ್ನು ಪಡೆಯುತ್ತದೆ ಎಂದು ನಮಗೆ ವಿಶ್ವಾಸವಿದೆ. ನಿರೀಕ್ಷೆಯಂತೆ ಮಳೆ ಬಂದರೆ ತಾಪಮಾನ ಕಡಿಮೆಯಾಗಲಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೇ ತಿಂಗಳಲ್ಲಿ 128.7 ಮಿಮೀ ಮಳೆಯಾಗುತ್ತದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಒಂಟಿ ಮಹಿಳೆಯ ಕೊಲೆಗೈದು ಚಿನ್ನದ ಸರ ಕಳವು: ದೂರು ದಾಖಲು

ಮೇ ತಿಂಗಳಲ್ಲಿ ಆರಂಭವಾದ ಮಳೆಯಿಂದಾಗಿ ತಾಪಮಾನವು ಗಮನಾರ್ಹವಾಗಿ ಕುಸಿತ ಕಂಡಿದೆ. ಮೇ 1ರಂದು 38.1 ಡಿಗ್ರಿ ಸೆಲ್ಸಿಯಸ್‌ನಿಂದ 10 ದಿನಗಳ ಅಂತರದಲ್ಲಿ 31.9 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.

ನಗರದಲ್ಲಿ ಮೇ 14ರವರೆಗೆ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯು ಹೆಚ್ಚಾಗಿ ಸಂಜೆ ಅಥವಾ ರಾತ್ರಿಯಲ್ಲಿ ಸಂಭವಿಸುತ್ತದೆ. ಮುಂದಿನ ಎರಡು ದಿನಗಳಲ್ಲಿ ತಾಪಮಾನವು ಕ್ರಮವಾಗಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರುತ್ತದೆ.

ಮೂಲ : ಡೆಕ್ಕನ್ ಹೆರಾಲ್ಡ್‌

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X