ಬೆಂಗಳೂರು | ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ ಮಹಿಳೆಯ ಮಾಂಗಲ್ಯ ಸರ ಕಳ್ಳತನ

Date:

Advertisements

ಎದೆನೋವು ಎಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ ಮಹಿಳೆಯ ಮಾಂಗಲ್ಯ ಸರ ಕಳ್ಳತನವಾದ ಘಟನೆ ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ನಡೆದಿದೆ.

ರಾಧಾ ಎಂಬ ಮಹಿಳೆಯ ಮಾಂಗಲ್ಯ ಸರ್ ಕಳ್ಳತನವಾಗಿದೆ. ಫೆಬ್ರವರಿ 8 ರಂದು ಮಹಿಳೆಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ, ಮೂಡಲಪಾಳ್ಯದಲ್ಲಿರುವ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ. ಈ ವೇಳೆ, ಇಸಿಜಿ ಮಾಡಬೇಕಾದಾಗ ನರ್ಸ್‌ ಅಕ್ಷತಾ ಎಂಬುವವರು ಮಾಂಗಲ್ಯ ಸರವನ್ನು ತೆಗೆಯಲು ಹೇಳಿದ್ದಾರೆ.

ರಾಧಾ ಮಾಂಗಲ್ಯ ಸರ ತೆಗೆದ ಬಳಿಕ ತಮ್ಮ ಪತಿಗೆ ಆ ಮಾಂಗಲ್ಯ ಸರವನ್ನು ಕೊಡಲು ನರ್ಸ್‌ಗೆ ಹೇಳಿದ್ದಾರೆ. ನರ್ಸ್‌ ಅಲ್ಲೇ ದಿಂಬಿನ ಕೆಳಗೆ ಇಡಿ ಎಂದು ಸೂಚಿಸಿದ್ದಾರೆ.

Advertisements

ನರ್ಸ್‌ ಹೇಳಿದಂತೆ ರಾಧಾ ತನ್ನ ಮಾಂಗಲ್ಯ ಸರವನ್ನು ದಿಂಬಿನ ಕೆಳಗಡೆ ಇಟ್ಟು ಇಸಿಜಿ ಮಾಡಿಸಿಕೊಂಡಿದ್ದಾರೆ. ಬಳಿಕ, ಸರವನ್ನು ಮರೆತು ಹೋಗಿದ್ದಾರೆ. ಮನೆಗೆ ತೆರಳಿದ ರಾಧಾ ಸರವನ್ನು ಮರೆತು ರಾತ್ರಿ ನಿದ್ದೆ ಮಾಡಿದ್ದಾರೆ.

ಬಳಿಕ, ಮರುದಿನ ಸ್ನಾನಕ್ಕೆ ಹೋದಾಗ ಮಹಿಳೆಗೆ ಸರದ ಬಗ್ಗೆ ಅರಿವಾಗಿದೆ. ಕೂಡಲೇ ನೆನಪು ಮಾಡಿಕೊಂಡು ಆಸ್ಪತ್ರೆಗೆ ಹೋಗಿ ವಿಚಾರಿಸಿದಾಗ ಆಸ್ಪತ್ರೆ ಸಿಬ್ಬಂದಿ ಸರಿಯಾಗಿ ಉತ್ತರಿಸಿಲ್ಲ.

ಈ ವೇಳೆ, ಸಿಸಿಟಿವಿ ಪರಿಶೀಲನೆ ಮಾಡಿದಾಗ ನರ್ಸ್ ಒಬ್ಬರು ಸರವನ್ನು ಯಾರಿಗೂ ಗೊತ್ತಾಗದಂತೆ ಹಿಡಿದುಕೊಂಡು ಹೋಗುತ್ತಿರುವುದು ಅನುಮಾನ ಹುಟ್ಟು ಹಾಕಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ; ಕೆ.ಆರ್ ಪುರದಲ್ಲಿ 15 ದಿನಕ್ಕೊಮ್ಮೆ ಕಾವೇರಿ ನೀರು

ಸಿಸಿಟಿವಿ ದೃಶ್ಯಗಳೊಂದಿಗೆ ಗೋವಿಂದರಾಜ್ ನಗರ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಮಾಂಗಲ್ಯ ಸರದ ಕಳ್ಳತನದ ಹಿಂದೆ ಆಸ್ಪತ್ರೆ ಸಿಬ್ಬಂದಿ ಕೈವಾಡ ಇರುವ ಬಗ್ಗೆ ಮಹಿಳೆ ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X