ಬೆಂಗಳೂರು | ಜುಲೈ ವೇಳೆಗೆ ನಾಗಸಂದ್ರದಿಂದ ಮಾದಾವರದವರೆಗೆ ಮೆಟ್ರೋ ಸಂಚಾರ ಸಾಧ್ಯತೆ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆಗೆ ನಮ್ಮ ಮೆಟ್ರೋ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಬೆಂಗಳೂರಿನ ನಾಲ್ಕು ದಿಕ್ಕೂಗಳಿಗೂ ಮೆಟ್ರೋ ಸಂಚಾರ ಲಭ್ಯವಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಮೆಟ್ರೋ ವ್ಯಾಪ್ತಿಯನ್ನು ವಿಸ್ತರಣೆ ಮಾಡುತ್ತಿದ್ದು, ನಾಗಸಂದ್ರದಿಂದ ಮಾದಾವರದವರೆಗೆ 3.3 ಕಿ.ಮೀ ಉದ್ದದ ಹಸಿರು ಮಾರ್ಗದ ಮೆಟ್ರೊ ಜುಲೈ ವೇಳೆಗೆ ಸಾರ್ವಜನಿಕ ಕಾರ್ಯಾಚರಣೆಗೆ ಮುಕ್ತವಾಗುವ ಸಾಧ್ಯತೆಯಿದೆ.

ನಾಗಸಂದ್ರದಿಂದ ಮಾದಾವರದವರೆಗೆ 3.3 ಕಿ.ಮೀ ಉದ್ದದ ಹಸಿರು ಮಾರ್ಗದ ಮೆಟ್ರೊ ಜುಲೈ ವೇಳೆಗೆ ಸಾರ್ವಜನಿಕ ಕಾರ್ಯಾಚರಣೆಗೆ ಮುಕ್ತವಾಗುವ ಸಾಧ್ಯತೆಯಿದ್ದು, ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

₹298 ಕೋಟಿ ವೆಚ್ಚದ ಮೆಟ್ರೋ ಮಾರ್ಗವು ನಾಗಸಂದ್ರದ ಆಚೆಗೆ ಮಂಜುನಾಥ್ ನಗರ, ಚಿಕ್ಕಬಿದರಕಲ್ಲು ಹಾಗೂ ಮಾದಾವರ ನಿಲ್ದಾಣಗಳನ್ನು ಒಳಗೊಂಡಿದೆ.

Advertisements

ನಾಗಸಂದ್ರದಿಂದ ಮಾದಾವರವರೆಗಿನ (ಬಿಐಇಸಿ) ರೀಚ್–3 ಕಾಮಗಾರಿಗೆ 2017ರ ಮೇ ತಿಂಗಳಲ್ಲಿ ಚಾಲನೆ ನೀಡಲಾಗಿತ್ತು. ಭೂಸ್ವಾಧೀನ ಮತ್ತು ಕಾಮಗಾರಿಗೆ ₹964 ಕೋಟಿ ಮೀಸಲಿಡಲಾಗಿತ್ತು. ಭೂಸ್ವಾಧೀನ ಪ್ರಕ್ರಿಯೆ ಕಗ್ಗಂಟಾಗಿ ಪರಿಣಮಿಸಿತ್ತು. ಹೈಕೋರ್ಟ್‌ನಲ್ಲಿ ವ್ಯಾಜ್ಯ ಇತ್ಯರ್ಥವಾಗಲು ಸುಮಾರು ನಾಲ್ಕು ವರ್ಷಗಳು ಬೇಕಾದವು. ಆನಂತರ ಕಾಮಗಾರಿ ಚುರುಕುಗೊಂಡಿತು. ಮಂಜುನಾಥನಗರ, ಚಿಕ್ಕಬಿದರಕಲ್ಲು (ಜಿಂದಾಲ್) ಮೆಟ್ರೊ ನಿಲ್ದಾಣಗಳ ಕಾಮಗಾರಿ ಮುಕ್ತಾಯಗೊಂಡಿವೆ.

ತುಮಕೂರು ರಸ್ತೆಯಲ್ಲಿ ವಿಪರೀತ ವಾಹನ ದಟ್ಟಣೆ ಉಂಟಾಗಿದೆ. ನೆಲಮಂಗಲ ಕಡೆಯಿಂದ ಪೀಣ್ಯ ಕೈಗಾರಿಕಾ ವಲಯ ಸಹಿತ ಬೆಂಗಳೂರಿನ ನಾನಾ ಕಡೆಗೆ ಬರುವ ಕಾರ್ಮಿಕರು, ಉದ್ಯೋಗಿಗಳು ನಾಗಸಂದ್ರದವರೆಗೆ ಬಂದು ಮೆಟ್ರೊ ರೈಲು ಹತ್ತುತ್ತಿದ್ದಾರೆ. ಮಾದಾವರವರೆಗೆ ಮೆಟ್ರೊ ಪ್ರಾರಂಭವಾದರೆ, 3 ಕಿ.ಮೀ. ಮೊದಲೇ ಮೆಟ್ರೊ ಸೇವೆ ಅವರಿಗೆ ಲಭ್ಯವಾಗಲಿದೆ. ವಾಹನ ದಟ್ಟಣೆ ಕಡಿಮೆಯಾಗಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜ.16ರಿಂದ 19ರ ವರೆಗೆ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್

“ಈಗಾಗಲೇ, ಮೆಟ್ರೋ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಸದ್ಯಕ್ಕೀಗ ಪ್ರಕ್ರಿಯೆಯಲ್ಲಿ ಪೂರ್ಣಗೊಳಿಸುವ ಕೆಲಸ ಮಾತ್ರ ಬಾಕಿಯಿವೆ. ಇನ್ನು ಟ್ರ್ಯಾಕ್ ಹಾಕುವ ಕಾಮಗಾರಿ ಪೂರ್ಣಗೊಳ್ಳಲು 2.5 ತಿಂಗಳು ಬೇಕಾಗಲಿದೆ. ಮೆಟ್ರೋ ರೈಲು ಸುರಕ್ಷತಾ ಆಯುಕ್ತರಿಂದ ರೈಲುಗಳ ಪ್ರಾಯೋಗಿಕ ಓಡಾಟ ನಡೆಯಲಿದ್ದು, ಜುಲೈ ವೇಳೆಗೆ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ” ಎಂದು ಬಿಎಂಆರ್‌ಸಿಎಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X