ಬೆಂಗಳೂರು | ರೋಬೋಟಿಕ್ ತಂತ್ರಜ್ಞಾನದ ಮೂಲಕ ಜಲಮಂಡಳಿ ಕೊಳವೆ ಬಾವಿಗಳ ನಿರ್ವಹಣೆಗೆ ಸೂಚನೆ: ಜಲಮಂಡಳಿ ಅಧ್ಯಕ್ಷ

Date:

Advertisements
  • ಯುದ್ದೋಪಾದಿಯಲ್ಲಿ ಕೊಳವೆ ಬಾವಿಗಳ ದುರಸ್ತಿ ಕಾರ್ಯ ಮುಗಿಸಿಸಲು ಸೂಚನೆ
  • ಬತ್ತಿಹೋಗಿರುವ ಕೊಳವೆ ಬಾವಿಗಳನ್ನು ಸಾಮೂಹಿಕ ಮಳೆ ನೀರು ಮರುಪುರಣಕ್ಕೆ ಬಳಸಲು ಸೂಚನೆ

“ಜಲಮಂಡಳಿಯ ಕೊಳವೆ ಬಾವಿಗಳ ಸಮರ್ಪಕ ನಿರ್ವಹಣೆಗಾಗಿ ಆಧುನಿಕ ರೋಬೋಟಿಕ್‌ ತಂತ್ರಜ್ಞಾನ ಅಳವಡಿಸಿಕೊಳ್ಳಿ” ಎಂದು  ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾರ್ಚ್‌ 19ರಂದು ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಬೆಂಗಳೂರು ಕೊಳವೆಬಾವಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಜತೆಗೆ ಸಭೆ ನಡೆಸಿ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.

ಮುಂದುವರೆದು ಮಾತನಾಡಿದ ಅವರು, “ನಗರದಲ್ಲಿ ಜಲಮಂಡಳಿಯ 11 ಸಾವಿರಕ್ಕೂ ಹೆಚ್ಚು ಕೊಳವೆ ಬಾವಿಗಳಿವೆ. ಇವುಗಳಲ್ಲಿ ಹಲವು ಕೊಳವೆ ಬಾವಿಗಳು ಸಮರ್ಪಕ ನಿರ್ವಹಣೆ ಇಲ್ಲದೆ ಬತ್ತಿ ಹೋಗಿವೆ. ಕೆಲವು ತಾಂತ್ರಿಕ ಕಾರಣದಿಂದಾಗಿ ಬಳಸಲಾಗುತ್ತಿಲ್ಲ. ಅಸಮರ್ಪಕ ನಿರ್ವಹಣೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕೊಳವೆ ಬಾವಿಯ ಪಂಪ್‌ ಸೆಟ್‌ಗಳನ್ನ ಹೆಚ್ಚಿನ ಸಮಯ ಬಳಸುವುದು. ನೀರು ಇಲ್ಲದೇ ಮೋಟಾರ್‌ ಓಡಿಸುವುದರಿಂದ ಬಹಳಷ್ಟು ತಾಂತ್ರಿಕ ಸಮಸ್ಯೆ ಆಗುತ್ತಿದೆ. ಇವುಗಳನ್ನ ಸರಿಯಾದ ಸಮಯದಲ್ಲಿ ರಿಪೇರಿ ಮಾಡುವುದು ಸಾಧ್ಯವಾಗುತ್ತಿಲ್ಲ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಧುನಿಕ ರೋಬೋಟಿಕ್‌ ತಂತ್ರಜ್ಞಾನ ಬಳಸಬೇಕು” ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisements

“ಈ ಆಧುನಿಕ ತಂತ್ರಜ್ಞಾನದಿಂದ ಪಂಪ್‌ಸೆಟ್‌ಗಳ ಮಾಹಿತಿ, ನೀರಿನ ಹರಿವಿನ ಮಾಹಿತಿ, ದುರಸ್ಥಿಯ ಮಾಹಿತಿ ಸೇರಿದಂತೆ ಆಟೋಮ್ಯಾಟಿಕ್‌ ಆಗಿ ಸ್ವಿಚ್‌ ಆನ್‌ ಮತ್ತು ಸ್ವಿಚ್‌ ಆಫ್‌ ಮಾಡುವುದು ಸಾಧ್ಯವಾಗುತ್ತದೆ. ಜಲಮಂಡಳಿಗೆ ಮಾಹಿತಿ ದೊರೆಯುವುದಲ್ಲದೇ ನೀರಿಲ್ಲದೇ ಇದ್ದಾಗ ಮೋಟಾರ್‌ ಸ್ವಯಂ ಚಾಲಿತವಾಗಿ ಆಫ್‌ ಆಗುವಂತೆಯೂ ಮಾಡಬಹುದಾಗಿದೆ. ಇದರಿಂದ ಆಗಾಗ್ಗೆ ದುರಸ್ಥಿಗೆ ಬರುವುದು ತಪ್ಪುವುದಲ್ಲದೇ ಸಾರ್ವಜನಿಕರಿಗೂ ತೊಂದರೆ ಆಗುವುದು ಕಡಿಮೆಯಾಗುತ್ತದೆ” ಎಂದು ಹೇಳಿದರು.

“‍ಅಂತರ್ಜಲ ಕುಸಿತ ಆಗಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರು ಕುಸಿಯುತ್ತಿದೆ. ಈ ಕೊಳವೆ ಬಾವಿಗಳನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಆಗಬೇಕಾದ ಕಾರ್ಯಗಳು, ಅವುಗಳಲ್ಲಿನ ನೀರಿನ ಲಭ್ಯತೆ, ರಿಪೇರಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು ಅಗತ್ಯವಿದೆ. ಇದಕ್ಕಾಗಿ ನಗರದಲ್ಲಿ ಇರುವಂತಹ ಜಲಮಂಡಳಿಯ ಕೊಳವೆ ಬಾವಿಗಳ ಸಮೀಕ್ಷೆ ಮಾಡುವುದು ಅಗತ್ಯವಿದೆ. ಇದಕ್ಕಾಗಿ ಜಲಮಂಡಳಿಯ ಪರವಾನಗಿ ಹೊಂದಿರುವ ಬೆಂಗಳೂರು ಕೊಳವೆ ಬಾವಿ ಗುತ್ತಿಗೆದಾರ ಸಂಘದವರು ಅಧಿಕಾರಿಗಳೊಂದಿಗೆ ಜಂಟಿಯಾಗಿ ತಮ್ಮ ವ್ಯಾಪ್ತಿಯಲ್ಲಿ ಇರುವ ಕೊಳವೆ ಬಾವಿಗಳ ಮಾಹಿತಿಯನ್ನು ಕ್ರೋಢೀಕರಿಸಿ ನೀಡಬೇಕು” ಎಂದು ಸೂಚನೆ ನೀಡಿದರು.

ಯುದ್ದೋಪಾದಿಯಲ್ಲಿ ಕೊಳವೆ ಬಾವಿಗಳ ರಿಪೇರಿ ಮಾಡಿ

ರಿವೈಂಡಿಗ್‌ ಸೇರಿದಂತೆ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಯಿಂದ ಸ್ಥಬ್ದವಾಗಿರುವ ಕೊಳವೆ ಬಾವಿಗಳನ್ನು ರಿಪೇರಿ ಮಾಡಿ ಅದನ್ನು ಸುಸ್ಥಿತಿಗೆ ತರುವುದು ಮೊದಲ ಆದ್ಯತೆ ಆಗಬೇಕಾಗಿದೆ. ಇದಕ್ಕೆ ಇರುವ ಕೆಲವು ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸುವಂತೆ ಗುತ್ತಿಗೆದಾರರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಲಮಂಡಳಿ ಆಯುಕ್ತರು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೆಳ್ಳಂದೂರಿನ ಪ್ರಕ್ರಿಯಾ ಶಾಲಾ ಆವರಣದಲ್ಲಿ ಸ್ಫೋಟಕಗಳು ಪತ್ತೆ; ಆತಂಕ ಸೃಷ್ಟಿ

ಬತ್ತಿಹೋಗಿರುವ ಕೊಳವೆ ಬಾವಿಗಳನ್ನ ಸಾಮೂಹಿಕ ಮಳೆ ನೀರು ಮರುಪುರಣಕ್ಕೆ ಬಳಸಲು ಸೂಚನೆ

ನಗರದಲ್ಲಿ ಬೀಳುವ ಮಳೆಯನ್ನು ಸರಿಯಾದ ರೀತಿಯಲ್ಲಿ ಮರುಪೂರಣ ಆಗುವಂತೆ ಮಾಡುವ ನಿಟ್ಟಿನಲ್ಲಿ ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಉಪಯೋಗಿಸಬಹುದಾಗಿದೆ. ಬತ್ತಿ ಹೋಗಿರುವ ಹಾಗೂ ಅವುಗಳನ್ನು ಮತ್ತೆ ಸರಿಪಡಿಸಲು ಸಾಧ್ಯ ಆಗದೆ ಇರುವ ಕೊಳವೆ ಬಾವಿಗಳನ್ನು ಮಳೆ ನೀರು ಇಂಗು ಗುಂಡಿ ಆಗಿ ಬಳಸಲು, ಅದಕ್ಕೆ ಅಕ್ಕಪಕ್ಕದ ಮನೆಗಳಿಂದ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಸಲು ಅಗತ್ಯ ಯೋಜನೆ ರೂಪಿಸುವಂತೆ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಂಡಳಿಯ ಎಂಜನಿಯರ್ ಇನ್ ಚೀಫ್ ಸುರೇಶ, ಚೀಪ್ ಎಂಜನಿಯರ್ ಜಯಪ್ರಕಾಶ, ಬೆಂಗಳೂರು ಕೊಳವೆಬಾವಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಯಣ್ಣ ಸೇರಿದಂತೆ ಇನ್ನಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X