ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ; ಮನೆಗೆ ಬರಲಿದೆ ನೋಟಿಸ್ ಜತೆಗೆ ಕ್ಯೂಆರ್‌ ಕೋಡ್‌

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇವೆ. ಜತೆಗೆ, ನಿಯಮ ಉಲ್ಲಂಘನೆ ಮಾಡಿ ದಂಡ ಪಾವತಿ ಮಾಡದೇ ಹಲವು ವಾಹನ ಮಾಲೀಕರು ಸುತ್ತಾಡುತ್ತಿದ್ದಾರೆ. ಇದೀಗ, ಅವರಿಗೆ ಬಿಸಿ ಮುಟ್ಟಿಸುವ ಸಲುವಾಗಿ ಬೆಂಗಳೂರು ಸಂಚಾರ ಪೊಲೀಸರು ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದ್ದಾರೆ.

ಹೌದು, ಸಂಚಾರ ನಿಯಮ ಉಲ್ಲಂಘನೆ ಮಾಡಿದವರ ಮನೆಗೆ ಇಷ್ಟು ದಿನ ಸಂಚಾರ ಪೊಲೀಸರು ತೆರಳಿ ದಂಡ ಪಾವತಿ ಮಾಡಿಸಿಕೊಳ್ಳುತ್ತಿದ್ದರು. ಇಲ್ಲವೇ ನೋಟಿಸ್‌ ನೀಡುತ್ತಿದ್ದರು. ಇನ್ನು ಮುಂದೆ ನೋಟಿಸ್ ಜತೆಗೆ ಕ್ಯೂ ಆರ್ ಕೋಡ್ ಕೂಡ ಮನೆ ಬಾಗಿಲಿಗೆ ಬರಲಿದೆ.

ಬೆಂಗಳೂರು ನಗರ ಸಂಚಾರ ವಿಭಾಗದಲ್ಲಿ ಸಂಪರ್ಕ ರಹಿತ ನಿಯಮ ಜಾರಿಯಡಿಯಲ್ಲಿ ದಾಖಲು ಮಾಡುವ ನಿಯಮ ಉಲ್ಲಂಘನಾ ಪ್ರಕರಣಗಳಿಗೆ ಆಟೋಮೇಷನ್ ಸೆಂಟರ್ ವಿಭಾಗದಿಂದ ನಿಯಮ ಉಲ್ಲಂಘನೆ ಮಾಡುವ ವಾಹನಗಳ ಮಾಲೀಕರಿಗೆ, ಕಲಂ 133 ಮೋಟಾರು ವಾಹನ ಕಾಯ್ದೆ ರೀತ್ಯಾ ನೊಟೀಸ್‌ ಮುದ್ರಿಸಿ ಅಂಚೆ ಮುಖಾಂತರ ಕಳುಹಿಸಲಾಗುತ್ತಿದೆ.

Advertisements

ಮಾರ್ಚ್‌ 1 ರಿಂದ ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳ ಮಾಲೀಕರಿಗೆ ಕಳುಹಿಸುವ 133 ನೋಟೀಸ್‌ನ ಬಲಭಾಗದಲ್ಲಿ ಕ್ಯೂ ಆರ್ ಕೋಡನ್ನು ಸಹ ಮುದ್ರಿಸಿ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಕ್ಯೂಆರ್ ಕೋಡ್‌ ಮುಖಾಂತರ ನಿಯಮ ಉಲ್ಲಂಘನೆಯ ವಿಧ. ಉಲ್ಲಂಘನೆಯ ಸ್ಥಳ, ದಿನಾಂಕ, ಸಮಯ, ದಂಡದ ಮೊತ್ತದ ವಿವರಗಳ ಜತೆಗೆ ಬಹು ಮುಖ್ಯವಾಗಿ ಉಲ್ಲಂಘನೆಯ ಸಾಕ್ಷ್ಯಾಧಾರಿತ ಛಾಯಾಚಿತ್ರವನ್ನೂ ಸಹಾ ನೋಡಬಹುದಾಗಿದೆ.

ಉಲ್ಲಂಘನೆಯ ದಂಡದ ಮೊತ್ತವನ್ನು ಆನ್‌ಲೈನ್‌ನಲ್ಲಿ ಪಾವತಿಸಲು ಸಾರ್ವಜನಿಕರಿಗೆ ಅನುವು ಮಾಡಿಕೊಡಲು ಆದೇ ಕ್ಯೂ ಆರ್ ಕೋಡ್‌ನಲ್ಲಿ ಪಾವತಿಯ ಲಿಂಕನ್ನೂ ಸಹ ಒದಗಿಸಲಾಗಿದೆ.

“ನಿಯಮ ಉಲ್ಲಂಘನೆಗಳಿಗೆ ಸಂಬಂಧಪಟ್ಟ ಯಾವುದೇ ಬಗ್ಗೆ ದೂರು/ವಿವಾದಗಳಿದ್ದಲ್ಲಿ btp.gov.inಗೆ ಲಾಗಿನ್ ಆಗುವ ಮೂಲಕ ಅಥವಾ ಕೆಎಸ್‌ಪಿ ಆಪ್‌ ಅನ್ನು ಪ್ಲೇಸ್ಟೋರ್‌ನಿಂದ ಡೌನ್‌ ಲೋಡ್ ಮಾಡಿಕೊಂಡು, ಉಲ್ಲಂಘನೆಯ ವಿವರಗಳನ್ನು ವೀಕ್ಷಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಅಥವಾ ದಂಡ ಪಾವತಿಸಬಹುದಾಗಿದೆ” ಎಂದು ಹೇಳಿದೆ.

“2021ರ ನಂತರದ ನಿಯಮ ಉಲ್ಲಂಘನೆಗಳಿಗೆ ಮಾತ್ರ ಸಾಕ್ಷ್ಯಾಧಾರಿತ ಛಾಯಾಚಿತ್ರಗಳು ಲಭ್ಯವಿದೆ” ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

Download Eedina App Android / iOS

X