ಬೆಂಗಳೂರು | ತೆರವು ವೇಳೆ ಜೆಸಿಬಿಗೆ ಬೆಂಕಿ ಹಚ್ಚಿದ ಒತ್ತುವರಿದಾರ

Date:

Advertisements

ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಗೆ ವ್ಯಕ್ತಿಯೋರ್ವ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಉತ್ತರದ ಹೆಸರಘಟ್ಟ ಹೋಬಳಿಯ ಶಿವಕೋಟೆ ಗ್ರಾಮದಲ್ಲಿ ನಡೆದಿದೆ.

ಬಚ್ಚೇಗೌಡ ಜೆಸಿಬಿಗೆ ಬೆಂಕಿ ಹಚ್ಚಿದ ವ್ಯಕ್ತಿ. ಶಿವಕೋಟೆ ಗ್ರಾಮದ ನಿವಾಸಿ. ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಒತ್ತುವರಿ ಮಾಡಿದ ಆರೋಪದ ಮೇಲೆ ಶಿವಕೋಟೆ ಗ್ರಾಮ್ ಸರ್ವೆ ನಂ 10/7&8ರಲ್ಲಿ ಬಂಡಿದಾರಿ ಒತ್ತುವರಿ ತೆರುವು ಮಾಡುವಂತೆ ಯಲಹಂಕ ತಹಶೀಲ್ದಾರ್​ಗೆ ಸ್ಥಳೀಯರು ದೂರು ನೀಡಿದ್ದರು.

ಈ ಹಿನ್ನಲೆ ಒತ್ತುವರಿ ತೆರವು ಮಾಡಲು ತಹಶೀಲ್ದಾರ್ ಅಧಿಕಾರಿಗಳನ್ನು ಕಳುಹಿಸಿದ್ದರು. ಆರ್ ಐ ರವಿಕುಮಾರ್ ನೇತೃತ್ವದಲ್ಲಿ ಬಂಡಿದಾರಿ ತೆರವುಗೊಳಿಸುವ ಕಾರ್ಯ ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ನಡೆಯುತ್ತಿತ್ತು. ಒತ್ತುವರಿ ತೆರವುಗೊಳಿಸುವ ಸಂದರ್ಭದಲ್ಲಿ ಒತ್ತುವರಿದಾರ ಸಿ. ಬಚ್ಚೇಗೌಡ ಬಿನ್ ಬಿ. ಚನ್ನರಾಯಪ್ಪ ಮತ್ತು ಮಗ ಚೇತನ್ ಎಂಬುವವರು ಏಕಾಏಕಿ ಪೆಟ್ರೋಲ್ ತುಂಬಿದ ಗಾಜಿನ ಬಾಟಲ್‌ಗಳಿಗೆ ಬೆಂಕಿ ಹಚ್ಚಿ ಜೆಸಿಬಿ ಮೇಲೆ ಸರಣಿ ಬಾಟಲ್‌ಗಳನ್ನು ಎಸೆದಿದ್ದು, ಇದರಿಂದ ಬೆಂಕಿ ಹತ್ತಿಕೊಂಡಿದೆ. ಜೆಸಿಬಿ ಡ್ರೈವರ್ ಸ್ವಲ್ಪದರಲ್ಲಿಯೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisements

ಕೂಡಲೇ ಬಚ್ಚೇಗೌಡನನ್ನು ರಾಜಾನುಕುಂಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳಾದ ಬಚ್ಚೇಗೌಡ ಮತ್ತು ಚೇತನ್ ವಿರುದ್ಧ ದೂರು ದಾಖಲಾಗಿದೆ.

“ಪ್ರಸ್ತಾಪಿತ ಜಮೀನಿನಲ್ಲಿ ಕೃಷಿ ಚಟುವಟಿಕೆಗಳಿಗೆ ಓಡಾಡುವ ಜಾಗವನ್ನು ಒತ್ತುವರಿ ಮಾಡಿದ್ದು, ಒತ್ತುವರಿ ತೆರವು ಕಾರ್ಯದಲ್ಲಿ ತೊಡಗಿದ್ದ ಸರ್ಕಾರಿ ಅಧಿಕಾರಿಗಳ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ಹಾಗಾಗಿ, ಒತ್ತುವರಿದಾರರಾದ ಸಿ. ಬಚ್ಚೇಗೌಡ ಬಿನ್ ಬಿ. ಚೆನ್ನರಾಯಪ್ಪ ಮತ್ತು ಮಗ ಚೇತನ್ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲು ಹಾಗೂ ಎಫ್.ಐ.ಆರ್ ದಾಖಲಿಸುವಂತೆ ಗ್ರಾಮಸ್ಥರು ಕೋರಿದ್ದಾರೆ. ಹಾಗಾಗಿ, ಇವರ ವಿರುದ್ಧ ಕೂಡಲೇ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಬೇಕು” ಎಂದು ಯಲಹಂಕ ತಹಶೀಲ್ದಾರರು ರಾಜಾನುಕುಂಟೆ ಪೊಲೀಸರಿಗೆ ಪತ್ರ ಬರೆದಿದ್ದಾರೆ.

“ಬೆಂಗಳೂರಿನಲ್ಲಿ ಭೂ ಒತ್ತುವರಿದಾರನ ಬಂಧನ. ಕಂದಾಯ ಇಲಾಖೆಯಿಂದ ನಡೆಸಲಾದ ರಸ್ತೆ ಒತ್ತುವರಿ ತೆರವು ಕಾಮಗಾರಿ ತಡೆದು ಜೆಸಿಬಿಗೆ ಬೆಂಕಿ ಹಚ್ಚಿದ ಕಿಡಿಗೇಡಿ ಪೊಲೀಸರ ವಶಕ್ಕೆ. ಇಂತಹ ಬೆದರಿಕೆಗಳಿಗೆ ನಾವು ಬೆದರುವುದಿಲ್ಲ. ನಮ್ಮ ಸಂಕಲ್ಪ ದೃಢವಾಗಿದೆ” ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡರು ಟ್ವೀಟ್‌ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X