ಬೆಂಗಳೂರು | ದೆವ್ವದ ಮುಖವಾಡ ಧರಿಸಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರ ಪೋಷಕರಿಗೆ ₹25 ಸಾವಿರ ದಂಡ

Date:

Advertisements

ಡೆಡ್ಲಿ ವೀಲ್ಹಿಂಗ್ ಮಾಡುತ್ತಿದ್ದ ಯುವಕರ ಪೋಷಕರಿಗೆ ಬೆಂಗಳೂರು ಸಂಚಾರ ಪೊಲೀಸರು ₹25 ಸಾವಿರ ದಂಡವನ್ನು ವಿಧಿಸಿದ್ದಾರೆ.

ದೆವ್ವದ ಮುಖವಾಡ ಧರಿಸಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ ಮೂವರು ಯುವಕರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯದ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಈ ಮೂವರು ರಸ್ತೆಗಳಲ್ಲಿ ದೆವ್ವಗಳ ಮುಖವಾಡ ಧರಿಸಿ ರಸ್ತೆಗಳಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದರು. ಇವರು ʼಡೆವಿಲ್ಸ್ ಆನ್ ರೋಡ್ʼ ಎಂದು ತಮ್ಮನ್ನ ತಾವು ಕರೆದುಕೊಳ್ಳುತ್ತಿದ್ದರು.

Advertisements

ಬೈಕ್‌ಗಳನ್ನ ವಶಕ್ಕೆ ಪಡೆದ ಪೊಲೀಸರು ಅದರ ಬಿಡಿ ಭಾಗಗಳನ್ನು ತೆಗೆದಿದ್ದಾರೆ. ಈಗ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ ವೀಲರ್ಸ್‌ಗಳ ವಿರುದ್ಧ 14 ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಐಎ ಟರ್ಮಿನಲ್ ಆವರಣದಲ್ಲಿಟ್ಟಿದ್ದ ₹3.5 ಲಕ್ಷ ಮೌಲ್ಯದ ವಸ್ತುಗಳು ಕಳವು

ಆರೋಪಿಗಳ ಪ್ರೊಫೈಲ್ ತೆರೆದ ಪೊಲೀಸರು ಅವರ ಚಟುವಟಿಕೆಗಳ ಬಗ್ಗೆ ಗಮನ ಹರಿಸಲು ಸಿದ್ಧತೆ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು, “ನೀವು ದ್ವಿಚಕ್ರ ವಾಹನದ ಒಂದು ಚಕ್ರವನ್ನು ಎತ್ತುವಿರಿ. ನಾವು ನಿಮ್ಮ ದ್ವಿಚಕ್ರ ವಾಹನವನ್ನು 4 ವ್ಹೀಲರ್‌ನಲ್ಲಿ ಟ್ರ್ಯಾಕ್ ಮಾಡುತ್ತೇವೆ. ಉಚಿತ ವ್ಹೀಲರ್‌ಗಳಿಗೆ ನಾವು ಉಚಿತ ಲಿಫ್ಟರ್‌ಗಳು” ಎಂದು ಬರೆದುಕೊಂಡಿದ್ದಾರೆ.

“ದೀಪಾವಳಿ ಹಿಂದಿನ ದಿನ ವ್ಹೀಲಿಂಗ್ ಮಾಡಿ ಅಪಾಯಕ್ಕೆ ಸಿಲುಕಿ ಆರಿ ಹೋಗಬಹುದಾದ ದೀಪಗಳನ್ನು ರಕ್ಷಿಸಿ, ಅವರ ಪೋಷಕರಿಗೆ ಮನೆಯ ನಂದಾ ದೀಪ ಮಾಡಿಕೊಳ್ಳುವಂತೆ ಮಾಡಿ ದೀಪಾವಳಿ ಆಚರಿಸಿದ ನಮ್ಮ ಕಾಮಾಕ್ಷಿಪಾಳ್ಯ ಟ್ರಾಫಿಕ್ ಪಿಎಸ್ ತಂಡಕ್ಕೆ ಅಭಿನಂದನೆಗಳು” ಎಂದು ಬರೆಯಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X