ಬೆಂಗಳೂರು | ಕನ್ನಡ ಹಾಡು ಹಾಕಿದ್ದಕ್ಕೆ ಪಬ್ ಮ್ಯಾನೇಜರ್ ಮೇಲೆ ಹಲ್ಲೆ

Date:

Advertisements

ಪಬ್‌ವೊಂದರಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಪಬ್‌ ಮ್ಯಾನೇಜರ್‌ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅಕ್ಟೋಬರ್ 24ರ ರಾತ್ರಿ ಕೆಂಚನಹಳ್ಳಿ ರಸ್ತೆಯಲ್ಲಿರುವ ಐಡಿಯಲ್ ಹೋಮ್ಸ್ ಬಳಿಯ ಪಬ್​ವೊಂದರಲ್ಲಿ ಈ ಘಟನೆ ನಡೆದಿದೆ. ಪಬ್‌ ಮ್ಯಾನೇಜರ್ ರವಿಕಾಂತ್ ಎಂಬುವವರು ಆರ್​ ಆರ್ ನಗರ ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.

“ಶ್ರೇಯಸ್ ಹಾಗೂ ಆತನ ಸ್ನೇಹಿತರು ಅಕ್ಟೋಬರ್ 24 ರಂದು ರಾತ್ರಿ 10:45ರ ಸುಮಾರಿಗೆ ಐಡಿಯಲ್ ಹೋಮ್ಸ್ ಬಳಿಯ ಪಬ್​ಗೆ ಬಂದಿದ್ದರು. ಈ ವೇಳೆ, ಪಬ್​ನಲ್ಲಿ ಕನ್ನಡ‌ ಹಾಡು ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಕನ್ನಡ ಹಾಡು ಹಾಕಿದ್ದಕ್ಕೆ ಪಬ್‌ನ ಮ್ಯಾನೇಜರ್‌ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಜತೆಗೆ ಅವರ ಜೊತೆಯಲ್ಲಿಯೇ ಇದ್ದ ಮಹಿಳೆಯೊಬ್ಬರ ಸಹಾಯದಿಂದ ಪಬ್‌ನ ಮ್ಯಾನೇಜರ್ ಮೇಲೆ ಹಲ್ಲೆ ಮಾಡಿದ್ದಾರೆ” ಎಂದು ದೂರು ದಾಖಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 3 ದಿನಗಳ ನಂತರ ಬಲೆಗೆ ಬಿದ್ದ ಚಿರತೆ

ಪಬ್ ಮ್ಯಾನೇಜರ್ ರವಿಕಾಂತ್ ನೀಡಿದ ದೂರಿನ ಅನ್ವಯ ಶ್ರೇಯಸ್ ಹಾಗೂ ಆತನ ಸ್ನೇಹಿತನ ವಿರುದ್ಧ ಆರ್.ಆರ್.ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X